ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ತೀರ್ಮಾನ


Team Udayavani, Jan 6, 2021, 12:55 PM IST

ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ತೀರ್ಮಾನ

ಚಾಮರಾಜನಗರ: ಜಿಲ್ಲಾಡಳಿತ ವತಿಯಿಂದ ಎಲ್ಲರ ಸಹಕಾರದೊಂದಿಗೆ ಗಣರಾಜ್ಯೋತ್ಸವವನ್ನು ಜ. 26ರಂದು ಅಥ ಪೂರ್ಣವಾಗಿ ಆಚರಿಸಲು ತೀರ್ಮಾನ ತೆಗೆದುಕೊಳ್ಳಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಡಾ.ಎಂ.ಆರ್‌. ರವಿ ಅಧ್ಯಕ್ಷತೆಯಲ್ಲಿ ಗಣರಾಜ್ಯೋತ್ಸವ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಾರಿಯೂಗಣರಾಜ್ಯೋತ್ಸವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವ ನಿರ್ಧಾರ ಕೈಗೊಳ್ಳಲಾಯಿತು.

ಸಭೆಯ ಆರಂಭದಲ್ಲಿಯೇ ಗಣರಾಜ್ಯೋತ್ಸವ ಆಚರಣೆ ಕುರಿತು ಮುಖಂಡರು ಸಲಹೆ ಅಭಿಪ್ರಾಯವ್ಯಕ್ತಪಡಿಸಿದರು. ವಿವಿಧ ಮುಖಂಡರು ಮಾತನಾಡಿ ಜಿಲ್ಲೆಯ ಎಲ್ಲಾ ಕೇಂದ್ರ ಕಚೇರಿಗಳು, ಬ್ಯಾಂಕ್‌ಗಳು, ಶಾಲಾ ಕಾಲೇಜುಗಳಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡಬೇಕು. ಈ ಹಿಂದಿನಿಂದಲೂ ರಾಷ್ಟ್ರೀಯಕಾರ್ಯಕ್ರಮಗಳನ್ನು ಬ್ಯಾಂಕ್‌ಗಳಲ್ಲಿ ಆಚರಿಸಬೇಕೆಂಬ ಒತ್ತಾಯಮಾಡಲಾಗುತ್ತಿದೆ. ಆದರೆ, ಬ್ಯಾಂಕುಗಳು ನಿರ್ದೇಶನವನ್ನು ಪಾಲನೆ ಮಾಡುತ್ತಿಲ್ಲ ಎಂದು ಗಮನಕ್ಕೆ ತಂದರು.

ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಗೌರವ ಸಲ್ಲಿಸಬೇಕು. ಕೋವಿಡ್ ಸಂದರ್ಭದಲ್ಲಿ ವಿಶೇಷವಾಗಿ ಸೇವೆಸಲ್ಲಿಸಿರುವವರನ್ನು ಗುರುತಿಸಿ ಗೌರವಿಸಬೇಕು.ಕಡ್ಡಾಯವಾಗಿ ಎಲ್ಲರೂ ಭಾಗವಹಿಸುವಂತಾಗಬೇಕು. ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವಗಣರಾಜ್ಯೋತ್ಸವಕ್ಕೆ ಎಲ್ಲಾ ಸಹಕಾರ ನೀಡುವುದಾಗಿ ಮುಖಂಡರು ತಿಳಿಸಿದರು.  ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಮಾತನಾಡಿ, ಗಣರಾಜ್ಯೋತ್ಸವವನ್ನು ಅರ್ಥ ಪೂರ್ಣವಾಗಿ ಆಯೋಜಿಸಲು ಸಕಲ ಸಿದ್ಧತೆಮಾಡಲಾಗುತ್ತದೆ. ಕಾರ್ಯಕ್ರಮದ ಸುಗಮನಿರ್ವಹಣೆಗೆ ಅಧಿಕಾರಿಗಳನ್ನು ಒಳಗೊಂಡಸಮಿತಿ ರಚಿಸಿದ್ದು ಹೊಣೆಗಾರಿಕೆ ನೀಡಲಾಗುತ್ತದೆ ಎಂದರು.

ಕೋವಿಡ್‌ ಶಿಷ್ಟಾಚಾರವನ್ನು ಪಾಲಿಸಬೇಕು.ಕಾರ್ಯಕ್ರಮದ ಏರ್ಪಾಡು ಅಚ್ಚುಕಟ್ಟಾಗಿ ಆಗಬೇಕು. ಯಾವುದೇ ಲೋಪಕ್ಕೆ ಅವಕಾಶವಾಗಬಾರದು. ದೇಶಭಕ್ತಿ ಪ್ರಧಾನಆಧಾರಿತ ಕಾರ್ಯಕ್ರಮಗಳ ಆಯೋಜನೆಗೆ ಪೂರ್ವಭಾವಿ ಸಿದ್ಧತೆಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್‌, ಹೆಚ್ಚುವರಿ ಜಿಲ್ಲಾಧಿಕಾರಿಸಿ.ಎಲ್‌. ಆನಂದ್‌ ಹೆಚ್ಚುವರಿ ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಅನಿತಾಹದ್ದಣ್ಣನವರ್‌, ಮುಖಂಡರಾದ ಚಾ.ರಂ.ಶ್ರೀನಿವಾಸಗೌಡ, ಚಾ.ಗು. ನಾಗರಾಜು,ಕೆ.ಎಂ. ನಾಗರಾಜು, ನಿಜಧ್ವನಿಗೋವಿಂದರಾಜು, ಸಿ.ಎಂ. ಶಿವಣ್ಣ, ಸುರೇಶ್‌,ನಾರಾಯಣ, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು

ಬ್ಯಾಂಕ್‌ನಲ್ಲಿ ಗಣರಾಜ್ಯೋತ್ಸವ ಕಡ್ಡಾಯ :

ಬ್ಯಾಂಕುಗಳಲ್ಲಿ ಕಡ್ಡಾಯವಾಗಿ ಗಣರಾಜ್ಯೋತ್ಸವ ಆಚರಣೆಗೆ ಕ್ರಮ ತೆಗೆದುಕೊಳ್ಳಬೇಕು. ಬ್ಯಾಂಕುಗಳಿಗೆ ಸುತ್ತೋಲೆ ಹೊರಡಿಸಿ ಆಚರಣೆಗೆ ಸೂಚನೆ ನೀಡಬೇಕು.ಗಣರಾಜ್ಯೋತ್ಸವಆಚರಿಸದೆ ಇರುವ ಬ್ಯಾಂಕುಗಳ ವರದಿಯನ್ನು ನೀಡಬೇಕು. ಇಂತಹ ಬ್ಯಾಂಕುಗಳ ವಿರುದ್ಧಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು. ಈ ಬಗ್ಗೆ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರು ಖುದ್ದು ಗಮನಹರಿಸುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ನಿರ್ದೇಶನ ನೀಡಿದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.