ಪ್ರತಿಯೊಬ್ಬರು ಗಿಡ ನೆಟ್ಟು ಪೋಷಿಸಿ
Team Udayavani, Jun 13, 2019, 3:00 AM IST
ಚಾಮರಾಜನಗರ: ನಗರದ ದೀನಬಂಧು ಟ್ರಸ್ಟ್ ಮತ್ತು ರಾಮಸಮುದ್ರ ಗ್ರಾಮಸ್ಥರ ಸಹಯೋಗದೊಂದಿಗೆ ಗಿಡಗಳನ್ನು ನೆಡುವ ಯೋಜನೆಗೆ ರಾಮಸಮುದ್ರದಲ್ಲಿ ಚಾಲನೆ ನೀಡಲಾಯಿತು. ಪ್ರಥಮ ಹಂತವಾಗಿ ರಾಮಸಮುದ್ರದ ಸಾರ್ವಜನಿಕರ ಸಹಯೋಗದೊಂದಿಗೆ ಬಾಗೆಮರ ಹಾಗೂ ತಿಬ್ಬಳ್ಳಿ ಕಟ್ಟೆಯಲ್ಲಿ ಗಿಡಗಳನ್ನು ನೆಡಲಾಯಿತು.
ರಸ್ತೆ ಅಗಲೀಕರಣಕ್ಕಾಗಿ ಡಾ.ಅಂಬೇಡ್ಕರ್ ಪ್ರತಿಮೆ ಬಳಿ, ರಾಮಸಮುದ್ರದ ಹೆಗ್ಗುರಾತಾಗಿದ್ದ ಬಾಗೆ ಮರವನ್ನು ಕಡಿದು ಹಾಕಲಾಗಿತ್ತು. ಹಾಗಾಗಿ ಅದೇ ಸ್ಥಳದಲ್ಲಿ ಬಾಗೆ ಗಿಡವನ್ನೇಡುವ ಮೂಲಕ ಯೋಜನೆಗೆ ಚಾಲನೆ ನೀಡಲಾಯಿತು.
ದೀನಬಂಧು ಸಂಸ್ಥೆಯ ಸಂಸ್ಥಾಪಕ ಪ್ರೊ.ಜಿ.ಎಸ್.ಜಯದೇವ, ರಾಮಸಮುದ್ರದ ದೊಡ್ಡ ಬೀದಿಯ ಯಜಮಾನರಾದ ಚನ್ನಂಜಯ್ಯ, ನಂಜಯ್ಯ, ಶಿವನಂಜಯ್ಯ, ನಗರಸಭಾ ಸದಸ್ಯ ಪ್ರಕಾಶ್ ಬಾಗೆ ಗಿಡ ನೆಟ್ಟು ನೀರೆರೆದರು.
ಮೊದಲ ಹಂತವಾಗಿ ರಾಮಸಮುದ್ರದ ಸಾರ್ವಜನಿಕರ ಸಹಯೋಗದಲ್ಲಿ ಗಿಡಗಳನ್ನು ನೆಡಲಾಗುತ್ತಿದೆ. ಮುಂದಿನ ಹಂತದಲ್ಲಿ ಸಮೀಪದ ಬಡಾವಣೆಯ ಮನೆಗಳ ಮುಂದೆ ವಿವಿಧ ಜಾತಿಯ ಸಸ್ಯಗಳನ್ನು ನೆಡಲಾಗುವುದು.
ಸಾರ್ವಜನಿಕರೇ ಗಿಡಗಳನ್ನು ಬೆಳೆಸುವ ಜವಾಬ್ದಾರಿ ವಹಿಸಿಕೊಂಡು ಪೋಷಿಸಬೇಕು. ಗಿಡಗಳನ್ನು ಬೆಳೆಸಲು ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಎಂದು ದೀನಬಂಧು ಸಂಸ್ಥೆಯ ಸಂಸ್ಥಾಪಕ ಜಿ.ಎಸ್. ಜಯದೇವ ತಿಳಿಸಿದರು.
ಬಳಿಕ ತಿಬ್ಬಳ್ಳಿ ಕಟ್ಟೆಯ ಬಳಿ ಅರಳಿ ಗಿಡವನ್ನು ನೆಡಲಾಯಿತು. ಶನಿ ಧಾರಾವಾಹಿಯ ಪ್ರಮುಖ ಪಾತ್ರಧಾರಿ, ದೀನಬಂಧು ಶಾಲೆ ವಿದ್ಯಾರ್ಥಿ ಸುನೀಲ್ ಗಿಡ ನೆಟ್ಟರು. ಟಿಆರ್ಸಿ ಸಂಯೋಜಕ ಸುನೀಲ್, ಮುಖ್ಯ ಶಿಕ್ಷಕ ಪ್ರಕಾಶ್, ದೈಹಿಕ ಶಿಕ್ಷಕ ಗುರುಸಿದ್ದಯ್ಯ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್ ಟಿಕೆಟ್?
Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು
Lok Sabha Poll 2024: ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕ್ಷೇತ್ರದಲ್ಲಿ ಈಗ ಬಿಜೆಪಿ ಪ್ರಾಬಲ್ಯ
Chamarajanagar: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್; ಪ್ರಯಾಣಿಕರಿಗೆ ಗಾಯ
ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಅಧಿಕಾರ ಗಟ್ಟಿಯಾಗುತ್ತೆ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!