Kollegala: ಐತಿಹಾಸಿಕ ಮರಳೇಶ್ವರ ಚಂದ್ರ ಪುಷ್ಕರಣಿ ಅಭಿವೃದ್ಧಿ ನನೆಗುದಿಗೆ


Team Udayavani, Sep 18, 2023, 3:36 PM IST

Kollegala: ಐತಿಹಾಸಿಕ ಮರಳೇಶ್ವರ ಚಂದ್ರ ಪುಷ್ಕರಣಿ ಅಭಿವೃದ್ಧಿ ನನೆಗುದಿಗೆ

ಕೊಳ್ಳೇಗಾಲ: ನಗರದ ಹೃದಯ ಭಾಗದ 1800 ವರ್ಷದ ಇತಿಹಾಸವುಳ್ಳ ಮರಳೇಶ್ವರ ದೇವಾಲಯದ ಚಂದ್ರ ಪುಷ್ಕರಣಿ ಅಭಿವೃದ್ಧಿ ಕಾಮಗಾರಿ ಸ್ಥಗಿತಗೊಂಡು ಅಭಿವೃದ್ಧಿಯಾಗದೆ ನನೆಗುದಿಗೆ ಬಿದ್ದಿದೆ.

ಪುಷ್ಕರಣಿಯ ಇತಿಹಾಸ: ಕಳೆದ 1800 ವರ್ಷಗಳ ಹಿಂದೆ ನಗರದ ಮರಳೇಶ್ವರ ದೇವಾಲಯ ಮತ್ತು ಪುಷ್ಕರಣಿ ಸ್ಥಾಪನೆಯಾಗಿರುವ ಬಗ್ಗೆ ಶಿಲಾ ಶಾಸನದಲ್ಲಿ ಉಲ್ಲೇಖವಿರುವುದು ದಂತಕಥೆ. ಈ ದೇವಾಲಯಕ್ಕೆ ಅಕ್ಷಯ ತೃತೀಯ ದಿನದಂದು ಕಾಶಿಗಂತೆ ಬರುತ್ತದೆ. ಇದರ ಬಗ್ಗೆ ಮೈಸೂರಿನ ಪಂಚಾಂಗದಲ್ಲಿ ಉಲ್ಲೇಖವಿದೆ. ದೇವಾಲಯಗಳಲ್ಲೇ ಶ್ರೇಷ್ಠ ದೇವಾಲಯವಾಗಿದೆ. ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಪುಷ್ಕರಣಿ ಅಭಿವೃದ್ಧಿಗೆ 2.50 ಕೋಟಿ ಮಂಜೂರು ಆಗಿ ವಿನ್ಯಾಸ ಕಾಮಗಾರಿಗೆ ಚಾಲನೆ ಲಭಿಸಿತ್ತು. ಕಾಮಗಾರಿಯನ್ನು ಗುತ್ತಿಗೆ ಪಡೆದ ಗುತ್ತಿಗೆದಾರರು ಕೆಲಸವನ್ನು ಆರಂಭಿಸಿ ಅರ್ಧಕ್ಕೆ ಸ್ಥಗಿತಗೊಳಿಸಿ ಕಳೆದ ಮೂರು ತಿಂಗಳಿಂದ ಯಾವುದೇ ತರಹದ ಕೆಲಸ ನಡೆಯದೆ ಸಂಪೂರ್ಣ ನೆಲಕಚ್ಚಿದೆ.

ಮರಗಳ ತೆರವು: ಪುಷ್ಕರಣಿ ಅಭಿವೃದ್ಧಿಗಾಗಿ ಇದ್ದ ಮರಗಳನ್ನು ಬೇರು ಸಹಿತ ಕಿತ್ತು ಸ್ಥಳದಲ್ಲೇ ಬಿಸಾಡಿದ್ದು ಮರಳು ಬಿಸಿಲಿನ ತಾಪಕ್ಕೆ ಒಣಗಿ ಕೊಳದ ಸೌಂದ ರ್ಯಕ್ಕೆ ಮರೆಮಾಚುವಂತೆ ದಿಕ್ಕಾಪಾಲಾಗಿ ಬಿದ್ದಿವೆ. ಪರಸೆ ಜನರಿಗೆ ನಿರಾಸೆ: ಹನೂರು ತಾಲೂಕಿನ ಮಲೈ ಮಹದೇಶ್ವರ ಬೆಟ್ಟಕ್ಕೆ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸಿ ಪೂಜೆಯ ಬಳಿಕ ಪರಸೆ ಜನ ನಗರದ ಮರಳೇಶ್ವರ ಚಂದ್ರ ಪುಷ್ಕರಣಿ ಸ್ಥಳದಲ್ಲಿ ತಂಗುತ್ತಾರೆ. ನಂತರ ಬೆಳಗ್ಗೆ ಎದ್ದು ದೇವರಿಗೆ ಪೂಜೆ ಸಲ್ಲಿಸಿ ತಮ್ಮ ಊರುಗಳಿಗೆ ತೆರಳುವುದು ಪದ್ಧತಿ. ಆದರೆ, ಅಭಿವೃದ್ಧಿ ಕಾಮಗಾರಿ ನೆಪದಲ್ಲಿ ಸುತ್ತ ಬೇಲಿ ನಿರ್ಮಾಣದಿಂದ ಭಕ್ತರು ದೇವರ ದರ್ಶನದಿಂದ ವಂಚಿತರಾಗಿ ನಿರಾಸೆಯಿಂದ ತೆರಳುತ್ತಿದ್ದಾರೆ.

