ವಿವಿಧ ಚೆಕ್‌ಪೋಸ್ಟ್‌ ತಪಾಸಣೆ ಪರಿಶೀಲಿಸಿದ ಡೀಸಿ


Team Udayavani, Aug 8, 2021, 4:45 PM IST

Check

ಚಾಮರಾಜನಗರ: ಜಿಲ್ಲೆಯಲ್ಲಿ ಜಾರಿಗೊಳಿಸಿರುವ ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ವಿವಿಧ ಭಾಗಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್‌.
ರವಿ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ಗಡಿ ಭಾಗದ ಅರ್ಧನಾರೀಪುರ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಅಲ್ಲಿನ ತಪಾಸಣೆ ಕಾರ್ಯ ವೀಕ್ಷಿಸಿದರು.

ನಗರದ ಭುವನೇಶ್ವರಿ ವೃತ್ತ ಪಟ್ಟಣದ ಇತರೆ ರಸ್ತೆ ಮಾರ್ಗಗಳಲ್ಲಿ ಕರ್ಫ್ಯೂ ಪಾಲನೆ ಮಾಡಲಾಗುತ್ತಿರುವ ಬಗ್ಗೆ ವೀಕ್ಷಿಸಿದರು. ಯಳಂದೂರು ಪಟ್ಟಣದ ಬಸ್‌ ನಿಲ್ದಾಣ, ಇತರೆ ಪ್ರಮುಖವೃತ್ತಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಬಸ್‌ ನಿಲ್ದಾಣದಲ್ಲಿ ಬಸ್‌ ಚಾಲಕರು, ನಿರ್ವಾಹಕರೊಂದಿಗೆ ಮಾತನಾಡಿ, ಯಾವ ಮಾರ್ಗಗಳಲ್ಲಿ ಬಸ್ಸುಗಳು ಸಂಚರಿಸುತ್ತಿವೆ? ಎಷ್ಟು ಬಸ್‌ಗಳು ಕಾರ್ಯಾಚರಣೆಯಲ್ಲಿವೆ ಎಂಬ ಬಗ್ಗೆ ಮಾಹಿತಿ ಪಡೆದುಕೊಂಡರು. ಕೊಳ್ಳೇಗಾಲ ಪಟ್ಟಣದಲ್ಲಿಯೂ ಕರ್ಫ್ಯೂ ಪಾಲನೆ ಬಗ್ಗೆ ಪರಿಶೀಲಿಸಿದರು.

ಕರ್ಫ್ಯೂ ಅವಧಿಯಲ್ಲಿ ಅನುಸರಿಸಬೇಕಿರುವ ಕ್ರಮಗಳನ್ನುಉಲ್ಲಂಘಿಸದಂತೆ ಎಚ್ಚರವಹಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು. ಹನೂರು ಭಾಗದ ಗಡಿಯಲ್ಲಿರುವ ಅರ್ಧನಾರೀಪುರ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಎಷ್ಟು ವಾಹನಗಳು ಚೆಕ್‌ ಪೋಸ್ಟ್‌ ಮೂಲಕ ಸಂಚರಿಸುತ್ತಿವೆ? ಯಾವ ಯಾವ ಬಗೆಯ ವಾಹನಗಳು ಹಾದು ಹೋಗುತ್ತಿವೆ ಎಂಬ ಸಂಪೂರ್ಣ ವಿವರವನ್ನು ದಾಖಲು ಮಾಡಿಕೊಳ್ಳ ಬೇಕು ಎಂದರು.

ಈ ವೇಳೆ ಎಸಿ ಡಾ. ಗಿರೀಶ್‌ ದಿಲೀಪ್‌ಬಡೋಲೆ,ಜಿಲ್ಲಾಆರೋಗ್ಯಮತ್ತು ಕುಟುಂಬಕಲ್ಯಾಣಾಧಿಕಾರಿ ಡಾ. ಎಂ.ಸಿ.ರವಿ, ಕೆ. ಇಬ್ರಾಹಿಂ, ತಹಶೀಲ್ದಾರರಾದ ಕೆ. ಕುನಾಲ್‌, ನಾಗರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

2 ಡೋಸ್‌ಲಸಿಕೆ ಪಡೆದಿದ್ದರೂ ನೆಗೆಟಿವ್‌ ವರದಿ ಕಡ್ಡಾಯ ತಮಿಳುನಾಡಿನಿಂದ ಚಾ.ನಗರ ಜಿಲ್ಲೆಗೆ ಪ್ರವೇಶಿಸುವರು 2 ಡೋಸ್‌ ಕೋವಿಡ್‌ ಲಸಿಕೆ
ಪಡೆದಿದ್ದರೂ ಸಹ 72 ಗಂಟೆಯ ಒಳಗೆ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸಿದ ನೆಗೆಟಿವ್‌ ವರದಿ ಇರುವ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಈ ಬಗ್ಗೆ ಆದೇಶ ಹೊರಡಿಸಲಾಗಿದೆ. ಈ ಆದೇಶ ಕಟ್ಟುನಿಟ್ಟಾಗಿ ಪಾಲಿಸಬೇಕು. ನೆಗೆಟಿವ್‌ ವರದಿ ಪ್ರಮಾಣಪತ್ರ ನೀಡದಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ವಾಪಸ್ಸುಕಳುಹಿಸಬೇಕೆಂದು ಜಿಲ್ಲಾಧಿಕಾರಿ ರವಿ ತಾಕೀತು ಮಾಡಿದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.