ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು
Team Udayavani, Feb 1, 2021, 11:55 AM IST
ಹನೂರು: ಆಹಾರ ಅರಸಿ ಬಂದಿದ್ದ ಆನೆಯೊಂದು ಬೆಳೆ ಕಾವಲಿಗೆ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿ ರುವ ಘಟನೆ ಹನೂರು ತಾಲೂಕಿನ ಆಂಡಿಪಾಳ್ಯ ಗ್ರಾಮದಲ್ಲಿ ನಡೆದಿದೆ.
ಅಂಡಿಪಾಳ್ಯ ಗ್ರಾಮದ ಭಾಗ್ಯಮ್ಮ ಎಂಬವರಿಗೆ ಸೇರಿದ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆ ಕಾವಲಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ಪ್ರವಹಿಸಿ ಅಂದಾಜು 20 ವರ್ಷದ ಗಂಡಾನೆ ಭಾನುವಾರ ಮುಂಜಾನೆ ಮೃತಪಟ್ಟಿದೆ. ಕಾಡಂಚಿನ ಗ್ರಾಮಗಳಲ್ಲಿ ಬೆಳೆ ರಕ್ಷಣೆಗಾಗಿ ಅಕ್ರಮ ವಿದ್ಯುತ್ ಹರಿಬಿಡುವುದು ಸರ್ವೇ ಸಾಮಾನ್ಯ.
ಇದನ್ನೂ ಓದಿ:ವೃತ್ತಿಪರ ಗೇಮರ್ ಆಗಲು ಬಯಸುತ್ತಿದ್ದೀರಾ..? ಭಾರತದಲ್ಲಿ ಆರಂಭವಾಗಿದೆ ROG ಅಕಾಡೆಮಿ
ಸೆಸ್ಕ್ ಸಿಬ್ಬಂದಿ ಪರಿಶೀಲನೆ ನಡೆಸದ ಕಾರಣ ಈ ರೀತಿಯ ಪ್ರಕರಣ ಮರುಕಳಿಸುತ್ತಿವೆ ಎಂದು ಸಾರ್ವಜನಿಕರು ದೂರಿದ್ದಾರೆ. ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ಭಾಗ್ಯಮ್ಮ ತಲೆ ಮರೆಸಿಕೊಂಡಿದ್ದಾರೆ.ಸ್ಥಳಕ್ಕೆ ಬಿಆರ್ಟಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.