ಜನರಿಕ್‌ ಮಳಿಗೆ ಪುನರಾರಂಭಿಸಲು ಆಗ್ರಹಿಸಿ ಧರಣಿ


Team Udayavani, May 17, 2019, 12:51 PM IST

cham-3

ಚಾಮರಾಜನಗರ: ಜಿಲ್ಲಾಸ್ಪತ್ರೆ ಆವರಣದಲ್ಲಿ ಮುಚ್ಚ ಲಾಗಿರುವ ಜನರಿಕ್‌ ಔಷಧಿ ಮಳಿಗೆಯನ್ನು ಪುನರಾ ಂಭಿಸುವಂತೆ ಹಾಗೂ ಜಿಲ್ಲಾಸ್ಪತ್ರೆ ಅವ್ಯವಸ್ಥೆ ಸರಿಪಡಿ ಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ನಗರದ ಜಿಲ್ಲಾಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದರು.

ಕರ್ನಾಟಕ ಸೇನಾಪಡೆಯ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಿಲ್ಲಾಸ್ಪತ್ರೆ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಜಿಲ್ಲಾಡಳಿತ, ಡೀನ್‌, ಆರೋಗ್ಯ ಸಚಿವರ ವಿರುದ್ಧ ಧಿಕ್ಕಾರ ಕೂಗಿ ದರು. ಜಿಲ್ಲಾ ಆಸ್ಪತ್ರೆ ಸತ್ತು ಹೋಗಿದೆ ಎಂದು ಪುರಿ ಚೆಲ್ಲುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಡೀನ್‌ ಭೇಟಿ: ಪ್ರತಿಭಟನೆ ಸ್ಥಳಕ್ಕೆ ಡೀನ್‌ ರಾಜೇಂದ್ರ, ಜಿಲ್ಲಾ ಸರ್ಜನ್‌ ಡಾ. ರಘುರಾಂ ಸರ್ವೇಗಾರ್‌ ಭೇಟಿ ನೀಡಿ, ಮಾತನಾಡಿ, ಜನರಿಕ್‌ ಔಷಧಿ ಮಳಿಗೆ ನಿರ್ಮಿ ಸಿರುವ ಜಾಗ ಜಿಲ್ಲಾಸ್ಪತ್ರೆಗೆ ಸೇರಿದ್ದು, ಆದರೆ ಮಳಿಗೆ ಯ ಕಟ್ಟಡ ನಮ್ಮದಲ್ಲ. ಎಚ್ಎಲ್ಎಲ್ ಕಂಪನಿ ಟೆಂ ಡರ್‌ ಪಡೆದುಕೊಂಡಿದೆ. ಜನರಿಕ್‌ ಮಳಿಗೆ ನಡೆಸುತ್ತಿದೆ. ಅದು ನಮ್ಮ ಅಧಿಕಾರದಲ್ಲಿಲ್ಲ ಎಂದು ಹೇಳಿದರು.

ಜಾಗದ ಸಮಸ್ಯೆ: ಇದರಿಂದ ಸಮಾಧಾನಿತರಾಗದ ಪ್ರತಿಭಟನಾಕಾರರು, ಬೇಜಾಬ್ದಾರಿಯುತ ಉತ್ತರ ನೀಡುತ್ತಿದ್ದೀರಾ ಎಂದು ಡೀನ್‌ ಅವರನ್ನು ತರಾಟೆ ತೆಗೆದುಕೊಂಡರು. ನಂತರ ಜಿಲ್ಲಾ ಸರ್ಜನ್‌ ಡಾ. ರಘುರಾಂ ಸರ್ವೇಗಾರ್‌ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆಯಲಾಗಿದೆ. ಎಂಎಸ್‌ಐಎಲ್ ಮೂಲಕ ಬೇರೊಂದು ಜನರಿಕ್‌ ಮಳಿಗೆ ತೆರೆಯಲು ನಿರ್ಧರಿಸಲಾಗಿದೆ. ಆದರೆ ಜಿಲ್ಲಾಸ್ಪತ್ರೆ ಯಲ್ಲಿ ಜಾಗದ ಸಮಸ್ಯೆಯಾಗಿದೆ ಎಂದರು.

ಭರವಸೆ ನೀಡಿದ ಅಧಿಕಾರಿಗಳು: ಇದೆಲ್ಲ ಸಬೂಬು ಬೇಡಿ. ಯಾವುದೇ ಕಾರಣ ಹೇಳದೇ ಶೀಘ್ರವೇ ಆಸ್ಪತ್ರೆ ಆವರಣದಲ್ಲಿ ಜನರಿಕ್‌ ಔಷಧಿ ಮಳಿಗೆ ತೆರೆದು ಬಡವರಿಗೆ ಅನುಕೂಲ ಮಾಡುವಂತೆ ಪಟ್ಟು ಹಿಡಿದರು. ಒಂದು ತಿಂಗಳೊಳಗೆ ಜೆನರಿಕ್‌ ಔಷಧಿ ಮಳಿಗೆ ತೆರೆಯುವುದಾಗಿ ಅಧಿಕಾರಿಗಳು ಭರವಸೆ ನೀಡಿದ ಮೇಲೆ ಪ್ರತಿಭಟನೆ ಅಂತ್ಯಗೊಳಿಸಿದರು.

ಹೋರಾಟದ ಎಚ್ಚರಿಕೆ: ಕರ್ನಾಟಕ ಸೇನಾಪಡೆಯ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕೇಂದ್ರ ಸರ್ಕಾರ ಬಡ ಜನರಿಗೆ ಕಡಿಮೆ ದರದಲ್ಲಿ ಔಷಧಿ ವಿತರಿಸುವ ಸಲುವಾಗಿ ದೇಶಾದ್ಯಂತ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಜನರಿಕ್‌ ಔಷಧಿ ಮಳಿಗೆ ತೆರೆದಿದೆ. ಆದರೆ ಚಾಮರಾಜನಗರ ಜಿಲ್ಲಾಸ್ಪತ್ರೆಯ ಜನರಿಕ್‌ ಔಷಧಿ ಮಳಿಗೆ ಕಳೆದ 4 ತಿಂಗಳಿನಿಂದ ಮುಚ್ಚಿದ್ದು, ಬಡಜನರಿಗೆ ತೊಂದರೆಯಾಗಿದೆ. ಆಸ್ಪತ್ರೆಯ ವೈದ್ಯರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು. ಇಲ್ಲದಿದ್ದರೆ ಚಾಮರಾಜನಗರ ಬಂದ್‌ ಘೋಷಿಸುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಶಾ.ಮುರಳಿ, ಚಾ.ಸಿ.ಸೋಮ ನಾಯಕ, ಚಾ.ಗು. ನಾಗರಾಜು, ಪುರುಷೋ ತ್ತಮ್‌, ನಿಜಧ್ವನಿ ಗೋವಿಂದರಾಜು, ಶಿವಶಂಕರನಾಯಕ, ವೀರಭದ್ರ, ತಾಂಡವಮೂರ್ತಿ, ಸ್ವಾಮಿ, ಮಹೇಶ್‌ಗೌಡ, ನಂಜುಂಡಸ್ವಾಮಿ, ಚಂದ್ರಣ್ಣ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.