ಪಡಿತರ ಪಡೆಯಲು ಹೆಬ್ಬೆಟ್ಟು ಬೇಡ, ಮೊದಲಿನಂತೆಯೇ ವಿತರಿಸಿ


Team Udayavani, Aug 27, 2021, 5:29 PM IST

ಪಡಿತರ ಪಡೆಯಲು ಹೆಬ್ಬೆಟ್ಟು ಬೇಡ, ಮೊದಲಿನಂತೆಯೇ ವಿತರಿಸಿ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ದಿನಗೂಲಿ ನೌಕರರನ್ನು ವರ್ಗಾವಣೆ ಮಾಡಿರುವ ಸಿಎಫ್ ನಟೇಶ್‌ ನಡೆ ಖಂಡಿಸಿ ಅರಣ್ಯ ಸಚಿವ ಉಮೇಶ್‌ ಕತ್ತಿ ಮುಂದೆ ಆದಿವಾಸಿ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದರು.

ಮೇಲುಕಾಮನಹಳ್ಳಿ ಹಾಡಿಗೆ ಗಿರಿಜನರ ಸಮಸ್ಯೆ ಆಲಿಸಲು ಸಚಿವರು ಭೇಟಿ ನೀಡಿದ ವೇಳೆ ಅಳಲು ತೋಡಿಕೊಂಡ ಮಹಿಳೆಯರು,ವರ್ಗಾವಣೆ ಮಾಡಿದರೆ 12 ಸಾವಿರ ಸಂಬಳದಲ್ಲಿ ಕುಟುಂಬವನ್ನು ಬಿಟ್ಟು ಹೇಗೆ ಬದುಕುವುದು? ಮನೆಯಲ್ಲಿ ಆರೋಗ್ಯ ಸರಿ ಇಲ್ಲದವರು ಇದ್ದಾರೆ ಎಂದು ಸಮಸ್ಯೆ ಬಿಚ್ಚಿಟ್ಟರು.

ಗಿರಿಜನರಿಗೆ ಸರ್ಕಾರದ ಎಲ್ಲಾ ಸೌಲಭ್ಯ ಸಿಗುತ್ತಿದೆಯಾ? ಪಡಿತರದಲ್ಲಿ ಏನು ಕೊಡುತ್ತಿದ್ದಾರೆ ಎಂದು ಸಚಿವರು ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕೆಲಮಹಿಳೆಯರು ಪಡಿತರ ‌ ಪಡೆಯುವುದಕ್ಕೆ ಹೆಬ್ಬೆರಳಿನ ಗುರುತು ನೀಡಲು ಕೆಲಸ ಕಾರ್ಯ ಬಿಟ್ಟು ಕಾಯಬೇಕಿದೆ. ಇದನ್ನು ರದ್ದು ಪಡಿಸಿ ಮೊದಲಿನಂತೆ ನೀಡಿ ಎಂದು ಮನವಿ ಮಾಡಿದರು.

ಕೆಲ ಪಡಿತರ ಕಾರ್ಡ್‌ಗಳಿಗೆ ಆಧಾರ್‌ ಲಿಂಕ್‌ ಆಗದೆ ಹೆಸರು ಬಿಟ್ಟು ಹೋಗಿದೆ. ನಾಡ ಕಚೇರಿಗೆ ಹೋದರೆ ಶೀಘ್ರ ಮಾಡಿಕೊಡುವುದಿಲ್ಲ. ಇದರಿಂದಾಗಿ ಕೂಲಿ ಬಿಟ್ಟು ಅಲೆದಾಡಬೇಕಿದೆ ಎಂದು ಸಚಿವರ ‌ ಬಳಿ ತಿಳಿಸಿದಾಗ ಗಿರಿಜನರು ಇರುವ ಜಾಗದಲ್ಲಿ ಕ್ಯಾಂಪ್‌ ಮಾಡಿ ಆಧಾರ್‌ ಸಮಸ್ಯೆ ಸರಿಪಡಿಸಿ ಎಂದು ತಹಶೀಲ್ದಾರ್‌ಗೆ ಸೂಚಿಸಿದರು.

