ಆಲಹಳ್ಳಿಯಲ್ಲಿ ಕುಡಿವ ನೀರಿಗೆ ಪರದಾಟ

ನೀರಿಗಾಗಿ ಕೋಟ್ಯಂತರ ರೂ.ವೆಚ್ಚ ಮಾಡಿದರೂ ಪ್ರಯೋಜನವಿಲ್ಲ • ಅಂತರ್ಜಲ ಸಂಪೂರ್ಣ ಕುಸಿತ

Team Udayavani, Aug 2, 2019, 11:22 AM IST

cm-tdy-1

ಕೊಳ್ಳೇಗಾಲ: ಆಡಳಿತಕ್ಕೆ ಯಾವುದೇ ಸರ್ಕಾರ ಬಂದರೂ ಕುಡಿಯುವ ನೀರಿನ ಭವಣೆ ಇಳಿಸುವ ಭರವಸೆಯನ್ನು ನೀಡುತ್ತಾರೆ. ಮತ್ತೆ ಕುಡಿಯುವ ನೀರಿಗಾಗಿ ಕೋಟ್ಯಂತರ ರೂಪಾಯಿಗಳನ್ನು ಹರಿಸುತ್ತಾರೆ. ಆದರೆ, ತಾಲೂಕಿನ ಟಗರಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಆಲಹಳ್ಳಿ ಗ್ರಾಮದಲ್ಲಿ ಕುಡಿಯಲು ನೀರಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಟಗರಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಏಳು ಗ್ರಾಮಗಳ ಪೈಕಿ ಆಲಹಳ್ಳಿ ಗ್ರಾಮ ಎಲ್ಲಾ ಸಮಾಜವನ್ನು ಹೊಂದಿರುವ ಬಹುದೊಡ್ಡ ಗ್ರಾಮವಾಗಿದೆ. ಗ್ರಾಮದಲ್ಲಿ ಸುಮಾರು 800ಕ್ಕೂ ಹೆಚ್ಚು ಕುಟುಂಬಗಳು ವಾಸ ಮಾಡುತ್ತಿದ್ದು, ಗ್ರಾಮಸ್ಥರು ದೈನಂದಿನ ವ್ಯವಸಾಯ ಮತ್ತು ಕೂಲಿ ಇವರ ಕಾಯಕವಾಗಿದೆ.

ಏಳು ನೀರಿನ ತೊಂಬೆ ನಿರ್ಮಾಣ: ಗ್ರಾಮ ಪಂಚಾಯ್ತಿ ವತಿಯಿಂದ ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಕೆ ಮಾಡುವ ಸಲುವಾಗಿ ವಿವಿಧ ಸಮಾಜದ ಬಡಾವಣೆಗಳಲ್ಲಿ ಸುಮಾರು ಏಳು ನೀರಿನ ತೊಂಬೆಗಳನ್ನು ನಿರ್ಮಾಣ ಮಾಡಲಾಗಿದೆ. ಅಂತರ್ಜಲ ಸಂಪೂರ್ಣ ಕುಸಿದಿರುವ ಹಿನ್ನಲೆಯಲ್ಲಿ ನೀರಿನ ತೊಂಬೆಗಳಲ್ಲಿ ಕುಡಿಯುವ ನೀರಿಲ್ಲದೇ ಒಣಗುತ್ತಿವೆ.

ಬತ್ತಿಹೋಗಿವೆ ಕೊಳವೆ ಬಾವಿಗಳು: ನೀರಿನ ತೊಂಬೆಗಳು ಮತ್ತು ಕೊಳವೆ ಬಾವಿಗಳಿಂದಲೂ ಸಹ ನೀರು ಪೂರೈಕೆ ಮಾಡುವ ಸಲುವಾಗಿ ಹಲವೆಡೆಗಳಲ್ಲಿ ಲಕ್ಷಾಂತರ ರೂ. ಖರ್ಚು ಮಾಡಿ, ಕೊಳವೆ ಬಾವಿಗಳನ್ನು ಕೊರೆಸಿದ್ದರೂ ಸಹ, ಕೊಳವೆ ಬಾವಿಯಲ್ಲಿ ನೀರು ಬತ್ತಿಹೋಗಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ.

ಕೊಳವೆ ಬಾವಿ ದುರಸ್ತಿಯಾಗಿಲ್ಲ: ಕೊಳವೆ ಬಾವಿಗಳು ಕೆಟ್ಟು ನಿಂತಿದ್ದು, ಅದರ ಮೋಟಾರ್‌ಗಳನ್ನು ಸರಿಪಡಿಸಲು ತೆಗೆದುಕೊಂಡು ಹೋದ ಗ್ರಾಮ ಪಂಚಾಯ್ತಿಯ ಸಿಬ್ಬಂದಿಗಳು ಇದುವರೆವಿಗೂ ದುರಸ್ತಿ ಮಾಡಿ, ಮೋಟಾರ್‌ ಜೋಡಣೆಯಲ್ಲಿ ಅಧಿಕಾರಿಗಳು ವಿಫ‌ಲರಾದ ಪರಿಣಾಮ ಜನರು ಮತ್ತಷ್ಟು ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.

