ಡಿವೈಎಸ್ಪಿ, ಎಸ್ಐಗೆ ಸೋಂಕು: 90 ಸಿಬ್ಬಂದಿಗೂ ಟೆಸ್ಟ್
Team Udayavani, Apr 18, 2021, 2:37 PM IST
ಕೊಳ್ಳೇಗಾಲ: ಡಿವೈಎಸ್ಪಿ ಹಾಗೂ ಪಟ್ಟಣ ಠಾಣೆ ಎಸ್ಐಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಯಲ್ಲಿ ಗ್ರಾಮಾಂತರ ಮತ್ತು ಪಟ್ಟಣ ಠಾಣೆಯ ಸಿಬ್ಬಂದಿಗೆ ಶನಿವಾರ ಕೋವಿಡ್ ಪರೀಕ್ಷೆ ನಡೆಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾಸಾರಾ ಥಾಮಸ್ ಸೂಚನೆ ನೀಡಿದ ಮೇರೆಗೆ ಎರಡು ಠಾಣೆಗಳ ಸಿಬ್ಬಂದಿ ಹಾಗೂ ಡಿವೈಎಸ್ಪಿ ಕಚೇರಿಯ ಸಿಬ್ಬಂದಿ ಸೇರಿದಂತೆ ಒಟ್ಟಾರೆ 90 ಮಂದಿಗೆ ಕೋವಿಡ್ ಟೆಸ್ಟ್ಗೊಳಪಡಿಸಲಾಯಿತು. ಡಿವೈಎಸ್ಪಿ ನಾಗರಾಜು ಹಾಗೂ ಪಟ್ಟಣ ಠಾಣೆ ಎಸ್ಐ ತಾಜುದ್ದೀನ್ಗೆ ಕೊರೊನಾ ಸೋಂಕು ತಗುಲಿದೆ.
ಹೀಗಾಗಿ ಸಿಬ್ಬಂದಿಗಳಿಗೆ ಸೋಂಕು ಹರಡ ದಂತೆ ತಡೆಯಲು ಸಾಮೂಹಿಕವಾಗಿ ಪರೀಕ್ಷೆಗೆ ಒಳಪಡಿಸಲಾಗಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಬೇಕು ಮತ್ತು ಕೇಂದ್ರ ಸರ್ಕಾರ ನೀಡಿರುವ ನಿಯಮಗಳನ್ನು ಪಾಲಿಸಬೇಕು ಎಂದು ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್ ಆರ್. ಮುಧೋಳ್ ಸೂಚನೆ ನೀಡಿದ್ದಾರೆ.
ಈ ವೇಳೆ ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ವಿ.ಸಿ.ಅಶೋಕ್.ಪಟ್ಟಣ ಠಾಣೆ ಅಪರಾಧ ವಿಭಾಗದ ಎಸ್ಐ ಮಾದೇಗೌಡ ಮತ್ತಿತರರಿದ್ದರು. ಡಿವೈಎಸ್ಪಿ ನಾಗರಾಜು ಹಾಗೂ ಪಟ್ಟಣ ಠಾಣೆ ಎಸ್ಐ ತಾಜುದ್ದೀನ್ ಅವರು ಎರಡು ಬಾರಿ ಕೋವಿಡ್ ಲಸಿಕೆ ಪಡೆದಿದ್ದರೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಲ್ಲಾಧಿಕಾರಿ ರವಿ ಅವರಿಗೂ 2ನೇ ಬಾರಿ ವ್ಯಾಕ್ಸಿನ್ ಪಡೆದಿದ್ದರೂ ಸೋಂಕು ಕಾಣಿಸಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