ಡಾ.ರಾಜ್‌ಕುಮಾರ್‌ ಚಾ.ನಗರ ಜಿಲ್ಲೆಯ ಹೆಮ್ಮೆ


Team Udayavani, Apr 25, 2022, 1:41 PM IST

Untitled-1

ಚಾಮರಾಜನಗರ: ಇಡೀ ಕುಟುಂಬವೇ ಒಟ್ಟಾಗಿ ಕುಳಿತು ನೋಡುವಂತಹ ಚಲನಚಿತ್ರಗಳಲ್ಲಿ ನಟಿಸಿದ ಡಾ.ರಾಜಕುಮಾರ್‌ ಅವರು, ನಾಡಿನ ಜನಮಾನಸದಲ್ಲಿ ಎಂದೆಂದಿಗೂ ಅಜರಾಮರರಾಗಿದ್ದಾರೆ. ಅವರು ನಮ್ಮ ಜಿಲ್ಲೆಯ ಹೆಮ್ಮೆ ಎಂದು ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾಧಿ ಕಾರಿ ಕಚೇರಿ ಸಭಾಂ ಗಣದಲ್ಲಿ ಜಿಲ್ಲಾಡಳಿತ, ಜಿಪಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಮ್ಮಿ ಕೊಂಡಿದ್ದ ಕನ್ನಡದ ಮೇರುನಟ, ಡಾ.ರಾಜ ಕುಮಾರ್‌ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ರಾಜಕುಮಾರ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

ಯುವಕರಿಗೆ ಆದರ್ಶ: ಡಾ.ರಾಜಕುಮಾರ್‌ ಅವರು 50 ವರ್ಷ ಚಲನಚಿತ್ರಗಳಲ್ಲಿ ನಟಿಸಿದ ವಿಶ್ವದ ಗಮನ ಸೆಳೆದ ಏಕೈಕ ನಟರು. ಸಾಮಾನ್ಯ ಜನಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಿದ ರಾಜಕುಮಾರ್‌, ತಪ್ಪುಗಳನ್ನು ತಿದ್ದುವಂತಹ ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಜನಮನ ಸೂರೆಗೊಂಡಿದ್ದಾರೆ. ಬಂಗಾರದ ಮನುಷ್ಯ ಹಾಗೂ ಧ್ರುವತಾರೆ ಚಿತ್ರಗಳಲ್ಲಿ ರಾಜಕುಮಾರ್‌ ರೈತರ ಪ್ರೇರಣೆಯಾಗಿದ್ದರು. ಯುವಕರು ಸಮಾಜದ ಸತøಜೆಗಳಾಗಲು ರಾಜ್‌ ಅದರ್ಶರಾಗಿದ್ದಾರೆ ಎಂದು ತಿಳಿಸಿದರು.

ಭಾಷಾಪ್ರೇಮ ಅಪಾರ: ಡಿ.ವೈ.ಎಸ್‌.ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಮಾತನಾಡಿ, ಡಾ.ರಾಜಕುಮಾರ್‌ ಅವರಿಗೆ ಕನ್ನಡ ಭಾಷಾಪ್ರೇಮ ಅಪಾರವಾಗಿತ್ತು. ಸಾಮಾಜಿಕ ಮೌಲ್ಯಗಳಿಗೆ ಒತ್ತು ನೀಡುವ ಚಿತ್ರಗಳಲ್ಲಿ ನಟಿಸುತ್ತಿದ್ದ ರಾಜಕುಮಾರ್‌ ಅವರು ಚಲನಚಿತ್ರಗಳಲ್ಲಿ ಮಹಿಳೆಯರಿಗೆ ಗೌರವ ತರುವ ನಿಟ್ಟಿನಲ್ಲಿ ಹೆಚ್ಚಿನ ಪ್ರಾಧಾನ್ಯತೆ ನೀಡುತ್ತಿದ್ದರು. ರಾಜಕುಮಾರ್‌ ಮುಂದಿನ ಪೀಳಿಗೆಗೂ ಜೀವಂತವಾಗಿರುತ್ತಾರೆ ಎಂದರು.

ಕನ್ನಡಪರ ಸಂಘಟನೆಯ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಡಾ.ರಾಜಕುಮಾರ್‌ ಅವರು ಕನ್ನಡ ನಾಡು ನುಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ರಾಜಕುಮಾರ್‌ ಅವರು ಕನ್ನಡ ಶಕ್ತಿ. ಕನ್ನಡದ ಜ್ಞಾನಕೋಶವಾಗಿದ್ದ ರಾಜಕುಮಾರ್‌ ಅವರನ್ನು ನೂರು ಆಯಾಮಗಳಲ್ಲಿ ನೋಡಬಹುದಾಗಿದೆ. ಆಡು ಮುಟ್ಟದ ಸೊಪ್ಪಿಲ್ಲ, ರಾಜ್‌ ನಟಿಸದ ಪಾತ್ರವಿಲ್ಲ. ರಾಜಕುಮಾರ್‌ ತವರು ಜಿಲ್ಲೆಯಲ್ಲಿರುವ ನಾವೇ ಧನ್ಯರು ಎಂದರು.

