ಡಿ.ಎಂ.ಸಮುದ್ರದ ಬಳಿ ಚೆಂಗಡಿ ಗ್ರಾಮ ಪುನರ್ವಸತಿ


Team Udayavani, Mar 26, 2021, 2:43 PM IST

ಡಿ.ಎಂ.ಸಮುದ್ರದ ಬಳಿ ಚೆಂಗಡಿ ಗ್ರಾಮ ಪುನರ್ವಸತಿ

ಚಾಮರಾಜನಗರ: ಹನೂರು ತಾಲೂಕಿನ ಚೆಂಗಡಿ ಗ್ರಾಮವನ್ನು ತಾಲೂಕಿನ ಡಿ.ಎಂ.ಸಮುದ್ರದ ಬಳಿ ಇರುವ ಮೀಸಲು ಅರಣ್ಯ ಪ್ರದೇಶದಲ್ಲಿ ಗುರುತಿಸಲಾಗಿರುವ ಜಾಗಕ್ಕೆ ಸ್ಥಳಾಂತರ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿ ಕೊಡುವ ಪ್ರಕ್ರಿಯೆಗೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚೆಂಗಡಿ ಗ್ರಾಮ ಪುನರ್ವಸತಿ ಕಾರ್ಯ ಪ್ರಗತಿ ಸಂಬಂಧ ಗುರುವಾರ ನಡೆದ ಜಿಲ್ಲಾ ಮಟ್ಟದ ಪುನರ್ವಸತಿ ಸಮಿತಿಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಶೀಲನೆ: ಸಭೆಯ ಆರಂಭದಲ್ಲಿ, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಅರಣ್ಯ ಸಂರ ಕ್ಷಣಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಪುನರ್ವಸತಿ ಸಮಿತಿ ಸದಸ್ಯ ಕಾರ್ಯದರ್ಶಿಯಾಗಿರುವ ಏಡುಕೊಂಡಲು ಅವರು ಚೆಂಗಡಿ ಗ್ರಾಮ ಸ್ಥಳಾಂತರಿಸಿ ಪುನರ್ವಸತಿಗಾಗಿ ಗುರುತಿಸಲಾಗಿದ್ದ ಚಿಕ್ಕಲ್ಲೂರು ಭಾಗದ ಇಕ್ಕಡಹಳ್ಳಿಯಲ್ಲಿ ಅಗತ್ಯವಿರುವ ಪ್ರಮಾಣದ ಭೂಮಿ ಲಭ್ಯವಾಗಿಲ್ಲ. ಹೀಗಾಗಿ ಹನೂರು ತಾಲೂಕಿನ ಡಿ.ಎಂ.ಸಮುದ್ರದಬಳಿ 450 ಎಕರೆಯಷ್ಟು ಭೂಮಿ ಲಭ್ಯವಿರುವುದನ್ನು ಗುರುತಿಸಲಾಗಿದೆ. ಇಲ್ಲಿಯೇ ಸ್ಥಳಾಂತರಗೊಂಡವರಿಗೆ ಪುನರ್ವಸತಿ ಕಲ್ಪಿಸಲು ಅವಕಾಶವಿದ್ದು ಎಲ್ಲಾಪರಿಶೀಲನೆ ನಡೆಸಲಾಗಿದೆ ಎಂದರು.

