ಜಿಲ್ಲಾ ಆಸ್ಪತ್ರೆಗೆ ಡೀಸಿ ದಿಢೀರ್‌ ಭೇಟಿ


Team Udayavani, Feb 29, 2020, 3:00 AM IST

jilla-aspa

ಚಾಮರಾಜನಗರ: ಜಿಲ್ಲಾಧಿಕಾರಿ ಡಾ.ಎಂ.ಆರ್‌. ರವಿ ಅವರು ನಗರದ ಜಿಲ್ಲಾ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್‌. ರವಿ ಅವರಿಗೆ ಆಸ್ಪತ್ರೆಯಲ್ಲಿ ನೆರೆದಿದ್ದ ರೋಗಿಗಳು ಹಾಗೂ ಅವರ ಸಂಬಂಧಿಕರು ಅಲ್ಲಿನ ಸೇವೆ ಹಾಗೂ ವ್ಯವಸ್ಥೆಗಳ ಕುರಿತು ಗಮನ ಸೆಳೆದರು. ಸೆಂಟ್ರಲ್‌ಲ್ಯಾಬ್‌ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಅವರು, ಅಲ್ಲಿ ಕೈಗೊಂಡಿರುವ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಆಯಾ ದಿನವೇ ಚಿಕಿತ್ಸೆ, ಸಲಹೆ ನೀಡಿ: ಇದೇ ವೇಳೆ ಅಲ್ಲಿದ್ದ ಸಾರ್ವಜನಿಕರು ಮಾತನಾಡಿ, ರಕ್ತ ಪರೀಕ್ಷೆಗಾಗಿ ಶಿಫಾರಸು ಮಾಡುವ ರೋಗಿಗಳಿಗೆ ವೈದ್ಯರು ಆಯಾ ದಿನವೇ ರಕ್ತ ಪರೀಕ್ಷೆ ವರದಿಗಳನ್ನು ಪರಿಶೀಲಿಸಿ ಮುಂದಿನ ಚಿಕಿತ್ಸೆ, ಸಲಹೆ ಮಾಡುವಂತಾಗಬೇಕು ಎಂದು ಮನವಿ ಮಾಡಿದರು.

ಕುಳಿತುಕೊಳ್ಳಲು ಅವಕಾಶ ಕಲ್ಪಿಸಿ: ಹೆರಿಗೆ ವಾರ್ಡ್‌, ಹೊರ ರೋಗಿ ವಿಭಾಗಗಳಲ್ಲಿ ವೀಕ್ಷಿಸಿದ ವೇಳೆ ಹಲವರಿಗೆ ಕುಳಿತುಕೊಳ್ಳಲು ಸ್ಥಳದ ಅವಕಾಶವಿಲ್ಲದ ಬಗ್ಗೆ ಕಂಡುಬಂದ ಹಿನ್ನೆಲೆಯಲ್ಲಿ ಮಹಿಳೆಯರು ಕುಳಿತುಕೊಳ್ಳಲು ಸೂಕ್ತ ಸ್ಥಳಕ್ಕೆ ಅವಕಾಶ ಮಾಡಿಕೊಡಬೇಕು ಎಂದು ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಬೆಳಗ್ಗೆಯಿಂದಲೇ ಹೊರರೋಗಿ ವಿಭಾಗಗಳಲ್ಲಿ ವೈದ್ಯರು ಹಾಜರಿದ್ದು, ರೋಗಿಗಳ ತಪಾಸಣೆ, ಚಿಕಿತ್ಸೆಗೆ ಸಲಹೆ ಮಾಡಬೇಕು. ಇದರಿಂದ ಸಾಕಷ್ಟು ಸಮಯ ರೋಗಿಗಳು ಕಾದು ಕುಳಿತುಕೊಳ್ಳುವುದು ತಪ್ಪಲಿದೆ ಎಂದು ಜಿಲ್ಲಾಧಿಕಾರಿ ವೈದ್ಯರಿಗೆ ತಿಳಿಸಿದರು.

