ಗಾಳಿಮಳೆ ಬಂದ್ರೆ ವಿದ್ಯುತ್‌ ಸ್ಥಗಿತ, ನೀರಿಗೆ ಹಾಹಾಕಾರ


Team Udayavani, Jun 11, 2022, 1:45 PM IST

ಗಾಳಿಮಳೆ ಬಂದ್ರೆ ವಿದ್ಯುತ್‌ ಸ್ಥಗಿತ, ನೀರಿಗೆ ಹಾಹಾಕಾರ

ಯಳಂದೂರು: ಗಾಳಿ ಮಳೆ ಬಂದರೆ ವಿದ್ಯುತ್‌ ಸಮಸ್ಯೆ ಗೊಂಡು ಬಿಳಿಗಿರಿರಂಗನಬೆಟ್ಟದ ಪೋಡಿನ ನಿವಾಸಿಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗುತ್ತಿದ್ದು. ಇದನ್ನು ಪರಿಹರಿಸಲು ಎರಡು ಮೂರು ದಿನಗಳು ಕಾಯಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.!

ತಾಲೂಕಿನ ಪ್ರಸಿದ್ಧ ಯಾತ್ರೆ ಹಾಗೂ ಪ್ರವಾಸಿ ಕ್ಷೇತ್ರದ ಪೋಡು ಗಳಾದ ಬಂಗ್ಲೆಪೋಡು, ಯರಕನಗದ್ದೆ, ಸೀಗೆಬೆಟ್ಟ, ಹೊಸಪೋಡು, ಕಲ್ಯಾಣಿಪೋಡು ಸೇರಿದಂತೆ ಒಟ್ಟು 710ಕ್ಕೂ ಹೆಚ್ಚು ಕುಟುಂಬಗಳು ವಾಸಿಸುವ ಸ್ಥಳವಾಗಿದೆ. ಇಲ್ಲಿನ ಜನರಿಗೆ ಸಮಪರ್ಕವಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪರದಾಡುವುದು ನಿತ್ಯ ಕಾಯಕ ವಾಗಿದೆ. ಅರಣ್ಯ ಪ್ರದೇಶವಾಗಿರುವ ಬಿಳಿಗಿರಿರಂಗನ ಬೆಟ್ಟದಲ್ಲಿ ವಿದ್ಯುತ್‌ ಸಂಪರ್ಕ ಹಾದು ಹೋಗಿರುವ ಸ್ಥಳಗಳಲ್ಲಿ ಸ್ವಲ್ಪ ವ್ಯತ್ಯಾಸವಾದರೆ, ಕುಡಿಯುವ ನೀರಿಗೆ ತೊಂದರೆಯಾಗುತ್ತದೆ. ಆ ಸಮಯದಲ್ಲಿ ಕೈ ಪಂಪಿನ ನೀರಿಗೆ ಕಾಯುವ ಸ್ಥಿತಿ ಇಲ್ಲಿನ ನಾಗರಿಕರದ್ದು.

ದುರಸ್ತಿಗೆ ಮೂರು ದಿನ ಕಾಯಬೇಕು: ವಿದ್ಯುತ್‌ ಕಂಬ ಬಿದ್ದರೆ, ತಂತಿ ಕೆಳಕ್ಕೆ ಬಿದ್ದರೆ ಇದನ್ನು ದುರಸ್ತಿ ಪಡಿಸಲು ಎರಡು ಮೂರು ದಿನಗಳ ಕಾಲ ಬೇಕಾಗುತ್ತದೆ. ಈ ಬಗ್ಗೆ ಸಾಕಷ್ಟು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ರಾಜ್ಯದ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಇಲ್ಲಿಗೆ ನಿತ್ಯ ಭಕ್ತರು ಆಗಮಿಸುತ್ತಾರೆ. ವಿದ್ಯುತ್‌ ಇಲ್ಲದಿದ್ದರೆ ಕುಡಿಯುವ ನೀರೂ ಇಲ್ಲದ ಕಾರಣ ಭಕ್ತರು ಪರದಾಡುವ ಸ್ಥಿತಿ ಇದೆ.

