ಸಾರ್ವಜನಿಕರ ಸಮಸ್ಯೆಗೆ ಡೀಸಿ ಸ್ಪಂದನೆ
Team Udayavani, Jul 21, 2019, 3:00 AM IST
ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆಯುತ್ತಿರುವ ದೇವಾಲಯ ಜೀರ್ಣೋದ್ಧಾರ ಕಾಮಗಾರಿ ಜಿಲ್ಲಾಧಿಕಾರಿಯವರ ತಪಾಸಣೆ ನಂತರ ಉತ್ತಮವಾಗಿ ನಡೆಯುತ್ತಿದ್ದು, ಡೀಸಿಯವರು ಆಗಾಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸಾರ್ವಜನಿಕ ಕುಂದುಕೊರತೆ ಕಾರ್ಯಕ್ರಮದಲ್ಲಿ ನಾಗರಿಕರು ಒತ್ತಾಯಿಸಿದರು.
ಜನರ ಕುಂದು ಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ನಡೆದ ಕುಂದು ಕೊರತೆ ಆಲಿಕೆಯ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಒಟ್ಟು 29 ದೂರುಗಳು ದಾಖಲಾದವು.
ಕಾಮಗಾರಿ ವೀಕ್ಷಿಸಿ: ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ಸಂಬಂಧ ಕರೆ ಮಾಡಿದ ಓರ್ವರು ಜಿಲ್ಲಾಧಿಕಾರಿಯವರು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿದ ಪರಿಣಾಮ ಈಗ ಉತ್ತಮ ಕೆಲಸವಾಗುತ್ತಿದೆ. ಪ್ರತಿ ತಿಂಗಳು ಇದೇ ರೀತಿಯಾಗಿ ಭೇಟಿ ನೀಡಿ ಕಾಮಗಾರಿ ವೀಕ್ಷಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಕಾಮಗಾರಿ ನಿರ್ವಹಣೆ ಸಂಬಂಧ ಗಮನ ಹರಿಸಲಾಗುತ್ತದೆ. ಕಳಪೆ ಕಾಮಗಾರಿ ನಿರ್ವಹಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.
ಸೆಸ್ಕ್ ಮಾಹಿತಿ ನೀಡುತ್ತಿಲ್ಲ: ಕೊಳ್ಳೇಗಾಲದಿಂದ ಕರೆ ಮಾಡಿದ ಸ್ಥಳೀಯ ನಾಗರಿಕರೊಬ್ಬರು ಕೊಳ್ಳೇಗಾಲ ಪಟ್ಟಣದ ಸೆಸ್ಕ್ ಕಚೇರಿಯಲ್ಲಿ ನಡೆಸಲಾಗುವ ಜನಸಂಪರ್ಕ ಸಭೆ ಬಗ್ಗೆ ಮಾಹಿತಿ ನೀಡಲಾಗುತ್ತಿಲ್ಲ. ಅಧಿಕ ಭದ್ರತಾ ಠೇವಣಿ ಬಗ್ಗೆ ಸರಿಯಾದ ಮನವರಿಕೆ ಮಾಡಿಕೊಡಲಾಗುತ್ತಿಲ್ಲ.
ಜನಸಂಪರ್ಕ ಸಭೆಯಲ್ಲಿ ಬಂದ ಸಮಸ್ಯೆ ದೂರುಗಳನ್ನು ಹೇಗೆ ಬಗೆಹರಿಸಲಾಗಿದೆ ಎಂಬ ಬಗ್ಗೆ ವಿವರ ಲಭ್ಯವಾಗುತ್ತಿಲ್ಲ ಎಂದರು. ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿಯವರು ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಕುರಿತು ಸರಿಯಾದ ವಿಧಾನವನ್ನು ಪಾಲಿಸಲು ಸೂಚನೆ ನೀಡಲಾಗುವುದು ಎಂದರು.