ಅಡುಗೆ ಮನೆಯಲ್ಲಿ ಸ್ವಚ್ಛತೆ ಕಾಪಾಡಿ: ಅಸ್ಪತ್ರೆಯಲ್ಲಿ ರೋಗಿಗಳಿಗೆ ಆಹಾರ ತಯಾರಿಸಲಾಗುವ ಅಡುಗೆ ಕೋಣೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಅಡುಗೆ ಮನೆಯಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು. ಪ್ರಮಾಣೀಕೃತ ಅಡುಗೆ ತಯಾರಕರೇ ಆಹಾರ ಸಿದ್ಧಪಡಿಸಬೇಕು. ರೋಗಿಗಳಿಗೆ ಆಹಾರ ವಿತರಿಸುವ ಮೊದಲು ವೈದ್ಯರು ಆಹಾರ ಸೇವನೆ ಮಾಡಿ, ಗುಣಮಟ್ಟ ಹಾಗೂ ಪ್ರಮಾಣವನ್ನು ಪರಿಶೀಲಿಸಿ ಖಾತರಿಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಔಷಧಿಗಳ ಕೊಠಡಿಯನ್ನು ಪರಿಶೀಲಿಸಿ, ದಾಸ್ತಾನು ಇರುವ ಔಷಧಿಗಳ ಬಗ್ಗೆ ಮಾಹಿತಿ ಪಡೆದರು. ಯಾವುದಾದರೂ ಔಷಧಿಗಳ ಕೊರತೆ ಇದೆಯೇ? ರೋಗಿಗಳಿಗೆ ಎಲ್ಲಾ ಅವಶ್ಯಕ ಔಷಧಿಗಳು ಸಿಗುತ್ತಿವೆಯೇ? ಎಂಬ ಬಗ್ಗೆ ಪ್ರಶ್ನಿಸಿ ವಿವರ ಪಡೆದುಕೊಂಡರು.

ರಕ್ತದಾನ ಶಿಬಿರ ಆಯೋಜಿಸಿ: ತುರ್ತು ಘಟಕಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಯವರು, ಬಳಿಕ ರಕ್ತ ನಿಧಿ ಕೇಂದ್ರಕ್ಕೆ ತೆರಳಿ ವೀಕ್ಷಿಸಿದರು. ರಕ್ತಕ್ಕೆ ಬೇಡಿಕೆ ಹಾಗೂ ಪೂರೈಕೆಯ ವಿವರ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಯವರು, ರಕ್ತದಾನ ಶಿಬಿರಗಳನ್ನು ವಿವಿಧ ಸಂಘ- ಸಂಸ್ಥೆಗಳ ಸಹಕಾರದೊಂದಿಗೆ ಆಯೋಜಿಸುವ ಮೂಲಕ ರಕ್ತ ಸಂಗ್ರಹಣೆ ಕಾರ್ಯ ಮಾಡಬೇಕು.

ಜಿಲ್ಲಾಡಳಿತ ಭವನದಲ್ಲಿ ಸಹ ರಕ್ತದಾನ ಶಿಬಿರವನ್ನು ಆಯೋಜಿಸಬೇಕು. ಇದಕ್ಕಾಗಿ ತಾವೇ ಖುದ್ದು ಎಲ್ಲ ಸಹಕಾರ ವ್ಯವಸ್ಥೆಗಳನ್ನು ಕೈಗೊಳ್ಳಲು ನಿರ್ದೇಶನ ನೀಡುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು. ಈ ಸಂದರ್ಭದಲ್ಲಿ ಸ್ಥಾನಿಕ ವೈದ್ಯಾಧಿಕಾರಿ ಡಾ.ಕೃಷ್ಣಪ್ರಸಾದ್‌, ಡಾ.ಸತ್ಯಪ್ರಕಾಶ್‌, ಡಾ.ಮಹೇಶ್‌, ರಕ್ತ ನಿಧಿ ಕೇಂದ್ರದ ಡಾ.ಸುಜಾತಾ ಮತ್ತು ವೈದ್ಯಕೀಯ ಸಿಬ್ಬಂದಿ ಹಾಜರಿದ್ದರು.

ಅಸ್ಪತ್ರೆಯಲ್ಲಿ ಸ್ವಚ್ಛತಾ ಕಾರ್ಯ, ತ್ಯಾಜ್ಯ ವಿಲೇವಾರಿ ಕೆಲಸಗಳು ಅಸ್ಪತ್ರೆ ಕಾರ್ಯ ಚಟುವಟಿಕೆಗಳು ಪ್ರಾರಂಭವಾಗುವ ಮೊದಲೇ ಆಗಬೇಕಿದೆ. ಅಸ್ಪತ್ರೆಗೆ ಭೇಟಿ ನೀಡುವ ರೋಗಿಗಳಿಗೆ ನೆರವಾಗುವ ಹೆಲ್ಪ್ಡೆಸ್ಕ್ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು.
-ಡಾ.ಎಂ.ಆರ್‌.ರವಿ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.