ಇದನ್ನೂ ಓದಿ:ಬಿಗ್ ಬಿ ಬಾಡಿಗಾರ್ಡ್‍ಗೆ ಸಿಇಒಗಳ ಸಂಬಳಕ್ಕಿಂತ ಹೆಚ್ಚು ಆದಾಯ : ವರದಿ ಬೆನ್ನಲ್ಲೆ ವರ್ಗಾವಣೆ

ಗಿರಿಜನರಿಗೆ ಹಿಂದೆ ಬೆಟ್ಟ ಕುರುಬ ಎಂದು ಜಾತಿ ಪ್ರಮಾಣ ಪತ್ರ ನೀಡುತ್ತಿದ್ದರು. ಇದೀಗ ಕಾಡು ಕುರುಬ ಎಂದು ನೀಡುತ್ತಿದ್ದಾರೆ. ಇದರಿಂದಾಗಿ ಶಾಲೆ ಹಾಗೂ ಬ್ಯಾಂಕ್‌ಗಳಲ್ಲಿ ತೊಂದರೆಯಾಗುತ್ತಿದೆ ಇದನ್ನು ಸರಿಪಡಿಸಿ ಎಂದು ಗಿರಿಜನ ‌ರು ಮನವಿ ಮಾಡಿದರು.

ಶಾಸಕ ಸಿ.ಎಸ್‌.ನಿರಂಜನ್‌ ಕುಮಾರ್‌, ಪಿಸಿಸಿಎಫ್ ಹೀರಾಲಾಲ್‌, ಹುಲಿ ಯೋಜನೆ ನಿರ್ದೇಶಕ ಎಸ್‌.ಆರ್‌.ನಟೇಶ್‌ , ಪಿಕಾರ್ಡ್‌
ಬ್ಯಾಂಕ್‌ ಅಧ್ಯಕ್ಷ ಎನ್‌.ಮಲ್ಲೇಶ್‌, ನಿರ್ದೇಶಕ ಚನ್ನಮಲ್ಲೀಪುರ ಬಸವಣ್ಣ, ತಾಪಂ ಮಾಜಿ ಸದಸ್ಯ ಸಿ.ಮಹದೇವ ಪ್ರಸಾದ್‌, ಮುಖಂಡರಾದ ಮಾಡ್ರಹಳ್ಳಿ ನಾಗೇಂದ್ರ,ಮಲ್ಲೇಶ್‌, ಮಹೇಂದ್ರ, ರಾಜಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕೆಲಸ ಮುಗಿಸದಿದ್ದರೆ ಅಮಾನತು: ಸಚಿವ
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಾಣ ಮಾಡಿರುವ ಮನೆಗಳ ಕಳಪೆ ಗುಣಮಟ್ಟದಿಂದ ಕೂಡಿದೆ, ಶೌಚಾಲಯಗಳನ್ನು ಸರಿಯಾದ ಕ್ರಮದಲ್ಲಿ ಮಾಡಿಲ್ಲ, ಕೆಲಸ ಮುಗಿಸುವ ಭರದಲ್ಲಿ ಹಾಗೆ ಬಿಟ್ಟಿದ್ದಾರೆ ಎಂದು ಮಹಿಳೆಯರು ದೂರಿದರು. ಈ ವೇಳೆ ಸಚಿವರು ಸಮಾಜ
ಕಲ್ಯಾಣಇ ಲಾಖೆಯ ಉಪನಿರ್ದೇಶಕರನ್ನು ಕರೆದು ಶೀಘ್ರವಾಗಿ ಕೆಲಸ ಮಾಡಿಸಬೇಕು. ಇಲ್ಲವಾದಲ್ಲಿ ನಿನ್ನ ಅಮಾನತು ಮಾಡಿಸುವೆ ಎಂದು ಎಚ್ಚರಿಕೆ ನೀಡಿದರು.

 

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.