ನಂದಿನಿ ಸಿಹಿ ಉತ್ಪನ್ನಗಳ ರಿಯಾಯಿತಿ ಮಾರಾಟ
Team Udayavani, Dec 26, 2019, 3:00 AM IST
ಚಾಮರಾಜನಗರ: ಕರ್ನಾಟಕ ಹಾಲು ಮಹಾಮಂಡಲಿದಿಂದ ರಾಜ್ಯಾದ್ಯಂತ ಕ್ರಿಸ್ಮಸ್ ಹಾಗೂ ನೂತನ ವರ್ಷ ಆಚರಣೆ ಅಂಗವಾಗಿ ಜ.2ರವರೆಗೆ ಒಂದು ವಾರಗಳ ಕಾಲ ಹಮ್ಮಿಕೊಂಡಿರುವ ನಂದಿನಿಸಿಹಿ ಉತ್ಪನ್ನಗಳ ರಿಯಾಯಿತಿ ಮಾರಾಟ ಮಾಡಲಾಗುತ್ತಿದ್ದು, ನಂದಿನಿ ಸಿಹಿ ಉತ್ಸವಕ್ಕೆ ಜಿಲ್ಲಾ ಕೇಂದ್ರದಲ್ಲಿ ಚಾಲನೆ ನೀಡಲಾಗಿದೆ.
ಜಿಲ್ಲೆಯ ಐದು ತಾಲೂಕು ಕೇಂದ್ರಗಳು ಹಾಗೂ ಹೋಬಳಿ ಮತ್ತು ಪಟ್ಟಣಗಳಲ್ಲಿರುವ ಅಧಿಕೃತ ನಂದಿನಿ ಮಳಿಗೆಗಳಲ್ಲಿ ನಂದಿನಿ ಸಿಹಿ ಉತ್ಪನ್ನಗಳ ಮುಖ ಬೆಲೆಗೆ ಶೇ.10ರಷ್ಟು ರಿಯಾಯಿತಿಯನ್ನು ನೀಡಿ, ಗ್ರಾಹಕರಿಗೆ ಅವಕಾಶ ಮಾಡಿಕೊಟ್ಟಿದೆ. ಅದರಂತೆ ಹನೂರಿನಲ್ಲಿ ಚಾಮುಲ್ ಅಧ್ಯಕ್ಷ ಸಿ.ಎಂ. ಗುರುಮಲ್ಲಪ್ಪ, ಕೊಳ್ಳೇಗಾಲದಲ್ಲಿ ಕೆಎಂಎಫ್ ನಿರ್ದೇಶಕ ನಂಜುಂಡಸ್ವಾಮಿ, ಚಾಮರಾಜನಗರದಲ್ಲಿ ಚಾಮುಲ್ ನಿರ್ದೇಶಕ ಮಲೆಯೂರು ರವಿಶಂಕರ್ ಚಾಲನೆ ನೀಡಿದರು.
ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ: ಚಾಮರಾಜನಗರ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿರುವ ಸರ್ಕಾರಿ ಅಸ್ಪತ್ರೆಯ ಮುಂಭಾಗದ ನಂದಿನಿ ಮಳಿಗೆಯನ್ನು ಚಾಮುಲ್ ನಿರ್ದೇಶಕ ರವಿಶಂಕರ್ ಉದ್ಘಾಟಿಸಿ, ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ ಮಾಡಿದರು. ಜೊತೆಗೆ ನಂದಿನಿ ಸಿಹಿ ಉತ್ಪನ್ನಗಳನ್ನು ಪ್ರದರ್ಶನ ಮಾಡುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು.
ಗುಣಮಟ್ಟದ ಹಾಲಿನಿಂದ ಸಿಹಿ ತಯಾರು: ಬಳಿಕ ಮಾತನಾಡಿದ ಅವರು, ಪ್ರತಿ ವರ್ಷ ಕೆಎಂಎಫ್ನಿಂದ ಹೊಸ ವರ್ಷಾಚರಣೆ ಮತ್ತು ಕ್ರಿಸ್ಮಸ್ ಹಬ್ಬಕ್ಕೆ ವಿಶೇಷ ರಿಯಾಯಿತಿ ದರದಲ್ಲಿ ಸಿಹಿ ಉತ್ಪನ್ನಗಳ ಮಾರಾಟವನ್ನು ಆಯೋಜನೆ ಮಾಡಲಾಗಿದೆ. ಜಿಲ್ಲೆಯ ಗ್ರಾಹಕರು ಗುಣಮಟ್ಟದ ನಂದಿನಿ ಹಾಲಿನಿಂದ ತಯಾರು ಮಾಡಿರುವ ಉತ್ಕೃಷ್ಠವಾದ ಸಿಹಿ ಉತ್ಪನ್ನಗಳನ್ನು ಸೇವನೆ ಮಾಡುವ ಮೂಲಕ ಹಬ್ಬವನ್ನು ಆಚರಣೆ ಮಾಡಬೇಕು. ಹೊಸ ವರ್ಷವನ್ನು ಸಂತೋಷದಿಂದ ಬರಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಚಾಮುಲ್ ಬೆಳೆಸುವುದು ನಮ್ಮ ಕರ್ತವ್ಯ: ಒಂದು ವಾರಗಳ ಕಾಲ ಈ ಉತ್ಸವ ನಡೆಯಲಿದ್ದು, ನಂದಿನಿ ಹಾಲಿನ ಮಳಿಗೆಗಳಲ್ಲಿ ಈ ವಿಶೇಷ ರಿಯಾಯಿತಿಯನ್ನು ನೀಡಲಾಗುತ್ತಿದೆ. ನೀವು ಖರೀದಿ ಮಾಡುವ ಒಂದು ಪ್ಯಾಕೆಟ್ ದರದಲ್ಲಿ ಶೇ.10ರಷ್ಟು ರಿಯಾಯಿತಿ ಗ್ರಾಹಕರಿಗೆ ದೊರೆಯಲಿದೆ. ರೈತರ ಸಂಸ್ಥೆಯಾಗಿರುವ ಚಾಮುಲ್ ಅನ್ನು ಉಳಿಸಿ ಬೆಳೆಸಬೇಕಾಗಿರುವುದು ನಮ್ಮೇಲ್ಲರ ಕರ್ತವ್ಯವಾಗಿದೆ.
ಹೀಗಾಗಿ ರೈತರು ಸಹ ಈ ಉತ್ಸವದಲ್ಲಿ ಭಾಗಿಯಾಗಿ ನಂದಿನಿ ಸಿಹಿ ಉತ್ಪನ್ನಗಳನ್ನು ಖರೀದಿ ಮಾಡಿ ಸೇವಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಚಾಮುಲ್ ಸಹಾಯಕ ವ್ಯವಸ್ಥಾಪಕ ಶಿವಕುಮಾರ್, ಮಾರುಕಟ್ಟೆ ಅಧಿಕಾರಿ ಸೈಯದ್, ರಾಘವೇಂದ್ರ ರಾವ್, ರವಿ, ನೂತನ, ಇಳಿಯಮೂರ್ತಿ, ಶಿವಪ್ರಸಾದ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