ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಹೊರಟ ಜನಸಾಗರ  

ತಂಗಲು ಸ್ಥಳಾವಕಾಶ ಇಲ್ಲದೆ ಯಾತ್ರಿಕರಿಂದ ತುಂಬಿ ಹೋದ ಕೊಟ್ಟಿಗೆಹಾರ

Team Udayavani, Mar 10, 2021, 8:45 PM IST

Dharmastal

ಕೊಟ್ಟಿಗೆಹಾರ: ಶಿವರಾತ್ರಿ ಅಂಗವಾಗಿ ಬೆಂಗಳೂರು ಮೂಲಕ ಧರ್ಮಸ್ಥಳಕ್ಕೆ ಸಹಸ್ರಾರು ಜನರು ತೆರಳುತ್ತಿದ್ದಾರೆ. ಧರ್ಮಸ್ಥಳದ ಪಾದಯಾತ್ರೆಗೆ ಕೊಟ್ಟಿಗೆಹಾರದಲ್ಲಿ ಯಾತ್ರಿಕರಿಗೆ ಮಲಗಲು ಸ್ಥಳವಿಲ್ಲದೇ ಬಸ್‌ ನಿಲ್ದಾಣ, ಶಾಲೆ, ಮತ್ತಿತರ ಕಡೆ ಟೆಂಟ್‌ ಹಾಕಿದರೂ ಜನರಿಗೆ ತಂಗಲು ಸ್ಥಳಾವಕಾಶ ಇಲ್ಲದೇ ಕೊಟ್ಟಿಗೆಹಾರ ಯಾತ್ರಿಕರಿಂದ ಸೋಮವಾರ ತುಂಬಿ ಹೋಗಿತ್ತು.

ಪಾದಯಾತ್ರಿಕರಿಗೆ ದಾನಿಗಳು ಉಚಿತ ಫಲಾಹಾರ, ತಂಪು ಪಾನೀಯ ವಿತರಿಸುವ ಮೂಲಕ ಗಮನ ಸೆಳೆದರು. ಸುಮಾರು ಐದಾರು ವರ್ಷಗಳಿಂದ ಪಾದಯಾತ್ರಿಗಳಿಗೆ ಸೇವೆ ನೀಡುತ್ತಿದ್ದು, ಸೋಮವಾರ ಕೊಟ್ಟಿಗೆಹಾರ ವೇಣು ಗೋಪಾಲ್‌ ಪೈ ಅವರ ಮನೆ ಮುಂದೆ ಪೆಂಡಾಲ್‌ ಹಾಕಿ ಬೆಂಗಳೂರಿನ ರೇವಣ್ಣ ಅವರ ತಂಡ ಸುಮಾರು 10 ಸಾವಿರಕ್ಕೂ ಅಧಿಕ ಮಂದಿಗೆ ಕೋಸಂಬರಿ, ಮಜ್ಜಿಗೆ, ಕಲ್ಲಂಗಡಿ ಹಣ್ಣು ಹಾಗೂ ತಂಪು ಪಾನೀಯ ವಿತರಿಸಿದೆ. ಬಸವೇಶ್ವರ ನಗರದ ರೇವಣ್ಣ ಪತ್ರಿಕೆಯೊಂದಿಗೆ ಮಾತನಾಡಿ, ಪ್ರತಿವರ್ಷವೂ ನಿರಂತರವಾಗಿ ಈ ಸೇವೆ ಮಾಡುತ್ತಾ ಬಂದಿದ್ದೇವೆ. ಈ ಉಚಿತ ಸೇವೆಯನ್ನು 10 ವರ್ಷದ ಹಿಂದೆ ಆರಂಭಿಸಿದ್ದು, 3 ವರ್ಷ ಬೆಂಗಳೂರಿನಲ್ಲಿಯೇ ಮಾಡುತ್ತಿದ್ದೆವು. ಆದರೆ, ದೂರದ ಪ್ರಯಾಣದ ಪಾದಯಾತ್ರೆಯಾದ್ದರಿಂದ ಕೊಟ್ಟಿಗೆಹಾರ ಪ್ರವಾಸಿ ತಾಣವೂ ಆಗಿರುವುದರಿಂದ ಹಾಗೂ ಚಾರ್ಮಾಡಿ ಘಾಟಿ ಇರುವುದರಿಂದ ಜನರಿಗೆ ಮಾರ್ಗದರ್ಶನ ನೀಡುವ ಸಲುವಾಗಿ ಕೊಟ್ಟಿಗೆಹಾರ ಆಯ್ಕೆ ಮಾಡಿ ಆಯಾಸವಾಗಿ ಬಂದ ಪ್ರಯಾಣಿಕರಿಗೆ ಉಚಿತ ಸೇವೆ ನೀಡುತ್ತಿದ್ದೇವೆ. ಇಂತಹ ಕಾರ್ಯಗಳಿಂದ ನಮಗೆ ನೆಮ್ಮದಿ, ಮನಃಶಾಂತಿ ಸಿಗುತ್ತದೆ ಎಂದರು.

