ಭತ್ತದ ಹುಲ್ಲಿಗೆ ಬೇಡಿಕೆ ಇದ್ದರೂ, ಬೆಲೆ ಕಡಿಮೆ


Team Udayavani, Jan 7, 2020, 1:13 PM IST

cn-tdy-1

ಯಳಂದೂರು: ಈ ಬಾರಿ ಉತ್ತಮ ಮಳೆ ಹಾಗೂ ಕಬಿನಿ ಕಾಲುವೆಯಲ್ಲಿ ನೀರು ಬಿಟ್ಟ ಪರಿಣಾಮ ತಾಲೂಕಿನಲ್ಲಿ ಭತ್ತದ ಫ‌ಸಲು ಉತ್ತಮವಾಗಿ ಬಂದಿದೆ. ಕಳೆದ ಬಾರಿ ಭತ್ತ ಕಡಿಮೆ ಬೆಳೆದಿದ್ದರಿಂದ ಮೇವಿನ ಕೊರತೆ ಕಾಣಿಸಿಕೊಂಡಿತ್ತು. ಆದರೆ, ಈ ಬಾರಿ ಹುಲ್ಲು ಸಮೃದ್ಧವಾಗಿದೆ. ಆದರೂ ಬೇಡಿಕೆ ಹೆಚ್ಚಾಗಿದೆ. ಕಳೆದ ಬಾರಿಗೆ ಹೋಲಿಸಿಕೊಂಡಲ್ಲಿ ಈಗ ಹುಲ್ಲಿನ ಬೆಲೆ ತಗ್ಗಿದೆ.

ತಾಲೂಕಿನಲ್ಲಿ ಈ ಬಾರಿ 3500 ಹೆಕ್ಟೇರ್‌ಗಿಂತ ಹೆಚ್ಚು ಭೂ ಪ್ರದೇಶದಲ್ಲಿ ಭತ್ತವನ್ನು ಬೆಳೆಯಲಾಗಿದೆ. ಈಗಾಗಲೇ ಭತ್ತವನ್ನು ಕಟಾವು ಮಾಡಲಾಗುತ್ತಿದೆ. ಭತ್ತ ಕೊಯ್ಯುವ ಯಂತ್ರಗಳು ಎಲ್ಲೆಡೆ ಯಂತ್ರಗಳ ಸದ್ದು ಕೇಳುತ್ತಿದೆ. ಕಳೆದ ಬಾರಿ ಬರವಿದ್ದರಿಂದ ಗೋ ಶಾಲೆಗಳನ್ನು ತೆರೆಯಲಾಗಿತ್ತು. ಆದರೆ, ಈ ಬಾರಿ ಪರಿಸ್ಥಿತಿ ಭಿನ್ನವಾಗಿದ್ದು, ಸಮೃದ್ಧ ಮೇವು ಸಿಗುವ ಆಶಾ ಭಾವನೆ ಹೈನುಗಾರರಲ್ಲಿ ಮೂಡಿದೆ.

ರಾಸುಗಳಿಗೆ ಹುಲ್ಲು ಸಂಗ್ರಹ: ಭತ್ತದ ಹುಲ್ಲನ್ನು ಹೈನುಗಾರರು ತಾವು ಸಾಕಿರುವ ರಾಸುಗಳಿಗೆ ವರ್ಷ ಪೂರ್ತಿ ತಿನ್ನಿಸಲು ದಾಸ್ತಾನುಗಳನ್ನು ಮಾಡಿಕೊಳ್ಳುವ ಪರಿಪಾಠವಿದೆ. ಇದಕ್ಕಾಗಿ ದೊಡ್ಡ ದೊಡ್ಡ ಬಣವೆಗಳನ್ನು ಹಾಕಲಾಗುತ್ತದೆ. ಒಂದು ರಾಸು ಹಸಿ ಹುಲ್ಲು, ತಿಂಡಿಗಳನ್ನು ನೀಡಿಯೂ ಪ್ರತಿನಿತ್ಯ ಸರಾಸರಿ 5ರಿಂದ 6 ಕಿಲೋ ಒಣ ಹುಲ್ಲನ್ನು ತಿನ್ನುತ್ತದೆ. ಈ ಹಿನ್ನೆಲೆಯಲ್ಲಿ ಹೈನುಗಾರರು ಹುಲ್ಲನ್ನು ಸಂಗ್ರಹಿಸಲು ಗದ್ದೆಗಳಿಗೆ ತೆರಳಿ ಅಲ್ಲೇ ಖರೀದಿ ಮಾಡುವ ಪ್ರಕ್ರಿಯೆಗೆ ತಾಲೂಕಿನಲ್ಲಿ ಚಾಲನೆ ಸಿಕ್ಕಿದೆ.

ಯಂತ್ರದಿಂದ ಕೊಯ್ದ ಹುಲ್ಲಿಗೆ ಬೆಲೆ ಕಡಿಮೆ: ಯಂತ್ರದಿಂದ ಕಟಾವು ಮಾಡುವ ಹುಲ್ಲಿಗೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಇದೆ. ಕೈಯಲ್ಲಿ ಕೊಯ್ಯುವ ಭತ್ತದ ಹುಲ್ಲಿಗೆ ಬೇಡಿಕೆ ಹೆಚ್ಚಿದೆ. ಆದರೆ, ಈಗ ಎಲ್ಲೆಡೆ ಯಂತ್ರಗಳೇ ಭತ್ತ ಕಟಾವು ಮಾಡಿ ಒಕ್ಕಣೆ ಮಾಡುವುದರಿಂದ ಈ ಹುಲ್ಲು ಕಾಣುವುದು ಕಡಿಮೆಯಾಗಿದೆ. ಕಳೆದ ಬಾರಿ ಒಂದು ಕಂತೆ ಹುಲ್ಲಿಗೆ 12ರಿಂದ 15 ರೂ. ಬೆಲೆ ಇತ್ತು. ಈಗ 10ರಿಂದ 12 ರೂ.ಗೆ ಬೆಲೆ ಕಡಿಮೆಯಾಗಿದೆ. ಆಲ್ಲದೆ, ಒಂದು ಎಕರೆಗೆ ಹುಲ್ಲಿಗೆ ಕಳೆದ ಬಾರಿ 3000 ರೂ. ಇದ್ದ ಬೆಲೆ ಈಗ 2500 ರೂ.ಗೆ ಕಡಿಮೆಯಾಗಿದೆ. ಕಂತೆಗಳನ್ನು ಕಟ್ಟಲು ಯಂತ್ರದ ಹುಲ್ಲು ಕಿರಿದಾಗುವುದರಿಂದ ಕೈಯಲ್ಲೇ ಭತ್ತವನ್ನು ಕೊಯ್ದು ಒಕ್ಕಣೆ ಮಾಡಿ, ಕಂತೆ ಕಟ್ಟಲು ಹದಗೊಳಿಸಲಾಗುತ್ತದೆ.

 

ಪೈರೋಜ್‌ ಖಾನ್‌

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.