ಸೆಸ್ಕ್ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ: ಬಿಳಿಗಿರಿ ರಂಗನಬೆಟ್ಟದಲ್ಲಿ ಮಳೆಗಾಲದಲ್ಲಿ ಮಳೆ, ಬಿರುಗಾಳಿಗೆ ವಿದ್ಯುತ್‌ ಸಮಸ್ಯೆಯು ನಿರಂತರವಾಗಿ ತೊಂದರೆಯಾ ಗುತ್ತಿದೆ. ಬೆಟ್ಟದಲ್ಲಿ ಲೈನ್‌ಮೆನ್‌ ಇದ್ದರೂ ಸಹ ಕೆಲಸ ಮಾಡುವುದಿಲ್ಲ ಎಂಬುದು ಸ್ಥಳೀಯರ ದೂರಾಗಿದೆ. ಈ ಕೆಲಸ ನಿಧಾನವಾಗುವುದರಿಂದ 1 ರಿಂದ 2 ದಿನಗಳ ವಿದ್ಯುತ್‌ಗೆ ಕಾಯಕಬೇಕು. ಜತೆಗೆ ಇಲಾಖೆ ಅಧಿಕಾರಿಗಳಿಗೆ ಮೊಬೈಲ್‌ಗೆ ಕರೆ ಮಾಡಿದ್ದಾರೆ ಸ್ವಿಚ್‌ ಆಫ್ ಆಗಿರುತ್ತದೆ. ರಾತ್ರಿ ವೇಳೆಯಲ್ಲಿ ಕಾಡು ಪ್ರಾಣಿಗಳ ಕಾಟವು ಹೆಚ್ಚಾಗಿದ್ದು ಭಯದಲ್ಲಿ ಬದುಕು ಸವೆಸುವ ಸ್ಥಿತಿ ಇದೆ ಎಂಬುದು ಸ್ಥಳೀಯ ಬೇದೆಗೌಡ ಸೇರಿದಂತೆ ಹಲವರ ದೂರಾಗಿದೆ.

ಮಳೆ ಬಂದರೆ ಬೆಟ್ಟದಲ್ಲಿ ವಿದ್ಯುತ್‌ ಸಮಸ್ಯೆ ಉಂಟಾಗಿ ಕುಡಿಯುವ ನೀರಿಗೆ ಜನರು ಪರದಾಡಬೇಕು. ಸೆಸ್ಕ್ ಇಲಾಖೆ ಸಿಬ್ಬಂದಿ ಬೆಟ್ಟದಲ್ಲಿ ವಾಸ ಮಾಡದ ಕಾರಣ ಸಾಕಷ್ಟ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜ ವಾಗಿಲ್ಲ, ಆದ್ದರಿಂದ ಸಂಬಂಧಪಟ್ಟ ಮೇಲಧಿಕಾರಿಗಳು ಸೂಕ್ತ ಕ್ರಮವಹಿಸಬೇಕು. -ವೆಂಕಟೇಶ್‌, ಬೆಟ್ಟದ ನಿವಾಸಿ

ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ವಿದ್ಯುತ್‌ ಸಮಸ್ಯೆಯಿಂದ ಕುಡಿಯುವ ನೀರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾಹಿತಿ ಇಲ್ಲ. ಈ ಕೂಡಲೇ ಪಿಡಿಒಯಿಂದ ಮಾಹಿತಿ ತಿಳಿದುಕೊಳ್ಳುತ್ತೇನೆ. ವಿದ್ಯುತ್‌ ಸಮಸ್ಯೆಯಾದರೆ ಕೂಡಲೇ ನೌಕರರು ಸರಿಪಡಿಸುವಂತೆ ಸೂಚನೆ ನೀಡುತ್ತೇನೆ. ಮುಂದೆ ಈ ಸಮಸ್ಯೆ ಆಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು. – ನಿಂಗರಾಜು, ಸೆಸ್ಕ್ ಎಇಇ

ತಾಲೂಕಿನ ಬಿಳಿಗಿರಿ ರಂಗನಬೆಟ್ಟದಲ್ಲಿ ವಿದ್ಯುತ್‌ ಸಮಸ್ಯೆಯಾದರೆ ಕುಡಿಯುವ ನೀರಿಗೆ ತೊಂದರೆಯಾಗುತ್ತಿದ್ದು, ಸ್ಥಳೀಯ ಮಟ್ಟದಲ್ಲಿ ವಿದ್ಯುತ್‌ ಇಲಾಖೆ ಸಿಬ್ಬಂದಿ ಇಲ್ಲವಾದ ಕಾರಣ ದೊಡ್ಡ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಬೆಟ್ಟದಲ್ಲಿ ಸೆಸ್ಕ್ ಸಿಬ್ಬಂದಿ ವಾಸ ಮಾಡುವ ವ್ಯವಸ್ಥೆ ಮಾಡುವಂತೆ ಮನವಿ ಮಾಡಲಾಗುವುದು. -ಸ್ವಾಮಿ, ಪಿಡಿಒ ಬಿಳಿಗಿರಿರಂಗನೆಬೆಟ್ಟ

 

-ಫೈರೋಜ್‌ಖಾನ್‌

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.