ಗ್ರಾಮದಲ್ಲಿ ಕುಡಿಯುವ ನೀರು ನಲ್ಲಿಗಳ ಪೈಪ್‌ಗ್ಳ ಮೂಲಕ ಸಣ್ಣದಾಗಿ ಸ್ವಲ್ಪ ಹೊತ್ತು ಮಾತ್ರ ಬರುತ್ತದೆ. ನಂತರ ನೀರು ನಿಂತು ಹೋದ ಪಕ್ಷದಲ್ಲಿ ಮತ್ತೆ ನೀರು ಕಾಣಬೇಕಾದರೆ ಮಾರನೇ ದಿನವನ್ನೇ ಕಾಯಬೇಕಾಗಿದೆ. ನೀರು ದಿನಬಳಕೆಗೆ ಮತ್ತು ಕುಡಿಯಲು ಸಾಲದೆ ಅಪಾರ ಸಂಕಷ್ಟವನ್ನು ಎದುರಿಸುವಂತೆ ನೀರಿನ ಸಮಸ್ಯೆ ತಲೆದೋರಿದೆ ಎಂದು ಗ್ರಾಮದ ವೃದ್ಧ ಮಹಿಳೆ ಮಾದೇವಮ್ಮ ಅಳಲು.

ಶೌಚಾಲಯಕ್ಕೂ ನೀರಿಲ್ಲ: ಗ್ರಾಮಸ್ಥರಿಗೆ ಕುಡಿಯುವ ನೀರಿಗೆ ಸಮಸ್ಯೆ ಒಂದೆಡೆಯಾದರೆ, ಮತ್ತೂಂದೆಡೆ ಜಾನುವಾರುಗಳಿಗೂ ನೀರು ಇಲ್ಲದೇ ಪಕ್ಕದ ಗ್ರಾಮಗಳಿಗೆ ಹೋಗಿ ನೀರು ತಂದು ಜಾನುವಾರುಗಳಿಗೆ ನೀಡುವಂತಾಗಿದೆ. ಸರ್ಕಾರ ಶೌಚಾಲಯಗಳನ್ನು ಬಳಸಬೇಕು ಎಂದು ಅಪಾರ ಪ್ರಚಾರದಲ್ಲಿ ತೊಡಗಿರುವ ಜಿಲ್ಲಾಡಳಿತ ಶೌಚಾಲಯಕ್ಕೂ ನೀರಿನ ಬರ ಎದುರಾಗಿದೆ. ಗ್ರಾಮಸ್ಥರು ಜಮೀನುಗಳಲ್ಲಿರುವ ಪಂಪ್‌ಸೆಟ್‌ಗಳಲ್ಲಿ ಬರುವ ನೀರನ್ನೇ ಬಳಕೆ ಮಾಡಿಕೊಳ್ಳುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮದ ಆಲಯ್ಯ ದೂರಿದ್ದಾರೆ.

ಜಲ ಸಂಗ್ರಹಕ್ಕೆ ಗ್ರಾಪಂ ವಿಫ‌ಲ: ಗ್ರಾಮದಲ್ಲಿ ಕೆರೆಯೊಂದಿದ್ದು, ಕೆರೆಯಲ್ಲಿರುವ ಹೂಳನ್ನು ಇದುವ ರೆವಿಗೂ ಎತ್ತಿಸಿಲ್ಲ. ಕೆರೆಗೆ ತಡೆಗೋಡೆಗಳನ್ನು ನಿರ್ಮಾಣ ಮಾಡಿ, ಕೆರೆಯಲ್ಲಿ ಅಂತರ್ಜಲ ಶೇಖರಣೆ ಮಾಡುವಲ್ಲಿ ಗ್ರಾಮ ಪಂಚಾಯ್ತಿ ಸಂಪೂರ್ಣ ವಿಫ‌ಲವಾಗಿದೆ. ಕೆರೆಯು ಮಣ್ಣುಗಳಿಂದ ಮತ್ತು ಗಿಡಗಂಟೆಗಳಿಂದ ಆವೃತಗೊಳ್ಳುತ್ತಿದೆ. ಕೂಡಲೇ ಅಧಿಕಾರಿಗಳು ಕೆರೆಯನ್ನು ಅಭಿವೃದ್ಧಿಪಡಿಸಿ ಕೆರೆಗೆ ನೀರು ಭರ್ತಿಗೊಳಿಸುವ ಮೂಲಕ ಅಂತರ್ಜಲವನ್ನು ಹೆಚ್ಚಿಸುವ ಪ್ರಯತ್ನವನ್ನು ಅಧಿಕಾರಿಗಳು ಮಾಡಬೇಕಾಗಿದೆ.

 

● ಡಿ.ನಟರಾಜು

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.