ಭಕ್ತರ ಆಗ್ರಹ: ದೇವಾಲಯ ಸರ್ಕಾರಿ ಸ್ವಾಮ್ಯದಲ್ಲಿ ಇದ್ದು ಕೂಡಲೇ ಕುಂಟಿತಗೊಂಡಿರುವ ಕಾಮಗಾರಿ ಬಗ್ಗೆ ಗಮನ ಹರಿಸಿ ಶೀಘ್ರದಲ್ಲಿ ಕಾಮಗಾರಿ ಆರಂಭಿಸಬೇಕು. ಈ ಮೂಲಕ ಭಕ್ತರಿಗೆ ಅನುಕೂಲ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ.

ಮುಜರಾಯಿ ಇಲಾಖೆಗೆ ಸೇರಿದ ದೇವಾಲಯ ಬಹಳ ವರ್ಷಗಳಿಂದ ಅಭಿವೃದ್ಧಿಯಲ್ಲಿ ಕುಂಠಿತವಾಗಿರುವ ದೇವಾಲಯದ ಬಗ್ಗೆ ಸರ್ಕಾರ ಗಮನ ಹರಿಸಿ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಬೇಕು. ● ಡಾ.ನಾಗೇಂದ್ರ ಎನ್‌.ಭಟ್‌,ದೇವಾಲಯದ ಪ್ರಧಾನ ಅರ್ಚಕರು

ದೇವಾಲಯದ ಅಭಿವೃದ್ಧಿ ಕಾಮಗಾರಿ ಕುಂಠಿತ ವಾಗಿರುವ ಬಗ್ಗೆ ಅಧಿಕಾರಿಗಳೊಂದಿಗೆ ಶೀಘ್ರದಲ್ಲಿ ಚರ್ಚೆ ಮಾಡುತ್ತೇನೆ. ಅಲ್ಲದೇ, ಕೂಡಲೇ ಕಾಮಗಾರಿಗೆ ಚಾಲನೆ ನೀಡಲು ಕ್ರಮ ವಹಿಸುತ್ತೇನೆ. ● ಎ.ಆರ್‌.ಕೃಷ್ಣಮೂರ್ತಿ, ಶಾಸಕರು

– ಡಿ.ನಟರಾಜು

ಟಾಪ್ ನ್ಯೂಸ್

suicide

IAS ಅಧಿಕಾರಿ ದಂಪತಿಯ ಪುತ್ರಿ 10 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Next Lok Sabha polls to be over by end of April : Chief Election Commissioner

Election: ಮುಂದಿನ ಲೋಕಸಭೆ ಚುನಾವಣೆ ಎಪ್ರಿಲ್ ಅಂತ್ಯದೊಳಗೆ ಮುಗಿಸುತ್ತೇವೆ: ಚುನಾವಣಾ ಆಯೋಗ

Deralakatte: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

Deralakatte: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

Kedar Jadhav

Kedar Jadhav; ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ ಆಲ್ ರೌಂಡರ್ ಕೇದಾರ್ ಜಾಧವ್

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewewq

Bandipur ಸಫಾರಿ ಜೋನ್ ನಲ್ಲೇ ಮರಿಗೆ ಜನ್ಮ ನೀಡಿದ ಕಾಡಾನೆ: ವಿಡಿಯೋ ವೈರಲ್

11-Yelandur

Yelandur: ಚಾಲಕನ ನಿಯಂತ್ರಣ ತಪ್ಪಿದ ಬಸ್; 40ಕ್ಕೂ ಹೆಚ್ಚು ಮಂದಿಗೆ ಗಾಯ

1-qwewqewqewq

Bandipur: ಮರಿಗಳ ಜತೆ ನಿದ್ರೆಗೆ ಜಾರಿದ ತಾಯಿ ಹುಲಿಯ ದೃಶ್ಯ ವೈರಲ್

7-kollegala

ಕಲುಷಿತ ನೀರು ಸೇವಿಸಿದ ಗ್ರಾಮಸ್ಥರಿಗೆ ವಾಂತಿ-ಭೇದಿ; ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ

10-gundlupete

Gundlupete: ಕಲ್ಲುಕಟ್ಟೆ ಜಲಾಶಯಕ್ಕೆ ಹಾರಿ ಯುವಕ ಆತ್ಮಹತ್ಯೆ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

Sandalwood: Mandela ready for shooting

Sandalwood: ಮಂಡೇಲಾ ಶೂಟಿಂಗ್ ಗೆ ರೆಡಿ

suicide

IAS ಅಧಿಕಾರಿ ದಂಪತಿಯ ಪುತ್ರಿ 10 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Next Lok Sabha polls to be over by end of April : Chief Election Commissioner

Election: ಮುಂದಿನ ಲೋಕಸಭೆ ಚುನಾವಣೆ ಎಪ್ರಿಲ್ ಅಂತ್ಯದೊಳಗೆ ಮುಗಿಸುತ್ತೇವೆ: ಚುನಾವಣಾ ಆಯೋಗ

ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ: ಮಂತ್ರಾಲಯ ಶ್ರೀ ಸಂದೇಶ

ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ: ಮಂತ್ರಾಲಯ ಶ್ರೀ ಸಂದೇಶ

Deralakatte: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

Deralakatte: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.