ನಿರಂತರ ಕುಡಿವ ನೀರಿನ ಯೋಜನೆಗೆ ಗ್ರಹಣ

ಕಾಮಗಾರಿ ಆರಂಭವಾಗುತ್ತಿದ್ದಂತೆ ಪ್ರಗತಿಪರ ಸಂಘಟನೆಗಳ ತೀವ್ರ ವಿರೋಧ: ಕಾಮಗಾರಿ ಸ್ಥಗಿತ

Team Udayavani, Jun 21, 2019, 12:25 PM IST

cn-tdy-1..

ಕೊಳ್ಳೇಗಾಲ ಖಾಸಗಿ ಸ್ಥಳವೊಂದರಲ್ಲಿ ಶೇಖರಣೆಯಾಗಿರುವ ಕಾಮಗಾರಿಯ ಸಾಮಗ್ರಿಗಳು.

ಕೊಳ್ಳೇಗಾಲ: ಸರ್ಕಾರ ಪಟ್ಟಣದ 31 ವಾರ್ಡುಗಳಿಗೆ 24/7 ನಿರಂತರ ಕುಡಿಯುವ ನೀರು ಯೋಜನೆಯ ಕಾಮಗಾರಿಗೆ ಹಸಿರು ನಿಶಾನೆ ತೋರಿದ್ದು, ಕಾಮಗಾರಿ ಆರಂಭವಾಗುತ್ತಿದ್ದಂತೆ ಪ್ರಗತಿಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಕೆಲಸಕ್ಕೆ ಗ್ರಹಣ ಹಿಡಿದಿದೆ.

ಸರ್ಕಾರ ನಿರಂತರ ಕುಡಿಯುವ ನೀರು ಪೂರೈಕೆ ಮಾಡುವ ಸಲುವಾಗಿ ಸುಮಾರು 64 ಕೋಟಿ ರೂ. ಅಂದಾಜಿನಲ್ಲಿ ಕುಡಿಯುವ ನೀರು ಪೂರೈಕೆ ಮಾಡಲು ಈಗಾಗಲೇ ಸಂಬಂಧಿಸಿದ ಗುತ್ತಿಗೆದಾರರು ಬೇಕಾದ ಎಲ್ಲಾ ಸಾಮಗ್ರಿಗಳನ್ನು ಖಾಸಗಿ ವ್ಯಕ್ತಿಗಳ ಜಮೀನೊಂದರಲ್ಲಿ ದಾಸ್ತಾನು ಮಾಡುವಲ್ಲಿ ಮುಂದಾಗಿದ್ದಾರೆ.

ತುರ್ತುಸಭೆ: ಪಟ್ಟಣದ 31 ವಾರ್ಡುಗಳಿಗೆ 24/7 ಕುಡಿಯುವ ನೀರು ಪೂರೈಕೆ ಯೋಜನೆಯ ಬಗ್ಗೆ ಶಾಸಕ ಎನ್‌.ಮಹೇಶ್‌ ಕಳೆದ ಜೂ.3ರಂದು ಪಟ್ಟಣದ ಸಿಡಿಎಸ್‌ ಭವನದಲ್ಲಿ ಪ್ರಗತಿಪರ ಸಂಘಟನೆಯ ಮುಖಂಡರ ತುರ್ತು ಸಭೆಯೊಂದನ್ನು ಕರೆದಿದ್ದ ವೇಳೆ ಸಭೆಗೆ ಆಗಮಿಸಿದ್ದ ಎಲ್ಲಾ ಪ್ರಗತಿಪರ ಸಂಘಟನೆಯ ಮುಖಂಡರು 24/7 ಕುಡಿಯುವ ನೀರು ಪೂರೈಕೆಗೆ ಮೀಟರ್‌ ಅಳವಡಿಸುವ ಯೋಜನೆಗೆ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದನ್ನು ಸ್ಮರಿಸಬಹುದು.

ಕರಪತ್ರ: ತುರ್ತು ಸಭೆಯ ಬಳಿಕ ಸಂಬಂಧಿಸಿದ ಕಾಮಗಾರಿಯ ಗುತ್ತಿಗೆದಾರರು ಸಾಮಗ್ರಿಗಳನ್ನು ಮತ್ತಷ್ಟು ಸಂಗ್ರಹ ಮಾಡಿ ಟ್ಯಾಂಕ್‌ ನಿರ್ಮಾಣಕ್ಕೆ ಪಟ್ಟಣದ ವಿವಿಧ ಬಡಾವಣೆ ಗಳಲ್ಲಿ ಸ್ಥಳ ನಿಗದಿ ಮಾಡಲು ಹೊರಟಿದ್ದರು. ಇದನ್ನು ಕಂಡ ಸಂಘಟಕರ ಕೆಂಗಣಿಗೆ ಗುರಿಯಾಗಿ ಸಂಘಟಕರು ಕೂಡಲೇ ಕಾಮಗಾರಿ ಸ್ಥಗಿತಗೊಳಿಸಲು ಬೃಹತ್‌ ಆಂದೋಲನವನ್ನು ಜೂ.25ರಂದು ನಡೆಸಲು ಉದ್ದೇಶಿಸಿ ಕರಪತ್ರವನ್ನು ಹಂಚುತ್ತಿದ್ದಂತೆ ಶಾಸಕರು ಮತ್ತು ನಗರಸಭೆಯ ಅಧಿಕಾರಿಗಳು ಗಲಿಬಿಲಿಗೊಂಡರು.

