ಸಕ್ಕರೆ ಕಾರ್ಖಾನೆ, ಆಲೆಮನೆಗೆ ಡೀಸಿ ಭೇಟಿ
Team Udayavani, May 14, 2020, 4:53 AM IST
ಚಾಮರಾಜನಗರ: ಕುಂತೂರಿನ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ, ಯಳಂದೂರು ತಾಲೂಕಿನ ಅಂಬಳೆ, ತಾಲೂಕಿನ ವಿವಿಧ ಆಲೆಮನೆಗಳಿಗೆ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಭೇಟಿ ನೀಡಿ ಪರಿಶೀಲಿಸಿದರು.
ಕಬ್ಬು ಕಟಾವಿಗೆ ಬಂದಿರುವ ಈ ಸಂದರ್ಭದಲ್ಲಿ ರೈತರ ಹಿತದೃಷ್ಟಿಯಿಂದ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಆರಂಭಿಸಲು ಷರತ್ತುಬದಟಛಿ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಕ್ಕರೆ ಕಾರ್ಖಾ ನೆಯ ಪ್ರತಿ ವಿಭಾಗಕ್ಕೆ ಭೇಟಿ ನೀಡಿ ಕಾರ್ಮಿಕರ ನಿಯೋ ಜನೆ, ಕಾರ್ಖಾನೆ ಕಾರ್ಯಾವಧಿ ಬಗ್ಗೆ ಮಾಹಿತಿ ಪಡೆದರು.
ಕೋವಿಡ್-19 ಹಿನ್ನೆಲೆಯಲ್ಲಿ ಕಾರ್ಖಾನೆಯಲ್ಲಿ ಮುಂಜಾಗ್ರತಾ ಕ್ರಮಗಳಾದ ಸೋಪು, ಸ್ಯಾನಿಟೈಸರ್, ಸುರಕ್ಷತಾ ಸಾಧನಗಳನ್ನು ವೀಕ್ಷಿಸಿದರು. ಕಾರ್ಮಿಕರಿಗೆ ಪ್ರತಿದಿನ ಸ್ಕ್ರೀನಿಂಗ್ ಕಡ್ಡಾಯವಾಗಿ ಮಾಡಬೇಕು. ಅಗತ್ಯವಿರುವವರಿಗೆ ಆರೋಗ್ಯ ತಪಾಸಣೆ ಮಾಡ ಬೇಕು. ಕಾರ್ಮಿಕರ ಸುರಕ್ಷತೆಗೆ ಗರಿಷ್ಠ ಪ್ರಮಾಣದಲ್ಲಿ ಆದ್ಯತೆ ನೀಡಬೇಕು. ಸಾಮಾಜಿಕ ಅಂತರ ಕಾಪಾಡಿ ಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ತಾಲೂಕಿನ ಕಾಗಲವಾಡಿ ಹಾಗೂ ಯಳಂದೂರು ತಾಲೂಕಿನ ಅಂಬಳೆಯ ಕೆಲ ಆಲೆಮನೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಆಲೆಮನೆ ಕಾರ್ಮಿಕರ ಸಮಸ್ಯೆ ಗಳನ್ನು ಆಲಿಸಿದರು. ಆಲೆಮನೆಗಳಲ್ಲಿ ಬೆಲ್ಲ ತಯಾರಿಕೆ, ಲಭಿಸುತ್ತಿರುವ ಮಾರುಕಟ್ಟೆ, ಬಂಡವಾಳಕ್ಕೆ ಸರಿಯಾದ ಪ್ರತಿಫಲ, ಲಾಭ ಹೇಗೆ ಸಿಗುತ್ತಿದೆ ಎಂಬ ಬಗ್ಗೆ ಆಲೆಮನೆ ನಿರ್ವಹಿಸುತ್ತಿರುವ ರೈತರು, ಮಾಲೀಕರಿಂದ ಜಿಲ್ಲಾಧಿ ಕಾರಿ ಮಾಹಿತಿ ಪಡೆದರು.
ಕುಂತೂರು ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷ ಶರವಣ, ಉಪ ವಿಭಾಗಾಧಿಕಾರಿ ನಿಖೀತಾ ತಹಶೀಲ್ದಾರ ರಾದ ಮಹೇಶ್, ಕುನಾಲ್, ಆಹಾರ ಇಲಾಖೆ ಉಪ ನಿರ್ದೇಶಕ ಆರ್.ರಾಚಪ್ಪ ಇತರೆ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