ಡಾ.ರಾಜ್‌ಕುಮಾರ್‌ ರಂಗಮಂದಿರ ಲೋಕಾರ್ಪಣೆ


Team Udayavani, Aug 16, 2022, 2:58 PM IST

tdy-6

ಚಾಮರಾಜನಗರ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಜಿಲ್ಲೆಯ ರಜತ ಮಹೋತ್ಸವದ ಸವಿನೆನಪಿ ನಲ್ಲಿ ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿ ನಿರ್ಮಾಣ ಮಾಡಲಾಗಿರುವ 7.55 ಕೋಟಿ ರೂ. ವೆಚ್ಚದ ವರನಟ ಡಾ. ರಾಜ್‌ಕುಮಾರ್‌ ಜಿಲ್ಲಾ ರಂಗಮಂದಿರವನ್ನು ವಸತಿ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಸೋಮವಾರ ಲೋಕಾರ್ಪಣೆಗೊಳಿಸಿದರು

ಜಿಲ್ಲೆಯ ಮೈಲಿಗಲ್ಲು: ಕನ್ನಡದ ಮೇರುನಟ, ಜಿಲ್ಲೆಯ ಹೆಮ್ಮೆಯ ಪುತ್ರ ಡಾ. ರಾಜ್‌ಕುಮಾರ್‌ ಅವರ ಹೆಸರಿನಲ್ಲಿ ನಿರ್ಮಿಸಿರುವ ರಂಗಮಂದಿ ರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಸ್ವಾತಂತ್ರÂದ ಅಮೃತ ಮಹೋತ್ಸವ ಹಾಗೂ ಜಿಲ್ಲೆ ರೂಪುಗೊಂಡು 25 ವರ್ಷಗಳನ್ನುಪೂರ್ಣಗೊಳಿಸುತ್ತಿರುವ ರಜತ ಮಹೋತ್ಸವದ ಅಮೃತ ಘಳಿಗೆಯಲ್ಲಿ ಡಾ. ರಾಜ್‌ ಕುಮಾರ್‌ ಅವರ ಹೆಸರಿನ ರಂಗಮಂದಿರ ಉದ್ಘಾಟನೆಯಾಗುತ್ತಿರುವುದು ಜಿಲ್ಲೆಯ ಮೈಲಿಗಲ್ಲು ಹಾಗೂ ಐತಿಹಾಸಿಕ ದಿನವೆಂದು ಬಣ್ಣಿಸಿದರು. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಂಗಮಂದಿರವನ್ನು ಆ. 15ರಂದು ಉದ್ಘಾಟಿಸಲು ಅನುವಾಗುವಂತೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದ್ದೆ. ಅದರಂತೆ ಇಂದು ರಂಗಮಂದಿರ ಲೋಕಾರ್ಪಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಕಟ್ಟಡಗಳಾಗಲಿ ಬಹಳ ವರ್ಷಗಳಿಂದಲೂ ಪೂರ್ಣವಾಗದಿದ್ದರೆ ಬೇಸರವಾಗುತ್ತದೆ. ಹೀಗಾಗಿ ಯಾವುದೇ ಕಟ್ಟಡಗಳು ಪೂರ್ಣವಾಗಲು ತ್ವರಿತವಾಗಿ ಕ್ರಮ ಕೈಗೊಳ್ಳುವ ಸಂಬಂಧ ಅಧಿಕಾರಿಗಳು ಸಭೆ ನಡೆಸಬೇಕು ಎಂದು ಸಚಿವರು ತಿಳಿಸಿದರು.

ರಂಗಮಂದಿರ ತುಂಬಾ ಚೆನ್ನಾಗಿ ಹಾಗೂ ವ್ಯವಸ್ಥಿತವಾಗಿ ಮೂಡಿಬಂದಿದೆ. ರಂಗಮಂದಿರದ ಬಾಕಿ ಕಾಮಗಾರಿಗೂ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.

