ಹುಲಿ ಯೋಜನೆಗೆ ಬೆಟ್ಟ ಸೇರಿಸಬೇಡಿ


Team Udayavani, Feb 23, 2019, 7:29 AM IST

huli-yoj.jpg

ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರಬೆಟ್ಟ ಅರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಅರಣ್ಯ ಎಂದು ಘೋಷಿಸಬಾರದೆಂದು ಒತ್ತಾಯಿಸಿ ಜಿಲ್ಲಾ ಬುಡಕಟ್ಟು ಗಿರಿಜನರ ಅಭಿವೃದ್ಧಿ ಸಂಘದಿಂದ ನಗರದಲ್ಲಿ ಪ್ರತಿಭಟಿಸಲಾಯಿತು.

ನಗರದ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಅಲ್ಲಿಂದ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟಿಸಿದರು. ಸಾಂಪ್ರದಾಯಿಕ ಉಡುಗೆ ತೊಡುಗೆ ಧರಿಸಿ, ಬುಡಕಟ್ಟು ನೃತ್ಯ ಪ್ರದರ್ಶಿಸಿದರು.

3,500 ಕುಟುಂಬ: ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ಮುಖಂಡ ಡಾ. ಸಿ. ಮಾದೇಗೌಡ ಮಾತನಾಡಿ, ಮಲೆಮಹದೇಶ್ವರ ಬೆಟ್ಟ ವನ್ಯಜೀವಿಧಾಮ ವ್ಯಾಪ್ತಿಗೆ ಬೈಲೂರು, ಪಿ.ಜಿ.ಪಾಳ್ಯ, ಲೊಕ್ಕನಹಳ್ಳಿ, ದಿನ್ನಹಳ್ಳಿ, ಶಾಗ್ಯ, ಮೀಣ್ಯಂ, ಪೊನ್ನಾಚಿ, ಮಾರ್ಟಳ್ಳಿ ಗ್ರಾಮಗಳು ಒಳಪಡಲಿವೆ. ಈ ಎಲ್ಲಾ ಗ್ರಾಮಗಳಲ್ಲಿ 3,500 ಕುಟುಂಬಗಳು ವಾಸಿಸುತ್ತಿದ್ದು, ಇಲ್ಲಿನ ಜನತೆಗೆ ಶತಮಾನಗಳಿಂದಲೂ ಗೆಡ್ಡೆಗೆಣಸು, ಸೊಪ್ಪು, ಸೆದೆ ಸಂಗ್ರಹ ಮಾಡಿ, ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ.

ರಾಜ್ಯ ಸರ್ಕಾರ ಮಹದೇಶ್ವರ ಬೆಟ್ಟವನ್ನು ಹುಲಿ ಸಂರಕ್ಷಿತ ಅರಣ್ಯವಾಗಿ ಘೋಷಣೆ ಮಾಡಲು ರಾಷ್ಟ್ರೀಯ ಹುಲಿ ಯೋಜನಾ ಪ್ರಾಧಿಕಾರಕ್ಕೆ ವರದಿ ಕಳುಹಿಸಿದೆ. ಇದು ಸರಿಯಲ್ಲ ಎಂದು ದೂರಿದರು. ಪರಿಸರವಾದಿಗಳೆಂದು ಹೇಳಿಕೊಂಡು ಕೆಲವರು ಲಾಭದ ಉದ್ದೇಶದಿಂದ ಮಹದೇಶ್ವರ ಬೆಟ್ಟದಲ್ಲಿ ಹುಲಿಗಳು ಜಾಸ್ತಿಯಿವೆ ಎಂದು ಸುಳ್ಳು ವರದಿ ನೀಡಿ, ಅರಣ್ಯವಾಸಿಗಳಿಗೆ ತೊಂದರೆಯುಂಟು ಮಾಡುತ್ತಿದ್ದಾರೆ ಎಂದರು.

