ಆರೋಗ್ಯ ಕೇಂದ್ರಗಳಿಗೆ ಡೀಸಿ ಭೇಟಿ ನೀಡಿ; ಪರಿಶೀಲನೆ


Team Udayavani, Mar 24, 2021, 6:02 PM IST

ಆರೋಗ್ಯ ಕೇಂದ್ರಗಳಿಗೆ ಡೀಸಿ ಭೇಟಿ ನೀಡಿ; ಪರಿಶೀಲನೆ

ಚಾಮರಾಜನಗರ: ಮೂಲೆಹೊಳೆ ಚೆಕ್‌ಪೋಸ್ಟ್‌ ಭೇಟಿ ನೀಡಿ, ಕೋವಿಡ್ ನಿಯಂತ್ರಣ ಸಂಬಂಧಕೈಗೊಂಡಿರುವ ಕ್ರಮ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ, ಗುಂಡ್ಲುಪೇಟೆ ತಾಲೂಕಿನ ವಿವಿಧ ಆರೋಗ್ಯ ಕೇಂದ್ರಗಳಿಗೆ ಮಂಗಳವಾರ ಭೇಟಿ ನೀಡಿಆರೋಗ್ಯ ಸೌಲಭ್ಯಗಳು, ಕೋವಿಡ್‌ ಲಸಿಕೆ ಅಭಿಯಾನ ಕಾರ್ಯವನ್ನು ವೀಕ್ಷಿಸಿದರು.

ಐ.ಟಿ.ಐ ಉನ್ನತೀಕರಣ ಕಾಮಗಾರಿ, ಶತಮಾನ ಕಂಡ ಶಾಲೆಗಳ ಅಭಿವೃದ್ಧಿ ಸಂಬಂಧ ಪರಿಶೀಲನೆ ನಡೆಸಿದರು.ಗುಂಡ್ಲುಪೇಟೆ ತಾಲೂಕಿನ ಕಗ್ಗಳ ಹುಂಡಿ ಪ್ರಾಥಮಿಕಆರೋಗ್ಯ ಕೇಂದ್ರ, ಬೇಗೂರಿನ ಸಮುದಾಯ ಆರೋಗ್ಯಕೇಂದ್ರಕ್ಕೆ ಭೇಟಿ ನೀಡಿ, ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಆರೋಗ್ಯ ಪೂರಕ ಸೇವಾ ವ್ಯವಸ್ಥೆಗಳನ್ನುಪರಿಶೀಲಿಸಿದರು. ಸಮುದಾಯ ಆರೋಗ್ಯ ಕೇಂದ್ರದಲ್ಲಿಎಷ್ಟು ಜನರಿಗೆ ಪ್ರಯೋಜನವಾಗುತ್ತಿದೆ. ಯಾವ ಬಗೆಯ ಆರೋಗ್ಯ ತಪಾಸಣೆ ಪರೀಕ್ಷೆಗಳು ನಡೆಸ ಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಪಡೆದರು.

ಇತರರಿಗೂ ಮನವರಿಕೆ ಮಾಡಿ: ಕೋವಿಡ್‌ ಲಸಿಕೆ ನೀಡುವ ಕಾರ್ಯ ನಿರ್ವಹಣೆಯನ್ನು ಪರಿಶೀಲಿಸಿದಅವರು, ಕೋವಿಡ್‌ ಲಸಿಕೆ ಪಡೆಯಲು ಆಗಮಿಸಿದ್ದ ಹಿರಿಯ ನಾಗರಿಕರೊಂದಿಗೆ ಸಮಾಲೋಚಿಸಿದರು.ಲಸಿಕೆ ಪಡೆಯಲು ಯಾವುದೇ ಭಯ ಪಡಬೇಡಿ.ರೋಗ ತಡೆಗೆ ಲಸಿಕೆ ಪಡೆಯುವುದರಿಂದ ಅನುಕೂಲವಾಗಲಿದೆ. ಈ ಬಗ್ಗೆ ಇತರರಿಗೂ ಮನವರಿಕೆ ಮಾಡಿಕೊಡಿ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

ಕೆರೆ ಶುಚಿಗೊಳಿಸಿ: ಇದೇ ವೇಳೆ ಆರೋಗ್ಯ ಕೇಂದ್ರ ಮುಂಭಾಗದಲ್ಲಿರುವ ಕೆರೆ ಕಲುಷಿತ ಆಗಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿ, ಅಲ್ಲಿನ ಪಿಡಿಒ ಅನ್ನುಕರೆಯಿಸಿ, ನರೇಗಾ ಅಡಿ ಕೆರೆ ಶುಚಿಗೊಳಿಸಬೇಕು. ಕೆರೆಅಭಿವೃದ್ಧಿ ಕೆಲಸ ಕೈಗೊಂಡ ಬಗ್ಗೆ ತಹಶೀಲ್ದಾರ್‌ಗೆ ವರದಿ ಮಾಡಬೇಕು ಎಂದು ಸೂಚಿಸಿದರು.

