ಜಿಲ್ಲಾ ಉಸ್ತುವಾರಿ ಸಚಿವರಿಂದ ಆಮ್ಲಜನಕ ಘಟಕಕ್ಕೆ ಚಾಲನೆ
Team Udayavani, Apr 29, 2021, 9:30 PM IST
ಚಾಮರಾಜನಗರ: ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 6000 ಲೀಟರ್ ಸಾಮರ್ಥ್ಯವುಳ್ಳ ದ್ರವೀಕೃತ ವೈದ್ಯಕೀಯ ಆಮ್ಲಜನಕ (ಎಲ್.ಎಂ.ಒ) ಘಟಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ಕುಮಾರ್ ಗುರುವಾರ ಚಾಲನೆ ನೀಡಿದರು.
ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅವಶ್ಯವಿರುವ ಆಮ್ಲಜನಕ ಪೂರೈಸುವ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಪ್ಲಾಂಟ್ನಿಂದ ಆಮ್ಲಜನಕ ಸೌಲಭ್ಯ ಮತ್ತಷ್ಟು ಸರಾಗವಾಗಿ ದೊರೆಯಲು ಅನುಕೂಲ ಕಲ್ಪಿಸಿದಂತಾಗಿದೆ.
ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಪ್ರಸ್ತುತ ಆಮ್ಲಜನಕ ಕೊರತೆಯ ಸಮಸ್ಯೆ ಇತ್ತು. ಇದೀಗ ಆಮ್ಲಜನಕ ಘಟಕ ಆರಂಭವಾಗಿರುವುದರಿಂದ ಈ ಸಮಸ್ಯೆ ನಿವಾರಣೆಯಾದಂತಾಗಿದೆ.
ಉಸ್ತುವಾರಿ ಸಚಿವರು ನಗರದ ಯಡಪುರ ಬಳಿ ನಿರ್ಮಾಣವಾಗುತ್ತಿರುವ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯ ಮೊದಲ ಎರಡು ಮಹಡಿಯಲ್ಲಿ ಕೋವಿಡ್ ಆಸ್ಪತ್ರೆಯನ್ನು ತುರ್ತಾಗಿ ಆರಂಭಿಸುವ ಸಂಬಂಧ ಕೈಗೊಂಡಿರುವ ಸಿದ್ದತೆಗಳನ್ನು ಪರಿಶೀಲಿಸಿದರು. ತದ ನಂತರ ಸಮೀಪದ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ತಾತ್ಕಲಿಕವಾಗಿ ಕೋವಿಡ್ ಕೇಂದ್ರ ಆರಂಭಿಸಲು ಸಜ್ಜುಗೊಳಿಸಿರುವ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ನಗರದ ಮಾದಾಪುರದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡದಲ್ಲಿ ಸಿದ್ದಮಾಡಿರುವ ಕೋವಿಡ್ ಕೇರ್ ಕೇಂದ್ರವನ್ನು ವೀಕ್ಷಿಸಿದರು. ಕೊರೊನಾ ವಾರಿಯರ್ಸ್ಗಳಿಗಾಗಿಯೇ ಈ ಕೋವಿಡ್ ಕೇಂದ್ರವನ್ನು ಮೀಸಲಿಡುವ ಉದ್ದೇಶದಿಂದ ವ್ಯವಸ್ಥೆಗಳಿಸಲಾಗಿರುವ ಸಿದ್ದತೆಯನ್ನು ಪರಿಶೀಲನೆ ನಡೆಸಿದರು.
ಕೋವಿಡ್ ಸಂಬಂಧಿ ಪ್ರಕರಣಗಳ ನಿಯಂತ್ರಣ ಹಾಗೂ ಸೋಂಕಿತರಿಗೆ ತುರ್ತಾಗಿ ಚಿಕಿತ್ಸೆ ನೀಡಲು ಕೋವಿಡ್ ಕೇರ್ ಕೇಂದ್ರಗಳ ಕೆಲಸಗಳನ್ನು ಅತ್ಯಂತ ಶೀಘ್ರವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಸುರೇಶ್ ಕುಮಾರ್ ಅವರು ಸೂಚನೆ ನೀಡಿದರು.
ಶಾಸಕ ಎನ್. ಮಹೇಶ್, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಡಿಎಚ್ಓ ಡಾ. ಎಂ.ಸಿ. ರವಿ, ವೈದ್ಯಕೀಯ ಕಾಲೇಜಿನ ಡೀನ್ ಡಾ. ಸಂಜೀವ್, ಉಪವಿಭಾಗಾಧಿಕಾರಿ ಡಾ. ಗಿರೀಶ್ ದಿಲೀಪ್ ಬಡೋಲೆ, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾಗೀರಥಿ, ತಹಶೀಲ್ದಾರ್ ಚಿದಾನಂದ ಗುರುಸ್ವಾಮಿ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…