ಮಹಾರಾಷ್ಟ್ರದ ಕಾರ್ಮಿಕರಿಗೆ ಆಹಾರ ಪದಾರ್ಥ ವಿತರಣೆ
Team Udayavani, Apr 8, 2020, 2:05 PM IST
ಕೊಳ್ಳೇಗಾಲ: ತಾಲೂಕಿನ ತೇರಂಬಳ್ಳಿ ಕೆರೆಯಲ್ಲಿ ಇದ್ದಿಲು ತಯಾರಿಕೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಮಹಾರಾಷ್ಟ್ರದ ರಾಯಘಡದ 26 ಕೂಲಿ ಕಾರ್ಮಿಕರ ಸ್ಥಳಕ್ಕೆ ಜಿಪಂ ಸಿಇಒ ನಾರಾಯಣರಾವ್ ಮಂಗಳವಾರ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.
ಈ ವೇಳೆ ಮಾತನಾಡಿದ ಅವರು, ಭಾರತ ಲಾಕ್ಡೌನ್ ಹಿನ್ನೆಲೆಯಲ್ಲಿ ನಿರಾಶ್ರಿತರಿಗೆ ತಲಾ 5 ಕೆ.ಜಿ. ಅಕ್ಕಿ, ಗೋಧಿ ಹಿಟ್ಟು 1 ಕೆ.ಜಿ, 1 ಕೆ.ಜಿ. ಸಕ್ಕರೆ, 1 ಲೀಟರ್ ಎಣ್ಣೆ, ಅರ್ಧ ಕೆ.ಜಿ. ಉಪ್ಪು, ಅರ್ಧ ಕೆ.ಜಿ. ಕಾರದಪುಡಿ, ಒಂದು ಲೀಟರ್ ಹಾಲು ವಿತರಣೆ ಮಾಡಲಾಗಿದೆ. 14ರ ಲಾಕ್ ಡೌನ್ ಬಳಿಕ ಸರ್ಕಾರದ ಆದೇಶದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೂಲಿಯನ್ನೇ ಆಶ್ರಯಿಸಿ ಜಿಲ್ಲೆಗೆ ಸುಮಾರು 100 ಕಾರ್ಮಿಕರು ವಲಸೆ ಬಂದಿದ್ದು, ಅವರ ಆರೋಗ್ಯ ತಪಾಸಣೆಮಾಡಲಾಗಿದೆ. ರಾತ್ರಿ ತಂಗಲು ಸಮುದಾಯ ಭವನ, ಶಾಲಾ ಕಟ್ಟಡಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದರು.
ಕೆರೆಗಳನ್ನು ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶಗಳಿಗೆ ನಗರದಿಂದ ಬಂದಿರುವವರಿಗೂ ಉದ್ಯೋಗ ನೀಡುವಂತೆ ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಈ ವೇಳೆ ತಾಪಂ ಇಒ ಪ್ರಕಾಶ್, ಕುಂತೂರು ಗ್ರಾಪಂ ಪಿಡಿಒ ಶೋಭರಾಣಿ, ವೈದ್ಯರು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್