ಅಧ್ಯಕ್ಷನಾದರೆ ಚಾ.ನಗರದಲ್ಲಿ ಸಮ್ಮೇಳನ


Team Udayavani, Dec 4, 2020, 10:54 AM IST

ಅಧ್ಯಕ್ಷನಾದರೆ ಚಾ.ನಗರದಲ್ಲಿ ಸಮ್ಮೇಳನ

ಚಾಮರಾಜನಗರ: ತಾನು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷನಾಗಿ ಆಯ್ಕೆಯಾದರೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಅಖೀಲ ಭಾರತ ಸಾಹಿತ್ಯ ಸಮ್ಮೇಳನ ನಡೆಸುವುದಾಗಿ ದೂರ ದರ್ಶನದ ನಿವೃತ್ತ ಅಧಿಕಾರಿ ಡಾ. ಮಹೇಶ್‌ ಜೋಶಿ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ರಾಜ್ಯದಲ್ಲಿ ಇದುವರೆಗೆ ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿಲ್ಲ. ತಾನು ಅಧ್ಯಕ್ಷನಾದರೆ, ಚಾಮರಾಜನಗರದಲ್ಲಿ ಸಮ್ಮೇಳನ ನಡೆಸುತ್ತೇನೆ. ಕನ್ನಡ ಭವನ ನಿರ್ಮಿಸುವೆ ಎಂದು ಭರವಸೆ ನೀಡಿದರು.

ಮುಂದಿನ ವರ್ಷ ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆಯಲ್ಲಿ ಪರಿಷತ್ತಿನ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ. ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದೇನೆ. ತಾನು ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಎಂದು ಹೇಳಿಕೊಳ್ಳಲಾರೆ. ಆ ಸ್ಥಾನದ ಸೇವಾಕಾಂಕ್ಷಿ. ಅಧಿಕಾರಕ್ಕಾಗಿ ಸ್ಪರ್ಧೆಮಾಡುತ್ತಿಲ್ಲ. ಕನ್ನಡದ ರಾಯಭಾರಿಯಾಗಿ ಕೆಲಸ ಮಾಡಿ, ಪರಿಷತ್ತಿನಲ್ಲಿ ಹೊಸ ಮಾರ್ಗ ಸೃಜಿಸುತ್ತೇನೆ ಎಂದು ಅವರು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತನ್ನು ಜನರ ಹತ್ತಿರಕ್ಕೆ ತರಲು ಪ್ರಮುಖವಾಗಿ ನಾಲ್ಕು ಯೋಜನೆಗಳನ್ನು ಹಾಕಿಕೊಂಡಿದ್ದೇನೆ. ಸದಸ್ಯರಾಗಲು ಸರಳೀಕರಣ ವ್ಯವಸ್ಥೆ, ಪರಿಷತ್ತಿನ ಸುಧಾರಣೆ, ಆಡಳಿತದಲ್ಲಿ ಪಾರದರ್ಶಕತೆ, ವ್ಯವಸ್ಥೆಯ ಶುದ್ಧೀಕರಣ ಮಾಡುತ್ತೇನೆ. ಪರಿಷತ್ತಿಗಾಗಿ ಆ್ಯಪ್‌ ಅಭಿವೃದ್ಧಿ ಪಡಿಸಿ, ಅದರ ಮೂಲಕ ಸದಸ್ಯತ್ವಕ್ಕೆ ಅರ್ಜಿಹಾಕುವ ವ್ಯವಸ್ಥೆಕಲ್ಪಿಸುತ್ತೇನೆ ಎಂದು ಅವರು ತಿಳಿಸಿದರು. ಪ್ರಶ್ನೆಗೆ ಉತ್ತರಿಸಿದ ಅವರು, ಪರಿಷತ್ತಿನ ಸದಸ್ಯರಾಗಲು ಅಥವಾ ಅಧ್ಯಕ್ಷರಾಗಲು ಸಾಹಿತಿಯೇ ಆಗಬೇಕು ಎಂಬ ನಿಯಮ ಇಲ್ಲ. ಪರಿಷತ್ತಿನ ಸದಸ್ಯರಾಗಿ ಹತ್ತು ವರ್ಷ ಅನುಭವವಿರುವ, ಕನ್ನಡದ ನೆಲ, ಜಲ, ಸಂಸ್ಕೃತಿ, ಸಾಹಿತ್ಯ ಬಗ್ಗೆ ಅರಿವಿರುವ ಯಾರು ಬೇಕಾದರೂ ಸ್ಪರ್ಧೆ ಮಾಡ ಬಹುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬರಹಗಾರ ಲಕ್ಷ್ಮೀ ನರಸಿಂಹ, ಉಪನ್ಯಾಸಕ ಸುರೇಶ್‌ ಋಗ್ವೇದಿ, ಗಂಗಾಧರ್‌, ರಾಮಮೂರ್ತಿ ಇದ್ದರು.

