ಯರಿಯೂರು ಕೆರೆಗೆ ನೀರು ತುಂಬಿಸಲು ಆಗ್ರಹ


Team Udayavani, Jan 16, 2020, 3:00 AM IST

yariyuru

ಗುಂಡ್ಲುಪೇಟೆ: ತಾಲೂಕಿನ ಯರಿಯೂರು ಕೆರೆಗೆ ಕಬಿನಿ ನದಿಮೂಲದಿಂದ ನೀರು ತುಂಬಿಸುವಂತೆ ಸುತ್ತಮುತ್ತಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ. ತಾಲೂಕಿನ ಹುತ್ತೂರು ಕೆರೆಯಿಂದ ವಡ್ಡಗೆರೆ ಹಾಗೂ ಉಳಿದ 11 ಕೆರೆಗಳಿಗೆ ನದಿ ನೀರು ತುಂಬಿಸುವ ಮುಂದುವರಿದ ಯೋಜನೆಗೆ ಕಳೆದ ಡಿ.14ರಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ ಕುಮಾರ್‌ ಚಾಲನೆ ನೀಡಿದ್ದರು.

ನಾಲ್ಕು ದಿನಗಳಿಂದ ನೀರು ಹರಿದಿಲ್ಲ: ಚಾಲನೆ ನೀಡಿದ 25 ದಿನಗಳಲ್ಲಿ ವಡ್ಡಗೆರೆ ಹಾಗೂ ಕರಕಲಮಾದಹಳ್ಳಿ ಕೆರೆ ತುಂಬಿಕೊಂಡು ಕೋಡಿಬಿದ್ದ ನೀರು, ಎರಡು ದಿನಗಳ ಕಾಲ ಸಮೀಪದ ಯರಿಯೂರು ಕೆರೆಗೆ ಹರಿದು ಹಳ್ಳಗುಂಡಿಗಳು ತುಂಬಿಕೊಂಡಿದ್ದವು.

ಇನ್ನೂ ಒಂದು ವಾರ ಕಾಲ ನೀರು ಹರಿಸಿದ್ದರೆ ಕೋಡಿ ಬೀಳಲಿದ್ದರೂ ಕಳೆದ ನಾಲ್ಕು ದಿನಗಳಿಂದ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ. ಹೀಗೆ ಪದೇ ಪದೆ ನೀರು ಹರಿಸುವುದನ್ನು ನಿಲ್ಲಿಸಿದರೆ, ಈ ಬಾರಿಯೂ ಮುಂದುವರಿದ ಯೋಜನೆ ವ್ಯಾಪ್ತಿಗೊಳಪಡುವ ದಾರಿಬೇಗೂರು, ವಡೆಯನಪುರ, ಬೊಮ್ಮಲಾಪುರ, ಶಿವಪುರದ ಕಲ್ಲುಕಟ್ಟೆ ಹಳ್ಳ, ವಿಜಯಪುರ ಅಮಾನಿ ಕೆರೆಗಳಿಗೆ ನೀರು ತುಂಬಿಸಲು ಅಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಲ್ಪ ಪ್ರಮಾಣದಲ್ಲಿ ನೀರು ಖಾಲಿ: ಈಗಾಗಲೇ ಕೋಡಿಬಿದ್ದಿರುವ ವಡ್ಡಗೆರೆ ಹಾಗೂ ಕರಕಲಮಾದಹಳ್ಳಿ ಕೆರೆಗಳಲ್ಲಿಯೂ ಸ್ವಲ್ಪ ಪ್ರಮಾಣದಲ್ಲಿ ನೀರು ಖಾಲಿಯಾಗುವುದರಿಂದ ಇವು ತುಂಬದೆ ಮುಂದೆ ನೀರು ಹರಿಯಲು ಸಾಧ್ಯವಾಗುವುದಿಲ್ಲ.

ಮತ್ತೆ ನೀರು ಹರಿಸುವುದರೊಳೆಗೆ ಭೂಮಿಯು ನೀರನ್ನು ಹೀರಿಕೊಳ್ಳೂವುದರಿಂದ ಕೆರೆ ತುಂಬಿಸುವ ಪ್ರಕ್ರಿಯೆ ವಿಳಂಬವಾಗಲಿದೆ. ಆದ್ದರಿಂದ ಕೂಡಲೇ ಯೋಜನೆಯ ವ್ಯಾಪ್ತಿಯ ಕೆರೆಗಳನ್ನು ಕಾಲಮಿತಿಯಲ್ಲಿ ತುಂಬಿಸಬೇಕು ಎಂದು ಯರಿಯೂರು ಹಾಗೂ ದಾರಿಬೇಗೂರು ಗ್ರಾಮದ ರೈತರು ಒತ್ತಾಯಿಸಿದ್ದಾರೆ.

ಕಬಿನಿ ನದಿ ಮೂಲದಿಂದ ನೀರು ಬರುವ ಮಾರ್ಗದಲ್ಲಿನ ಉಡೀಗಾಲ ಸಮೀಪದ ಆನೆಮಡುವಿನ ಕೆರೆ, ಶ್ಯಾನಾಡ್ರಹಳ್ಳಿ, ಬಲಚವಾಡಿ ಹಾಗೂ ತೆರಕಣಾಂಬಿ ಕೆರೆಗಳಿಗೆ ನೀರು ಬಿಡುವ ಸಲುವಾಗಿ ಹುತ್ತೂರಿಗೆ ಬರುವ ನೀರನ್ನು ನಾಲ್ಕು ದಿನಗಳ ಕಾಲ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ. ಸದ್ಯದಲ್ಲಿಯೇ ಮುಂದಿನ ಕೆರೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು.
-ಸಿ.ಎಸ್‌.ನಿರಂಜನಕುಮಾರ್‌, ಶಾಸಕ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.