ಪ್ರತಿಭಟನೆ: ರಾಜ್ಯದಲ್ಲಿ ಈ ಹಿಂದೆ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕರಾಗಿದ್ದ ಎಸ್‌.ಜಯಣ್ಣ ಅವರ ಅವಧಿಯಲ್ಲಿ ಈ ಯೋಜನೆ ಜಾರಿಗೆ ಬಂದಿತ್ತು. ಈ ಯೋಜನೆಯನ್ನು ತಡೆಹಿಡಿಯುವ ಸಲುವಾಗಿ ನೀರಿನ ಹಕ್ಕಿಗಾಗಿ ಆಂದೋಲನ ನೇತೃತ್ವದಲ್ಲಿ ಈಗಿನ ಸ್ಥಳೀಯ ಶಾಸಕ ಎನ್‌.ಮಹೇಶ್‌ ಪ್ರತಿಭಟನೆಯಲ್ಲಿ ಭಾಗವಹಿಸಿ ವಿರೋಧ ವ್ಯಕ್ತಪಡಿಸಿದ್ದರು.

ವಿಧಾನಸಭಾ ಚುನಾವಣೆಯ ಬಳಿಕ ಹೋರಾಟಗಾರರಾಗಿದ್ದ ಎನ್‌.ಮಹೇಶ್‌ ಅವರು ಶಾಸಕರಾಗಿ ಆಯ್ಕೆಗೊಂಡ ಬಳಿಕ ಕುಡಿಯುವ ನೀರು ಯೋಜನೆಗೆ ಮರು ಜೀವ ಬಂರುತ್ತಿದ್ದಂತೆ ಸಂಘಟಕರ ಕೆಂಗೆಣ್ಣಿಗೆ ಗುರಿಯಾದರು. ನಂತರ ಸಂಘಟಕರು ಈ ಯೋಜನೆಯನ್ನು ಸ್ಥಗಿತಗೊಳಿಸುವವರೆಗೂ ಹೋರಾಟ ಮಾಡುವ ದೃಢವಾದ ನಿಲುವಿಗೆ ಬಂದು ಮತ್ತಷ್ಟು ಸಂಘಟನೆಯನ್ನು ಬಲಗೊಳಿಸಿದ್ದರು.

ಸಾರ್ವಜನಿಕರಿಗೆ ತಿಳಿವಳಿಕೆ: ಸಂಘಟಕರು ತೀವ್ರ ಹೋರಾಟಕ್ಕೆ ಮುಂದಾಗುತ್ತಿದ್ದಂತೆ ಎಚ್ಚೆತ್ತ ಶಾಸಕರು ಈ ಯೋಜನೆಯನ್ನು ಹಿಂದಿನ ಶಾಸಕರು ಜಾರಿಗೆ ತಂದಿದ್ದರು. ಈ ಯೋಜನೆಯನ್ನು ಖಾಸಗಿ ವ್ಯಕ್ತಿಗಳಿಗೆ ವಹಿಸಬಾರದು ಎಂದು ಹೋರಾಟಕ್ಕೆ ಇಳಿದಿದ್ದು, ಆದರೆ ಕಾಮಗಾರಿಯನ್ನು ಖಾಸಗಿ ವ್ಯಕ್ತಿಗಳು ಪೂರೈಸಿದ ಬಳಿಕ ಇದರ ನಿರ್ವಹಣೆಯನ್ನು ನಗರಸಭೆಯವರು ನಡೆಸುವುದರಿಂದ ಸಾರ್ವಜನಿಕರಿಗೆ ಯೋಜನೆಯಿಂದ ಲಾಭವೇ ಹೊರತು ಇದರಿಂದ ಯಾವುದೇ ತರಹದ ಭಾರ ಜನರ ಮೇಲೆ ಬೀಳುವುದಿಲ್ಲ ಎಂದು ಸಮಜಾಯಿಷಿ ನೀಡಿದ್ದರು. ನಾಕೊಡೆ, ನಿಬಿಡೆ ಎನ್ನುವ ರೀತಿಯಲ್ಲಿ 24/7 ಯೋಜನೆ ತೀವ್ರ ಶಾಸಕರ ಮತ್ತು ಹೋರಾಟಗಾರರ ನಡುವೆ ತೀವ್ರ ಪೈಪೋಟಿ ಮತ್ತು ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಯೋಜನೆಗೆ ಮತ್ತಷ್ಟು ಗ್ರಹಣ ಹಿಡಿಯವುದೇ ಅಥವಾ ಸಾರ್ವಜನಿಕರಿಗೆ ಯೋಜನೆ ಲಭ್ಯವಾಗಲಿದೆ ಕಾಲ ನಿರ್ಣಯ ಮಾಡಲಿದೆ.

 

● ಡಿ.ನಟರಾಜು

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.