ರಾಜಕುಮಾರ್‌ ಸಾಧನೆ ಮುಂದಿನ  ಪೀಳಿಗೆಗೂ ತಿಳಿಸೋಣ: ಡಾ. ರಾಜ್‌ಕುಮಾರ್‌ ಅವರು ಚಾಮ ರಾಜನಗರ ಜಿಲ್ಲೆಯವರು ಎಂಬ ಹೆಮ್ಮೆ ನಮಗಿದೆ. ರಾಜ್‌ಕುಮಾರ್‌ ಅವರ ಕುಟುಂಬದ ಹಿನ್ನೆಲೆ, ಅವರು ನಡೆದು ಬಂದ ದಾರಿ, ಸಾಧನೆ ಕುರಿತು ಮುಂದಿನ ಪೀಳಿಗೆಗೂ ತಿಳಿಸಿಕೊಡುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸೋಣ. ಡಾ. ರಾಜ್‌ಕುಮಾರ್‌ ಅವರ ಹೆಸರಿನಲ್ಲಿ ನಿರ್ಮಾಣವಾಗಿರುವ ರಂಗಮಂದಿರದಲ್ಲಿ ರಾಜ್‌ ಕುಮಾರ್‌ ಕುಟುಂಬದವರನ್ನು ಸೇರಿಸಿ ಕೊಂಡು ದೊಡ್ಡ ಕಾರ್ಯಕ್ರಮ ಹಮ್ಮಿಕೊಳ್ಳೋಣ ಎಂದರು.

ವರನಟ ರಾಜ್‌ಕುಮಾರ್‌ ರಾಜ್ಯ, ರಾಷ್ಟ್ರದ ಸಂಪತ್ತು. ಅವರ ಪುತ್ರ ಪುನೀತ್‌ ರಾಷ್ಟ್ರಕ್ಕೆ ಹೆಮ್ಮೆ. ಜಿಲ್ಲೆಗೆ 25 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮವನ್ನು ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗುವುದು. ಶೀಘ್ರವೇ ದಿನಾಂಕ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದರು. ಜಿಲ್ಲಾಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಗ್ರಂಥಾಲಯ ಕಟ್ಟಡದಲ್ಲೇ ಸ್ಪರ್ಧಾತ್ಮಕ ಪರೀûಾ ಕೇಂದ್ರಗಳ ಕಟ್ಟಡ ಸಹ ನಿರ್ಮಾಣವಾಗುತ್ತಿದ್ದು, ಇದು ಸಹ ತ್ವರಿತವಾಗಿ ಪೂರ್ಣವಾಗಬೇಕಿದೆ. ಜಿಲ್ಲೆಯ ಅಭಿವೃದ್ಧಿ ಚಿಂತನೆಗಳಿಗೆ ಎಲ್ಲರೂ ಕೈಜೋಡಿಸಬೇಕಿದೆ. ಡಾ. ರಾಜ್‌ಕುಮಾರ್‌ ಅವರ ಹೆಸರಿನಲ್ಲಿ ಲೋಕಾರ್ಪಣೆಯಾಗಿರುವ ರಂಗಮಂದಿರ ಜಿಲ್ಲೆಯ ಕಲಾವಿದರಿಗೆ ಸದುಪಯೋಗವಾಗಲಿ ಎಂದು ಸೋಮಣ್ಣ ಆಶಿಸಿದರು.

ಶಾಸಕ ಸಿ. ಪುಟ್ಟರಂಗಶೆಟ್ಟಿ, ಕಾಡಾ ಆಧ್ಯಕ್ಷ ಜಿ. ನಿಜಗುಣರಾಜು, ನಗರಸಭೆ ಅಧ್ಯಕ್ಷೆ ಸಿ.ಎಂ. ಆಶಾ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಎಸ್‌. ಸುಂದರರಾಜು. ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್‌ ವಿನಯ್‌ಕುಮಾರ್‌, ಜಾನಪದ ಗಾಯಕ ಸಿ.ಎಂ. ನರಸಿಂಹಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಆರ್‌. ಜಯಪ್ರಕಾಶ್‌, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.