ಅಂತರ ಕಾಯ್ದುಕೊಳ್ಳಲು ಡೀಸಿ ಸೂಚನೆ
Team Udayavani, May 13, 2020, 9:30 AM IST
ಯಳಂದೂರು: ತಾಲೂಕಿನ ಅಂಬಳೆ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಭೇಟಿ ಬೆಲ್ಲ ತಯಾರಿಕೆ ಬಗ್ಗೆ ಮಾಹಿತಿ ಪಡೆದರು.
ಈ ಗ್ರಾಮಗಳಲ್ಲಿನ ಕಬ್ಬಿನ ಜಮೀನುಗಳಿಗೆ ಭೇಟಿ ನೀಡಿ ಕಬ್ಬು ಕಟಾವು ಮಾಡುವ ಕಾರ್ಮಿಕರು ಹಾಗೂ ಆಲೆಮನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು.
ಬೆಲ್ಲದ ತಯಾರಿ, ಬೆಲೆ, ಮಾರುಕಟ್ಟೆ, ಲಾಭಾಂಶದ ಕುರಿತು ಮಾಹಿತಿ ಪಡೆದರು. ಕೊರೊನಾ ಸೋಂಕು ತಡೆಗಾಗಿ ಪ್ರತಿಯೊಬ್ಬರೂ ಕೆಲಸ ಮಾಡುವ ಸಮಯದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೊರೊನಾ ನಿವಾರ ಣೆಗೆ ಮುಂಜಾ ಗ್ರತೆಯೇ ಮದ್ದಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸಾರ್ವಜನಿಕರ ಬೆಂಬಲ ಬೇಕಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಮನವಿ ಮಾಡಿದರು. ತಹಶೀಲ್ದಾರ್ ಮಹೇಶ್, ಪಿಡಿಒ ಗಂಗಾಧರ್, ಗ್ರಾಮಲೆಕ್ಕಿಗ ಸಿದ್ದಲಿಂಗಸ್ವಾಮಿ ಸೇರಿದಂತೆ ಹಲವರು ಇದ್ದರು.