ಸ್ಥಳೀಯರಾದ ಸಂಜಯ್‌ ಗೌಡ ಮಾತನಾಡಿ, ಸೋಮವಾರ ಹತ್ತು ಸಾವಿರಕ್ಕೂ ಅಧಿ ಕ ಮಂದಿ ಕೊಟ್ಟಿಗೆಹಾರದಲ್ಲಿ ಮಲಗಿದ್ದಾರೆ. ಸರ್ಕಾರಿ ಬಸ್‌ ನಿಲ್ದಾಣದಲ್ಲಿ ಬಸ್‌ಗಳ ಸಂಚಾರ ಇಲ್ಲದೇ ಇರುವುದರಿಂದ ಪಾದಯಾತ್ರಿಗಳು ಸುಮಾರು 2 ಸಾವಿರ ಮಂದಿ ಯಾತ್ರಿಕರು ಉಳಿದುಕೊಡಿದ್ದಾರೆ. ಕೊಟ್ಟಿಗೆಹಾರದಲ್ಲಿ ಒಂದೇ ಸ್ಥಳದಲ್ಲಿ ಅಲ್ಲದೇ ಹಲವು ಕಡೆ ತಂಡೋಪತಂಡವಾಗಿ ಭಕ್ತರು ಉಳಿದಿದ್ದಾರೆ. ಭಕ್ತಾ ದಿಗಳಿಗೆ ಮೂಲಸೌಲಭ್ಯ ಹಾಗೂ ಶೌಚಾಲಯದ ಕೊರತೆಯಿದೆ. ಮುಂದಿನ ವರ್ಷಗಳಲ್ಲಿ ಸರ್ಕಾರದ ವತಿಯಿಂದ ಜನರಿಗೆ ಉಳಿಯಲು ಸಮುದಾಯ ಭವನ, ಸೌಚಾಲಯ, ಮೂತ್ರಾಲಯಗಳ ಅವಶ್ಯಕತೆ ಮುಖ್ಯವಾಗಿ ಬೇಕಾಗಿರುವುದರಿಂದ ಜಿಲ್ಲಾಡಳಿತ ಈ ಬಗ್ಗೆ ಸೌಲಭ್ಯ ಕಲ್ಪಿಸುವುದು ಒಳಿತು ಎಂದರು.

ಪಾದಯಾತ್ರೆಯಲ್ಲಿ ಬೆಂಗಳೂರು, ಕುಣಿಗಲ್‌, ಕಾಮಾಕ್ಷಿಪಾಳ್ಯ, ಕೋಲಾರ, ಮಂಡ್ಯ, ಬಳ್ಳಾರಿ, ಚೆನ್ನರಾಯಪಟ್ಟಣ, ಕೋಲಾರ, ಮೈಸೂರು, ಹಾಸನ, ಚಿಕ್ಕಮಗಳೂರು, ಮೂಡಿಗೆರೆ ಸೇರಿದಂತೆ ಹಲವು ಕಡೆಯಿಂದ ಜನ ಸಾಗರ ಶಿವರಾತ್ರಿ ಅಂಗವಾಗಿ ಧರ್ಮಸ್ಥಳಕ್ಕೆ ಹರಿದು ಬಂದಿದೆ.

ಈ ಬಾರಿ ಪಾದಯಾತ್ರಿಕರಿಗೆ ರಸ್ತೆ ವಿಸ್ತರಣೆಗೆ ಮರಗಳನ್ನು ಕಡಿತಲೆ ಮಾಡಿರುವುದರಿಂದ ಎಲ್ಲಿಯೂ ವಿಶ್ರಾಂತಿ ಪಡೆಯಲು ರಸ್ತೆ ಬದಿಯ ಮರವಿಲ್ಲದೇ ತೊಂದರೆಯಾಗಿದೆ. ಮರಗಳ ಮಹತ್ವ ಏನು ಎಂಬುದು ಈ ಬಾರಿ ನಮಗೆ ಗೊತ್ತಾಗಿದೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಬೇಕು.   (ಮಂಜುನಾಥ್‌, ಚನ್ನರಾಯಪಟ್ಟಣ)

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.