ಟಾಪ್ ನ್ಯೂಸ್

1-sdsadsad

Sugar factory; ಎಥೆನಾಲ್‌ಗೆ ಕಬ್ಬಿನ ರಸ ಬಳಸದಿರಿ: ಕೇಂದ್ರ ಸರಕಾರ ನಿರ್ದೇಶನ 

1-sadsdsa-d

BJP ಜನರ ಆಯ್ಕೆ ಎನ್ನುವುದು ಸಾಬೀತು: 3 ರಾಜ್ಯಗಳ ಗೆಲುವಿನ ಬಗ್ಗೆ ಮೋದಿ ಬಣ್ಣನೆ

1-sadasdd

Pro Kabaddi-10; ಗುಜರಾತ್‌ಗೆ ಆಘಾತ: ಪಾಟ್ನಾ ಜಯಭೇರಿ

1-sadasd

Painkiller ‘ಮೆಫ್ತಾಲ್’ ಮಾತ್ರೆ ಅಡ್ಡಪರಿಣಾಮ ಬೀರುತ್ತದೆ: ಸರಕಾರದ ಎಚ್ಚರಿಕೆ

ARINDAM BAGCHI

PoK ಭಾರತದ ಭಾಗ; ಯಾವುದೇ ಕಾರಣಕ್ಕೂ ಹೇಳಿಕೆಯನ್ನು ಬದಲಿಸುವುದಿಲ್ಲ: MEA

ವಾರದಲ್ಲಿ ಐಸಿಸ್ ನಂಟು ಸಾಬೀತಿಗೆ ಯತ್ನಾಳ್ ಗೆ ತನ್ವೀರ ಹಾಶ್ಮಿ ಸವಾಲು

Vijayapura; ವಾರದಲ್ಲಿ ಐಸಿಸ್ ನಂಟು ಸಾಬೀತಿಗೆ ಯತ್ನಾಳ್ ಗೆ ತನ್ವೀರ ಹಾಶ್ಮಿ ಸವಾಲು

pinarayi

Dowry ಬೇಡಿಕೆ ಪ್ರಸ್ತಾಪಗಳನ್ನು ತಿರಸ್ಕರಿಸಲು ಯುವತಿಯರಿಗೆ ಪ್ರೋತ್ಸಾಹ ನೀಡಬೇಕು:ಕೇರಳ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

Bandipur; ಕೊಳೆತ ಸ್ಥಿತಿಯಲ್ಲಿ 45 ವರ್ಷದ ಗಂಡಾನೆ ಕಳೇಬರ ಪತ್ತೆ

15-

Hanur: ಸಿ.ಪಿ. ಯೋಗೀಶ್ವರ್ ಬಾವ ಮಹದೇವಯ್ಯ ಮೃತದೇಹ ಪತ್ತೆ

Dialysis machine: ಚಾ.ನಗರ ಜಿಲ್ಲೆಗೆ ಬೇಕು ಮತ್ತಷ್ಟು ಡಯಾಲಿಸಿಸ್‌ ಯಂತ್ರಗಳು

Dialysis machine: ಚಾ.ನಗರ ಜಿಲ್ಲೆಗೆ ಬೇಕು ಮತ್ತಷ್ಟು ಡಯಾಲಿಸಿಸ್‌ ಯಂತ್ರಗಳು

8-hanur-news

ಶಾಸಕ ಮಂಜುನಾಥ್ ಅಧಿಕಾರ ದರ್ಪದ ವಿರುದ್ಧ ಹರಿಹಾಯ್ದ ಎಎಪಿ ಜಿಲ್ಲಾಧ್ಯಕ್ಷ ಹರೀಶ್.ಕೆ.ಮತ್ತೀಪುರ

Road Mishap; ಪಿಕ್ ಅಪ್ ವಾಹನ-ಬೈಕ್ ನಡುವೆ ಅಪಘಾತ: ಸವಾರ ಸಾವು

Road Mishap; ಪಿಕ್ ಅಪ್ ವಾಹನ-ಬೈಕ್ ನಡುವೆ ಅಪಘಾತ: ಸವಾರ ಸಾವು

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

cen

Politics: ಶೋಭಾ ಕರಂದ್ಲಾಜೆ, ರಾಜೀವ್‌ ಚಂದ್ರಶೇಖರ್‌,ಅರ್ಜುನ್‌ ಮುಂಡಾಗೆ ಹೆಚ್ಚುವರಿ ಖಾತೆ

vijayendra R Ashok

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್‌, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ

china pnuemonia

China: ದೇಶಕ್ಕೆ ಚೀನ ಸೋಂಕು?- ದಿಲ್ಲಿ ಏಮ್ಸ್‌ನಲ್ಲಿ ಏಳು ಮಾದರಿ ಪಾಸಿಟಿವ್‌

kempanna

ಕೆಂಪಣ್ಣ ಹೊಸ ಕಮಿಷನ್‌ ಬಾಂಬ್‌ -ಆಗ ರಾಜಕಾರಣಿಗಳು; ಈಗ ಅಧಿಕಾರಿಗಳ ದರಬಾರು ನಡೆಯುತ್ತಿದೆ

pro

Mangaluru: ಅತಿಥಿ ಉಪನ್ಯಾಸಕರ ಖಾಯಮಾತಿ ಆಗ್ರಹಿಸಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.