ಐಟಿಐ, ಶತಮಾನ ಶಾಲೆಗೆ ಭೇಟಿ: ಬೇಗೂರಿನಲ್ಲಿರುವ ಕೈಗಾರಿಕಾ ತರಬೇತಿ ಸಂಸ್ಥೆಗೆ ಭೇಟಿ ನೀಡಿ ಅಲ್ಲಿ ಟಾಟಾಟೆಕ್ನಾಲಜಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಂಡಿರುವಉನ್ನತೀಕರಣ ಕಾಮಗಾರಿ ಪರಿಶೀಲಿಸಿದರು.ಕಾಲಮಿತಿಯೊಳಗೆ ಗುಣಮಟ್ಟದ ಕೆಲಸನಿರ್ವಹಿಸುವಂತೆ ನಿರ್ದೇಶನ ನೀಡಿದರು. ಶತಮಾನಕಂಡ ಶಾಲೆ ಯೋಜನೆಯಡಿ ಅಭಿವೃದ್ಧಿಗಾಗಿಆಯ್ಕೆಯಾಗಿರುವ ಹಸಗೂಲಿಯಲ್ಲಿರುವ ಹಿರಿಯಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಆಗಬೇಕಿರುವನಿರ್ಮಾಣ ಕಾಮಗಾರಿ ಸಂಬಂಧ ಪರಿಶೀಲನೆ ನಡೆಸಿದರು.

ಈಗಿರುವ ಕಟ್ಟಡದ ಪಾರಂಪರೆಯನ್ನೇ ಉಳಿಸಿಕೊಂಡು ಬಲವರ್ಧನೆ ಕೆಲಸಗಳನ್ನು ಕೈಗೆತ್ತಿಕೊಳ್ಳಬೇಕು. ವಾಕಿಂಗ್‌ ಪಾಥ್‌, ಕೈತೋಟ, ಉದ್ಯಾನಅಭಿವೃದ್ಧಿಗೊಳಿಸಬೇಕು ಎಂದು ಡಾ.ಎಂ.ಆರ್‌.ರವಿ ಸೂಚನೆ ನೀಡಿದರು.

ಕೋವಿಡ್ ಲಸಿಕೆ ಬಗ್ಗೆ ಮನೆಯವರಿಗೆ ತಿಳಿಸಿ: ಇದೇ ವೇಳೆ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿಯವರು ಹೇಗೆ ವ್ಯಾಸಂಗ ಮಾಡುತ್ತಿದ್ದೀರಿ?ಕೋವಿಡ್‌ ಮುನ್ನೆಚ್ಚರಿಕೆಗೆ ಯಾವ ಕ್ರಮತೆಗೆದುಕೊಂಡಿದ್ದೀರಿ? ಎಂದು ಪ್ರಶ್ನಿಸಿದರು. ಕೋವಿಡ್‌ನಿರೋಧಕ ಶಕ್ತಿ ಒದಗಿಸುವ ಲಸಿಕೆ ಪ್ರಯೋಜನವನ್ನುನಿಮ್ಮ ಮನೆಯ ಹಿರಿಯರಿಗೆ ತಿಳಿಸಬೇಕು. ನಿಮ್ಮಸ್ನೇಹಿತರಿಗೂ ಮಾಹಿತಿ ನೀಡಿ ಅವರ ಮನೆಯ ಹಿರಿಯಸದಸ್ಯರು ಲಸಿಕೆ ಪಡೆದುಕೊಳ್ಳುವುದರಿಂದ ಆಗುವಅನುಕೂಲ ಮನವರಿಕೆ ಮಾಡಿಕೊಡಬೇಕೆಂದು ಸಲಹೆ ಮಾಡಿದರು.

ತಹಶೀಲ್ದಾರ್‌ ರವಿಶಂಕರ್‌, ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ರವಿ, ಪಿಡಬ್ಲ್ಯೂಡಿ ಉಪನಿರ್ದೇಶಕ ಸುರೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್‌.ಟಿ.ಜವರೇಗೌಡ, ಬಿಇಒ ಶಿವಮೂರ್ತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.