ಖಾಸಗಿ ವೈದ್ಯರು ಕೋವಿಡ್ ಲಕ್ಷಣಗಳಿಗೆ ಚಿಕಿತ್ಸೆ ನೀಡಬೇಡಿ
Team Udayavani, May 20, 2021, 4:28 PM IST
ಯಳಂದೂರು: ಖಾಸಗಿ ಕ್ಲಿನಿಕ್ಗಳಲ್ಲಿವೈದ್ಯರು ಜ್ವರ, ನೆಗಡಿ, ಕೆಮ್ಮು,ಬೇಧಿಯಂತಹ ಕಾಯಿಲೆಗಳಿಗೆ ಚಿಕಿತ್ಸೆನೀಡಬಾರದು, ಇವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಲು ಶಿಫಾರಸು ಮಾಡಬೇಕು ಎಂದು ಶಾಸಕ ಎನ್.ಮಹೇಶ್ ಸೂಚಿಸಿದರು.
ತಾಪಂ ಕಚೇರಿ ಆವರಣದಲ್ಲಿಬುಧವಾರ ನಡೆದ ಟಾಸ್ಕ್ಫೋರ್ಸ್ಸಮಿತಿ ಸಭೆಯಲ್ಲಿ ಮಾತನಾಡಿದ ಅವರು,ತಾಲೂಕಿನಲ್ಲಿ 8 ಕ್ಲಿನಿಕ್ ಹಾಗೂ ನರ್ಸಿಂಗ್ಹೋಂ ಇದೆ. ಇಲ್ಲಿನ ವೈದ್ಯರಿಗೆ ಈಗಾಗಲೇ ಈ ಬಗ್ಗೆ ಸೂಚಿಸಲಾಗಿದೆ. ಸಾರ್ವಜನಿಕರು ಇಂತಹ ಸಾಮಾನ್ಯ ಕಾಯಿಲೆಗಳಿಗೆ ಚಿಕಿತ್ಸೆಪಡೆದುಕೊಂಡಲ್ಲಿ ಅದು ತಾತ್ಕಾಲಿಕಶಮನವಷ್ಟೆ, ನಂತರ ಕೋವಿಡ್ ಲಕ್ಷಣಇದ್ದರೆ ಇದು ಉಲ½ಣವಾಗಿ ಕಡೆಯಹೊತ್ತಿನಲ್ಲಿ ಕೋವಿಡ್ ಕೇಂದ್ರಕ್ಕೆ ಬಂದರೆಪ್ರಾಣಕ್ಕೆ ಆಪತ್ತು ಬರುವ ಅಪಾಯವಿದೆ ಎಂದು ಎಚ್ಚರಿಕೆ ನೀಡಿದರು.
2 ಆ್ಯಂಬುಲೆನ್ಸ್ ಕೊಡುಗೆ: ಶಾಸಕರಪ್ರದೇಶಾಭಿವೃದ್ಧಿಯ ಅನುದಾನದಿಂದಶೇ.25ರಷ್ಟು ಕೋವಿಡ್ಗೆ ಬಳಸಿಕೊಳ್ಳಲು ಅವಕಾಶವಿದೆ. ಇದರಲ್ಲಿ ಯಳಂದೂರುಹಾಗೂ ಸಂತೆಮರಹಳ್ಳಿ ಆಸ್ಪತ್ರೆಗಳಿಗೆ 2ಆ್ಯಂಬುಲೆನ್ಸ್ ಅವಶ್ಯಕತೆ ಇದ್ದು ಇದನ್ನು ಖರೀದಿಸಲು ಕ್ರಮ ವಹಿಸಲಾಗಿದೆ.ಇದರೊಂಗೆ ಕೊಳ್ಳೇಗಾಲ ಉಪವಿಭಾಗಆಸ್ಪತ್ರೆಗೆ 82 ಲಕ್ಷ ರೂ. ವೆಚ್ಚದಲ್ಲಿ ಶಾಶ್ವತ ಆಕ್ಸಿಜನ್ ಜನರೇಟರ್ ಅಳವಡಿಸಲು ಈಗಾಗಲೇ ಕೆಆರ್ಐಡಿಎಲ್ಗೆ ಗುತ್ತಿಗೆ ನೀಡಲಾಗಿದ್ದು, 15 ದಿನದೊಳಗೆ ಇದುಪೂರ್ಣಗೊಳ್ಳಲಿದೆ.
ಸಭೆಯಲ್ಲಿ ತಹಶೀಲ್ದಾರ್ಜಯಪ್ರಕಾಶ್, ಇಒ ಉಮೇಶ್,ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ್ ಸಿಪಿಐ ಶೇಖರ್, ಸಿಡಿಪಿಒದೀಪಾ, ಮುಖ್ಯಾಧಿಕಾರಿ ಎಂ.ಸಿ. ನಾಗರತ್ನಗ್ರಾಪಂ ಪಿಡಿಒಗಳು ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್ಸಿ 671 ರ್ಯಾಂಕ್
ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್
Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ
Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು