ಅರ್ಹರಿಗೆ ಸರ್ಕಾರಿ ಯೋಜನೆಗಳನ್ನು ತಲುಪಿಸಿ
Team Udayavani, Jun 15, 2020, 5:54 AM IST
ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಒಂದು ವರ್ಷದ ಸಾಧನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕೆಂಬ ಉದ್ದೇಶದಿಂದ ಸಾಧನೆಗಳ ಕರಪತ್ರ ಹಂಚುವ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಂಯೋಜಕ ಆರ್.ಬಾಲರಾಜು ಹೇಳಿದರು.
ತಾಲೂಕಿನ ವಿ.ಸಿ.ಹೊಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 2ನೇ ಅವಧಿಯ ಸಾಧನೆಗಳ ಕರಪತ್ರ ಮನೆಮನೆಗೆ ಹಂಚುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಜಿಪಂ ಮಾಜಿ ಅಧ್ಯಕ್ಷ ರಾಮಚಂದ್ರ ಮಾತನಾಡಿ, ಪ್ರಧಾನಿ ನರೇಂದ್ರಮೋದಿ ಸರ್ಕಾರದ ಯೋಜನೆಗಳು ನೇರವಾಗಿ ನಿಜವಾದ ಫಲಾನುಭವಿಗಳಿಗೆ ತಲುಪಿಸಬೇಕು ಎಂಬ ಉದ್ದೇಶದಿಂದ ಜನ್ಧನ್ ಖಾತೆ ತೆರೆಸಿ ವಿಧವಾ, ವೃದಾಪ್ಯ ವೇತನ ಸೇರಿದಂತೆ ಸಹಾಯಧನ ನೇರವಾಗಿ ಬ್ಯಾಂಕ್ ಖಾತೆಗೆ ಹಾಕುವ ಮೂಲಕ ಮಧ್ಯವರ್ತಿಗಳ ಕಾಟ ತಪ್ಪಿಸಿದ್ದಾರೆ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಶ್ರೀ ಮಾತನಾಡಿ, ಪ್ರಧಾನಿ ನರೇಂದ್ರಮೋದಿ , ಮುಖ್ಯಮಂತ್ರಿ ಯಡಿಯೂರಪ್ಪ ದೇಶ, ರಾಜ್ಯದಲ್ಲಿ ಕೊರೊನಾ ಲಾಕ್ ಡೌನ್ ಯಶ್ವಸಿಯಾಗಿ ಪೂರೈಸಿದ್ದಾರೆ ಎಂದರು. ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಜಿ.ಪ್ರಶಾಂತ್ ಮಾತನಾಡಿ, ಮುಂಬರುವ ಗ್ರಾಪಂ, ತಾಪಂ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ಹೆಚ್ಚು ಸ್ಥಾನ ಗಳಿಸಿ ಅಧಿಕಾರ ಹಿಡಿಯಬೇಕಿದೆ ಎಂದರು.
ಈ ಸಂದರ್ಭದಲ್ಲಿ ಕಾರ್ಯಕ್ರಮ ಜಿಲ್ಲಾ ಸಂಯೋಜಕ ಪಿ.ವೃಷಭೇಂದ್ರ, ಬಿಜೆಪಿ ಗ್ರಾಮಾಂತರ ತಾಲೂಕು ಪ್ರಧಾನ ಅರಕಲವಾಡಿ ಮಹೇಶ್, ಮಾಜಿ ಅಧ್ಯಕ್ಷ ಸುಂದ್ರಪ್ಪ, ಗ್ರಾಪಂ ಅಧ್ಯಕ್ಷೆ ಸೋಮಣ್ಣ, ಶಿವಕುಮಾರ್, ಮುಖಂಡರಾದ ಉಡಿಗಾಲ ಚಂದ್ರಶೇಖರ್, ಫೃಥ್ವಿರಾಜ್ ಮೊದಲಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್ಸಿ 671 ರ್ಯಾಂಕ್
ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್
Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ
Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