ಆರೋಗ್ಯಕ್ಕಾಗಿ ಕುಡಿವ ನೀರು, ಸ್ವಚ್ಛತೆಗೆ ಆದ್ಯತೆ ನೀಡಿ


Team Udayavani, Nov 12, 2019, 3:00 AM IST

arogyakkagi

ಹನೂರು: ಕುಟುಂಬದಲ್ಲಿ ಮಹಿಳೆ ಆರೋಗ್ಯವಾಗಿದ್ದರೆ ಕುಟುಂಬವೇ ಆರೋಗ್ಯವಾಗಿರುತ್ತದೆ ಎಂದು ಗ್ರಾಮೀಣ ಕೂಟದ ಹಣಕಾಸು ನಿರ್ವಹಣಾ ಸಂಸ್ಥೆಯ ಅಂಗ ಸಂಸ್ಥೆಯಾದ ದಿಶಾ ಸಂಸ್ಥೆ ಹಿರಿಯ ಯೋಜನಾ ಸಂಯೋಜನಾಧಿಕಾರಿ ರೋಹನ್‌ ಮಲ್ಲಿಕ್‌ ತಿಳಿಸಿದರು.

ಹನೂರಿನ ಬೆಟ್ಟಳ್ಳಿ ಮಾರಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ನೀರು, ನೈರ್ಮಲ್ಯ, ಸ್ವಚ್ಛತೆ ಕುರಿತು ಗ್ರಾಮೀಣ ಕೂಟದ ಸಂಘದ ಸದಸ್ಯರ ಕಾರ್ಯಾಗಾರವನ್ನು ಉದ್ಘಾಟಿಸಿದ ಅವರು ಮಾತನಾಡಿ, ಪ್ರತಿ ಕುಟುಂಬದ ಆದಾಯ ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸೇವೆಗೆ ಹೆಚ್ಚು ವ್ಯಯವಾಗುತ್ತಿದೆ. ಕುಡಿಯುವ ನೀರು, ನೈರ್ಮಲ್ಯ, ಸ್ವಚ್ಛತೆಗೆ ಆದ್ಯತೆ ನೀಡಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.

ಮೂರು ರಾಜ್ಯದಲ್ಲಿ ಕಾರ್ಯನಿರ್ವಹಣೆ: ಗ್ರಾಮೀಣ ಕೂಟ ಸಂಸ್ಥೆಯು ಕರ್ನಾಟಕ, ಮಧ್ಯಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. 8.55 ಲಕ್ಷ ಶೌಚಾಲಯ ಮತ್ತು 2.72 ಲಕ್ಷಜನರಿಗೆ ಕುಡಿಯವ ನೀರಿನ ಸೌಲಭ್ಯ ಒದಗಿಸಿದೆ. ಗ್ರಾಮೀಣ ಕೂಟದ ಸದಸ್ಯರು ಶೌಚಾಲಯಗಳ ಸರ್ವೆ ನಡೆಸಿದಾಗ ಶೇ.90ರಷ್ಟು ಜನರು ಶೌಚಾಲಯ ಹೊಂದಿದ್ದಾರೆ. ಇವರಲ್ಲಿ ಶೇ.70ರಷ್ಟು ಪುರುಷರು ಶೌಚಾಲಯ ಬಳಸುತ್ತಿದ್ದಾರೆ.

ಇನ್ನು ಶೇ.10ರಷ್ಟು ಜನರು ಶೌಚಾಲಯ ಇದ್ದರೂ ಬಳಸುತ್ತಿಲ್ಲ ಎಂದು ಹೇಳಿದರು. ಸಾಂಕ್ರಾಮಿಕ ಮಾರಣಾಂತಕ ಕಾಯಿಲೆಗಳು ಅಶುದ್ಧ ನೀರು, ಅನೈರ್ಮಲ್ಯ ಮತ್ತು ಬಯಲು ಶೌಚದಿಂದ ಬರುತ್ತವೆ. ಆದ್ದರಿಂದ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಇಲ್ಲವಾದರೆ ನಿಮ್ಮ ಜೀವಮಾನದ ದುಡಿಮೆ ಹಣ ಆಸ್ಪತ್ರೆಗೆ ಕಟ್ಟಬೇಕಾಗುತ್ತದೆ ಎಂದು ಹೇಳಿದರು.

ಶೌಚಾಲಯ ನಿರ್ಮಾಣಕ್ಕೆ ಅನುದಾನ: ಲೊಕ್ಕನಹಳ್ಳಿ ಪಿಡಿಒ ಸುರೇಶ್‌ ಮಾತನಾಡಿ, ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು 15 ಸಾವಿರ ಅನುದಾನ ಗ್ರಾಮ ಪಂಚಾಯ್ತಿಯಿಂದ ನೀಡಲಾಗುವುದು. ಸ್ವಾಭಿಮಾನ, ಮರ್ಯಾದೆಗಾಗಿ ಶೌಚಾಲಯ ನಿರ್ಮಾಣ ಮಾಡಿಕೊಳ್ಳಬೇಕಾಗಿದೆ. ಬಯಲು ಮಲ ಮಾಡುವುದು ನಿಮ್ಮ ಗುಂಡಿ ನೀವೆ ತೊಡಿಕೊಂಡಂತೆ, ಹಲವು ಕಾಯಿಲೆಗಳು ಬರಲು ನೀವೇ ಕಾರಣಕರ್ತರಾಗುತ್ತೀರಿ.

ನಿಮಗೆ ಕಾಯಿಲೆಗಳು ಬರುವುದಲ್ಲದೇ ಬೇರೆಯವರಿಗೂ ಕಾಯಿಲೆ ಬರುವಂತೆ ಮಾಡುತ್ತೀರಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ರಾಮೀಣ ಕೂಟ ಸಂಘದ ಸದಸ್ಯರಿಗೆ 300 ಉಚಿತ ಸಸಿ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಎಎಸ್‌ಐ ರಾಜಶೇಖರ್‌, ಗ್ರಾಮೀಣ ಕೂಟದ ಪ್ರಾಂತೀಯ ವ್ಯವಸ್ಥಾಪಕ ಮುತ್ತುರಾಜ್‌, ಸಿಬ್ಬಂದಿ ಸಂತೋಷ್‌, ಜಗದೀಶ್‌, ಹರೀಶ್‌, ಶಶಿಧರ್‌ ಹಾಗೂ ಸಂಘದ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.