ದ್ವಿಚಕ್ರ ವಾಹನಗಳಲ್ಲಿ ಗಾಂಜಾ ಸಾಗಣಿಕೆ: ಓರ್ವನನ್ನು ಬಂಧಿಸಿದ ಹನೂರು ಪೊಲೀಸರು
Team Udayavani, Sep 15, 2020, 3:43 PM IST
ಹನೂರು (ಚಾಮರಾಜನಗರ): ದ್ವಿಚಕ್ರ ವಾಹನಗಳಲ್ಲಿ ಅಕ್ರಮವಾಗಿ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ತಾಲೂಕಿನ ಜೀರಿಗೆಗೆದ್ದೆ ಗ್ರಾಮದ ಮಂಟೇಲಿಂಗಯ್ಯ ಅಲಿಯಾಸ್ ಮಂಟೇ (30) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತ ತಾಲೂಕಿನ ವಿ.ಎಸ್.ದೊಡ್ಡಿ ಗ್ರಾಮದಿಂದ ಅಕ್ರಮವಾಗಿ ಗಾಂಜಾ ಸಾಗಾನಿಕೆ ಮಾಡುತ್ತಿದ್ದಾನೆ ಎಂಬುದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ ಸಿಪಿಐ ರವಿನಾಯಕ್ ಮತ್ತು ತಂಡ ದಾಳಿ ನಡೆಸಿದ್ದಾರೆ.
ಈ ವೇಳೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಬೈಕಿನಲ್ಲಿ ಗಾಂಜಾ ಸಾಗಾಣಿಕೆ ಮಾಡುತ್ತಿದ್ದುದು ಖಚಿತವಾಗಿದೆ. ಈ ವೇಳೆ ಆತನಿಂದ 400ಗ್ರಾಂ ಒಣಗಾಂಜಾ ಮತ್ತು ಸಾಗಾಣಿಕೆ ಮಾಡುತ್ತಿದ್ದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: ಸ್ಯಾಂಡಲ್ ವುಡ್ ನಶೆ ನಂಟು: ಸೆಲೆಬ್ರೆಟಿ ದಂಪತಿ ದಿಗಂತ್ – ಐಂದ್ರೀತಾಗೆ ಸಿಸಿಬಿ ನೋಟಿಸ್
ದಾಳಿಯಲ್ಲಿ ಲೊಕ್ಕನಹಳ್ಳಿ ವೈದ್ಯಾಧಿಕಾರಿ ಡಾ||ಪ್ರಕಾಶ್, ಪೊಲೀಸ್ ಸಿಬ್ಬಂದಿಯಾದ ರಾಮದಾಸ್, ರಾಘವೇಂದ್ರ, ರಾಮಶೆಟ್ಟಿ, ಚಂದ್ರು, ಬಿಳಿಗೌಡ, ಜಮೀಲ್, ಪ್ರದೀಪ್, ರಾಜು ಇನ್ನಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?