ಗಾಯಕರಾದ ಸಿ.ಎಂ.ನರಸಿಂಹಮೂರ್ತಿ, ಸಿ.ಎಂ. ವೆಂಕಟೇಶ್‌, ಸುರೇಶ್‌ನಾಗ್‌, ಕಲೆ ನಟರಾಜು ನಡೆಸಿಕೊಟ್ಟ ಡಾ. ರಾಜಕುಮಾರ್‌ ಅಭಿನಯಿಸಿದ ಪ್ರಮುಖ ಚಲನಚಿತ್ರಗಳ ಗೀತೆಗಳ ಗಾಯನ ಎಲ್ಲರ ಮೆಚ್ಚುಗೆ ಗಳಿಸಿತು. ಎಎಸ್ಪಿ ಕೆ.ಎಸ್‌.ಸುಂದರರಾಜು, ಜಿಪಂ ಲೆಕ್ಕಾಧಿಕಾರಿ ಎಚ್‌.ಎಸ್‌.ಗಂಗಾಧರ್‌, ಬರಹಗಾರ ಲಕ್ಷ್ಮೀನರಸಿಂಹ ಮಾತನಾಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್‌, ತಹಶೀಲ್ದಾರ್‌ ಚಿದಾನಂದ ಗುರುಸ್ವಾಮಿ, ತಾಪಂ ಇಒ ಪ್ರೇಮ್‌ಕುಮಾರ್‌, ಸಾಹಿತಿ ಸೋಮಶೇಖರ ಬಿಸಿಲವಾಡಿ, ಕುಮಾರಿ ವೈಷ್ಣವಿ, ವಿವಿಧ ಸಂಘಟನೆಗಳ ಮುಖಂಡರಾದ ನಿಜಧ್ವನಿ ಗೋವಿಂದರಾಜು, ಆಲೂರು ನಾಗೇಂದ್ರ, ಜಿ. ಬಂಗಾರು, ಗು.ಪುರುಷೋತ್ತಮ್‌, ಕೆ.ಎಂ.ನಾಗರಾಜು, ಜಯಕುಮಾರ್‌, ಸಿ.ಎಂ. ಮಹದೇವಶೆಟ್ಟಿ ಇತರರಿದ್ದರು.

ಅಹಂಕಾರ, ಹಣ ವ್ಯಾಮೋಹ ವಿಲ್ಲದ ಪರಿಪೂರ್ಣ ಮಾನವ ಪ್ರೇಮವನ್ನು ಅಭಿವ್ಯಕ್ತಿಗೊಳಿಸಿದ ಡಾ.ರಾಜಕುಮಾರ್‌ ಅವರಿಗೆ ಚಾಮರಾಜನಗರ ಸ್ವರ್ಗದ ಬಾಗಿಲಾಗಿತ್ತು. ಗುರುನಿಂದನೆ, ಮಾತಾಪಿತೃ ನಿಂದನೆಯಂತಹ ಇಂದಿನ ಪರಿಸ್ಥಿತಿಯಲ್ಲಿ ರಾಜಕುಮಾರ್‌ ಪ್ರತಿಯೊಬ್ಬರಿಗೂ ಆದರ್ಶ ವ್ಯಕ್ತಿತ್ವವಾಗಿದ್ದಾರೆ. ಸರಳತೆ, ಮಾನವತೆಗೆ ಉತ್ತಮ ಉದಾಹರಣೆ ಡಾ.ರಾಜಕುಮಾರ್‌. – ಸುರೇಶ್‌ ಋಗ್ವೇದಿ, ತಾಲೂಕು ಅಧ್ಯಕ್ಷ, ಕಸಾಪ

ಜಿಲ್ಲೆಯ ಹಾಗೂ ಕನ್ನಡನಾಡಿನ ಸಾಂಸ್ಕೃತಿಕ ರಾಯಭಾರಿ ಯಾಗಿದ್ದ ಡಾ.ರಾಜಕುಮಾರ್‌ ಅವರು ಭಾಷೆಯನ್ನು ಹೇಗೆ ಮಾತನಾಡಬೇಕು, ಉತ್ಛರಿಸಬೇಕು ಎಂಬುದನ್ನು ಕನ್ನಡಿಗರಿಗೆ ಹೇಳಿಕೊಟ್ಟರು. – ಸಿ.ಎಂ.ನರಸಿಂಹಮೂರ್ತಿ, ಕರ್ನಾಟಕ ಜಾನಪದ ಅಕಾಡಮಿ ಸದಸ್ಯ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.