ವಿವರ ಕಳುಹಿಸಿ: ಪೂರ್ಣ ಮಾಹಿತಿ ಪಡೆದು ಕೊಂಡಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರುಮಾತನಾಡಿ, ಡಿ.ಎಂ.ಸಮುದ್ರದ ಬಳಿ ಗುರುತಿಸಲಾಗಿರುವ ಜಾಗದಲ್ಲಿ ಜನವಸತಿ ತಾಣವನ್ನಾಗಿಪರಿವರ್ತಿಸಲು ಪೂರ್ಣ ಪ್ರಮಾಣದ ಕಾರ್ಯವಾಗಬೇಕಿದೆ. ಸ್ಥಳಾಂತರಗೊಳ್ಳುವ ಜನರಿಗೆ ಕೃಷಿ,ಕುಡಿವ ನೀರು, ಇನ್ನಿತರ ಅವಶ್ಯಕ ಮೂಲಸೌಕರ್ಯಗಳನ್ನು ಒದಗಿಸಬೇಕಿದೆ. ಈ ಮೊದಲು ಭೂಮಿ ಲಭ್ಯತೆ ಕುರಿತ ವಿವರವನ್ನು ಸರ್ಕಾರಕ್ಕೆಕಳುಹಿಸಿ ಮುಂದಿನ ಕ್ರಮ ತೆಗೆದುಕೊಳ್ಳಬೇಕೆಂದರು. ಚೆಂಗಡಿ ಗ್ರಾಮ ಸ್ಥಳಾಂತರಿಸಿ ಪುನರ್ವಸತಿಕಲ್ಪಿಸಬೇಕಿರುವ ಹಿನ್ನೆಲೆಯಲ್ಲಿ ಗ್ರಾಮದಕುಟುಂಬಗಳಿಗೆ ಅವಶ್ಯವಿರುವ ಜಮೀನು ಲಭ್ಯತೆ, ಪರಿಹಾರ ನೀಡಬೇಕಾದ ಕ್ರಮ, ಒದಗಿಸಬೇಕಿರುವಪ್ಯಾಕೇಜ್‌ ಸೇರಿದಂತೆ ಫ‌ಲಾನುಭವಿಗಳ ಪಟ್ಟಿಯನ್ನುತಯಾರಿಸಬೇಕಿದೆ. ಇದಕ್ಕಾಗಿ ಕೈಗೊಳ್ಳಲಾಗಿರುವ ಸಮೀಕ್ಷೆಯನ್ನು ತ್ವರಿತವಾಗಿ ಪೂರ್ಣಗೊಳಿಸ ಬೇಕೆಂದು ಡೀಸಿ ತಿಳಿಸಿದರು.

ನಿರ್ದೇಶನ: ಆರ್‌ಟಿಸಿ ತಿದ್ದುಪಡಿ, ಪೌತಿಖಾತೆ, ಆರ್‌ಟಿಸಿ ಗಣಕೀಕರಣದಂತಹ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ನ್ಯೂನತೆ ಇದ್ದಲ್ಲಿ ಸರಿಪಡಿಸಿಕಳುಹಿಸಿಕೊಡಬೇಕು. ಮನೆಗಳ ಸಮೀಕ್ಷೆಯನ್ನುಪೂರ್ಣ ಪ್ರಮಾಣದಲ್ಲಿ ಮಾಡಬೇಕು. ಭೂಮಾಪನಇಲಾಖೆ ಸರ್ವೇ ಪೂರ್ಣಗೊಳಿಸಬೇಕು ಎಂದು ಡೀಸಿ ನಿರ್ದೇಶನ ನೀಡಿದರು.

ಕೃಷಿ, ತೋಟಗಾರಿಕೆ ಇಲಾಖೆಗಳು ಬೆಳೆಗಳ ಸಮೀಕ್ಷೆಯನ್ನು ನಿಗದಿತ ಅವಧಿಯೊಳಗೆ ಮುಗಿಸಬೇಕು. ರೈತರಿಗೆ ಅವಶ್ಯವಿರುವ ಬಿತ್ತನೆ ಬೀಜ, ರಸಗೊಬ್ಬರಇತರೆ ನೆರವು ನೀಡಬೇಕು. ಪ್ರಸ್ತುತ ಚೆಂಗಡಿ ಗ್ರಾಮ ಸ್ಥಳಾಂತರಗೊಳ್ಳಲಿರುವ ಹಿನ್ನೆಲೆಯಲ್ಲಿ ಯಾವುದೇ ಜಮೀನು ಕ್ರಯಕ್ಕೆ ಅವಕಾಶವಿಲ್ಲ. ಹೊಸದಾಗಿ ಕಂದಾಯ ವ್ಯವಹಾರ, ಆಹಾರ ಇಲಾಖೆ ಪಡಿತರಚೀಟಿಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಂ. ಆರ್‌. ರವಿ ತಿಳಿಸಿದರು.

ಉಪವಿಭಾಗಾಧಿಕಾರಿ ಡಾ.ಗಿರೀಶ್‌ ದಿಲೀಪ್‌ ಬದೋಲೆ, ಕಾವೇರಿ ವನ್ಯಜೀವಿಧಾಮದ ಅರಣ್ಯ ಅಧಿಕಾರಿ ರಮೇಶ್‌, ಜಂಟಿ ಕೃಷಿನಿರ್ದೇಶಕಿ ಚಂದ್ರಕಲಾ, ತೋಟಗಾರಿಕೆ ಇಲಾಖೆಉಪನಿರ್ದೇಶಕ ಶಿವಪ್ರಸಾದ್‌, ಪಶುಪಾಲನೆ ಇಲಾಖೆಉಪನಿರ್ದೇಶಕ ವೀರಭದ್ರಯ್ಯ, ತಹಶೀಲ್ದಾರ್‌ ನಾಗರಾಜು, ಮುಖಂಡರು ಇದ್ದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.