ಸಭೆ ಕರೆಯಿರಿ: ಪ್ರಾಧಿಕಾರಕ್ಕೆ ವರದಿ ಕಳುಹಿಸಿಕೊಡುವ ಮೊದಲು ರಾಜ್ಯ ಸರ್ಕಾರವು ಅರಣ್ಯದಂಚಿನಲ್ಲಿರುವ ಗ್ರಾಮ ಅರಣ್ಯಸಮಿತಿ ಸಭೆ ಕರೆದು ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಿತ್ತು. ಗ್ರಾಮ ಅರಣ್ಯಸಮಿತಿ ಜತೆ ಚರ್ಚಿಸದೇ ಮಹದೇಶ್ವರ ಬೆಟ್ಟವನ್ನು ಹುಲಿ ಯೋಜನೆಗೆ ಸೇರಿಸಲು ಹೊರಟಿರುವುದರಿಂದ ಸಾವಿರಾರು ಕುಟುಂಬಗಳಿಗೆ ತೊಂದರೆಯಾಗುತ್ತದೆ ಎಂದರು.

2006 ರ ಅರಣ್ಯಹಕ್ಕು ಕಾಯಿದೆಯಡಿ ಸೋಲಿಗರ 533 ಕುಟುಂಬಗಳಿಗೆ 1143 ಎಕರೆ ಭೂಮಿಯನ್ನು ಒಡೆತನಕ್ಕೆ ಲಭ್ಯವಿದೆ.  25 ಅರಣ್ಯ ಹಕ್ಕು ಸಮಿತಿಗಳು ಸಮುದಾಯ ಅರಣ್ಯ ಹಕ್ಕುಪತ್ರ ಪಡೆದಿವೆ. ಈಗಾಗಲೇ ಅರಣ್ಯ ಸಂರಕ್ಷಣೆ, ನಿರ್ವಹಣೆ, ಕಿರುಅರಣ್ಯ ಉತ್ಪನ್ನ ಸಂಗ್ರಹ ಮಾಡುವ ಮೂಲಕ ತಮ್ಮ ಜೀವನ ನಿರ್ವಹಣೆ ಮಾಡುತ್ತಿದ್ದಾರೆ.  

ಇಂಥ ಪರಿಸ್ಥಿತಿಯಲ್ಲಿ ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಣೆಯಾದರೆ ನಮ್ಮ ಕಿರು ಅರಣ್ಯ ಉತ್ಪನ್ನ ಸಂಗ್ರಹಕ್ಕೆ ಅವಕಾಶ ಇರುವುದಿಲ್ಲ. ನಮ್ಮನ್ನು ಈಗಿರುವ ಜಾಗದಿಂದ ಸ್ಥಳಾಂತರಿಸುವ ಕೆಲಸವೂ ನಡೆಯಲಿದೆ. ಆದ್ದರಿಂದ ಮದದೇಶ್ವರಬೆಟ್ಟ ವನ್ಯಧಾಮವನ್ನು ಹುಲಿ ಯೋಜನೆಗೆ ಸೇರಿಸಬಾರದು ಎಂದು ಆಗ್ರಹಿಸಿದರು.

ಪ್ರತಿಭಟನಾ ಮೆರವಣಿಗೆಯಲ್ಲಿ ಎಲ್ಲಾ ಪ್ರತಿಭಟನಾನಿರತರು ಬಾಯಿ, ತಲೆಗೆ ಹಸಿರು ಬಣ್ಣದ ಪಟ್ಟಿ ಕಟ್ಟಿಕೊಂಡಿದ್ದರು. ಗಿರಿಜನರ ತಂಡವೊಂದು ತಲೆಗೆ ಹಸಿರು ಎಲೆಯ ಕಿರೀಟ, ಮೈಗೆ ವಿಭೂತಿ ಬಳಿದುಕೊಂಡು ನಗಾರಿ, ತಮಟೆ ನೃತ್ಯ ಮಾಡಿ  ಗಮನ ಸೆಳೆಯಿತು. ಪ್ರತಿಭಟನೆಯಲ್ಲಿ ಬುಡಕಟ್ಟು ಸಂಘದ ಮುಖಂಡರಾದ ಸಿ.ಮಾದಪ್ಪ, ಮುತ್ತಯ್ಯ, ರಾಜೇಗೌಡ, ಕೋಣೂರೇಗೌಡ, ಎಂ.ಜಡೇಸ್ವಾಮಿ, ಮಹದೇವ, ವಿಠಲ. ದೊಡ್ಡಯ್ಯ, ರಂಗೂಗೌಡ, ಸೋಮಶೇಖರ್‌, ವಿಜಯಕುಮಾರ್‌, ಕುನ್ನಮರಿಗೌಡ ಇತರರಿದ್ದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.