ಸೌಲಭ್ಯ ಕಲ್ಪಿಸಿ: ಚಾಮರಾಜನಗರದಿಂದ ಕರೆ ಮಾಡಿದ ಸ್ಥಳಿಯರೊಬ್ಬರು 10 ನೇ ವಾರ್ಡ್ ಕರಿನಂಜನಪುರದಲ್ಲಿ ಮೂಲ ಸೌಕರ್ಯಗಳಿಲ್ಲದೆ ಪರಿತಪಿಸುವಂತಾಗಿದೆ. ರಸ್ತೆ, ಕುಡಿಯುವ ನೀರು ಸೌಲಭ್ಯಕ್ಕೆ ಈ ಹಿಂದೆಯೂ ಮನವಿ ಮಾಡಲಾಗಿದೆ ಎಂಬುದನ್ನು ಗಮನಕ್ಕೆ ತಂದರು. ಕೂಡಲೇ ಸಭೆಯಲ್ಲಿದ್ದ ಪೌರಾಯುಕ್ತರಿಗೆ ತಕ್ಷಣವೇ ಈ ಕುರಿತು ಕ್ರಮ ವಹಿಸಲು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಸಂತೆಮರಹಳ್ಳಿಯಿಂದ ಕರೆ ಮಾಡಿದ ಸ್ಥಳೀಯರೊಬ್ಬರು ಗ್ರಾಮ ಠಾಣೆ ವ್ಯಾಪ್ತಿಯಲ್ಲಿ ಮೂಲಸೌಕರ್ಯಗಳು ಸರಿಯಾಗಿ ಲಭ್ಯವಾಗುತ್ತಿಲ್ಲ. ಇದರಿಂದ ತೊಂದರೆ ಅನುಭವಿಸುವಂತಾಗಿದೆ ಎಂಬುದನ್ನು ಗಮನಕ್ಕೆ ತಂದರು. ಜಿಲ್ಲಾಧಿಕಾರಿಯವರು ಉತ್ತರಿಸಿ ಈ ಬಗ್ಗೆ ಪರಿಶೀಲಿಸಲು ತಿಳಿಸಲಾಗುವುದು ಎಂದರು.
ಅಪರಿಪೂರ್ಣ ಮಾಹಿತಿ: ನಗರದಿಂದ ಕರೆ ಮಾಡಿದ ಮತ್ತೋರ್ವರು ಖಾಸಗಿಯಾಗಿ ಮನೆ ಪಾಠ ಮಾಡುವವರ ಸಂಬಂಧ ತಾವು ಕೇಳಿದ ವಿಷಯಕ್ಕೆ ಸಂಬಂಧಿಸಿದಂತೆ ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕರು ನೀಡಿರುವ ಮಾಹಿತಿ ಪರಿಪೂರ್ಣವಾಗಿಲ್ಲ. ಈ ಬಗ್ಗೆ ಸರಿಯಾದ ಮಾಹಿತಿ ನೀಡಲು ಸೂಚಿಸಬೇಕಿದೆ ಎಂದರು. ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು ಈ ಬಗ್ಗೆ ಗಮನಕ್ಕೆ ತರುವುದಾಗಿ ತಿಳಿಸಿದರು.
ಪಿಜಿ ಪಾಳ್ಯ ಗ್ರಾಮದಿಂದ ಸ್ಥಳೀಯರೊಬ್ಬರು ಕರೆಮಾಡಿ ಇಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸರಿಯಾದ ಆಹಾರ ವಿತರಣೆ ಮಾಡುತ್ತಿಲ್ಲ ಎಂದು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಈ ಬಗ್ಗೆ ಪರಿಶೀಲಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡುತ್ತೇನೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ್ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್, ಉಪವಿಭಾಗಾಧಿಕಾರಿ ನಿಖೀತಾ ಚಿನ್ನಸ್ವಾಮಿ, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ದೂರುಗಳ ಸರಮಾಲೆ: ಗ್ರಾಪಂ ಕಾರ್ಯನಿರ್ವಹಣೆ, ಕುಡಿಯುವ ನೀರು, ಕರಿಕಲ್ಲುಗಳ ಲಾರಿ ಸಂಚಾರದಿಂದ ಆಗುತ್ತಿರುವ ತೊಂದರೆ, ನಗರ ಸಂಚಾರ ಸುಧಾರಣೆ, ಒತ್ತುವರಿ ತೆರವು ಸೇರಿದಂತೆ ವಿವಿಧ ವಿಷಯಗಳ ಕುರಿತು ಸಮಸ್ಯೆಗಳು ಫೋನ್ ಇನ್ ಕಾರ್ಯಕ್ರಮದಲ್ಲಿ ಕೇಳಿಬಂದವು. ಒಂದು ತಾಸಿನ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಸಮಸ್ಯೆಗಳ ಕುರಿತು ದೂರುಗಳು ಬಂದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?