ಕಾಫಿ, ಕರಿಮೆಣಸು ಅಭಿವೃದ್ಧಿ ಯೋಜನೆಗೆ ಪ್ರೋತ್ಸಾಹ


Team Udayavani, Mar 6, 2021, 2:36 PM IST

ಕಾಫಿ, ಕರಿಮೆಣಸು ಅಭಿವೃದ್ಧಿ ಯೋಜನೆಗೆ ಪ್ರೋತ್ಸಾಹ

ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟದಲ್ಲಿ ಸೋಲಿಗ ಸಮುದಾಯದವರು ಬೆಳೆಯುತ್ತಿರುವ ಕಾಫಿ ಮತ್ತು ಕರಿಮೆಣಸಿಗೆ ಉತ್ತಮ ಮಾರುಕಟ್ಟೆ ಒದಗಿಸಿ ಸಮುದಾಯವನ್ನು ಆರ್ಥಿಕವಾಗಿ ಅಭಿವೃದ್ಧಿ ಪಡಿಸುವ ಸಮಗ್ರ ಯೋಜನೆಗೆ ಜಿಲ್ಲಾಡಳಿತದಿಂದ ಅಗತ್ಯ ಪ್ರೋತ್ಸಾಹ, ನೆರವು ನೀಡುವುದಾಗಿ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಿಳಿ ಗಿರಿರಂಗನ ಬೆಟ್ಟದ ಸೋಲಿಗ ಸಮುದಾಯದವರು ಉತ್ಪಾದಿಸುವ ಕಾಫಿ, ಕರಿಮೆಣಸಿನ ಸಮಗ್ರ ಅಭಿವೃದ್ಧಿ ಕಾರ್ಯಕ್ರಮ ಸಂಬಂಧ ಕಾಫಿ ಬೋರ್ಡ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕಾರ್ಯದರ್ಶಿ ಡಾ.ಕೆ.ಜಿ.ಜಗದೀಶ್‌ ಅವರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದರು.

ಯೋಜನೆಗೆ ಉತ್ತೇಜನ: ಬಿಳಿಗಿರಿರಂಗನ ಬೆಟ್ಟದ ಭಾಗದಲ್ಲಿ ಕಾಫಿ, ಕರಿಮೆಣಸು ಬೆಳೆಯುತ್ತಿರುವ 492 ಬೆಳೆಗಾರರನ್ನು ಒಳಗೊಂಡ ರೈತರ ಉತ್ಪಾದಕ ಸಂಸ್ಥೆ ಆಗಿರುವ ಬಿಳಿಗಿರಿ ಸೋಲಿಗರ ಉತ್ಪಾದಕರ ಕಂಪನಿ ಸದೃಢವಾಗಿ ಅಭಿವೃದ್ಧಿಹೊಂದಲು 2021-22ರ ವರ್ಷಕ್ಕೆ ರೂಪಿಸಲಾಗಿರುವ ಉದ್ದೇಶಿತ ಯೋಜನೆ ಗಾಗಿ ಬೇಕಿರುವ ಎಲ್ಲಾ ಸಹಕಾರ ನೀಡಲಾಗುವುದು. ಸೋಲಿಗರ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ಸಹಾಯಕವಾಗುವ ಯೋಜನೆಗೆ ಉತ್ತೇಜನ ನೀಡಲಾಗುವುದೆಂದರು.

ಸಹಕಾರ: ಕಾಫಿ ಬೋರ್ಡ್‌ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಕೆ.ಜಿ.ಜಗದೀಶ್‌ ಮಾತನಾಡಿ, ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಫಿ, ಮೆಣಸು ಬೆಳೆ ಬೆಳೆಯುತ್ತಿರುವ ಸೋಲಿಗರ ಉತ್ಪಾದಕ ಸಂಸ್ಥೆಗೆ ಉತ್ಪನ್ನ ಗಳ ಸಂಸ್ಕರಣಾ ಘಟಕ, ಮಣ್ಣು ಪರೀಕ್ಷೆ, ತರಬೇತಿ ಕೇಂದ್ರ, ಉಗ್ರಾಣ ಇನ್ನಿತರ ಉದ್ದೇಶಗಳಿಗಾಗಿ ಭೂಮಿ ಅಗತ್ಯವಿದೆ. ಇದಕ್ಕಾಗಿ ಜಿಲ್ಲಾಡಳಿತದ ಸಹಕಾರ ನೀಡಬೇಕೆಂದರು. ಈ ಪ್ರಸ್ತಾವನೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ. ಎಂ.ಆರ್‌.ರವಿ, ಅಗತ್ಯವಿರುವ ಭೂಮಿ ನೀಡಲು ಸಹಕರಿಸುವುದಾಗಿ ತಿಳಿಸಿದರು.

ಡಾ.ಕೆ.ಜಿ.ಜಗದೀಶ್‌ ಮಾತನಾಡಿ, ಬೆಳೆಗಾರರಿಗೆ ಎರೆಹುಳು ಗೊಬ್ಬರ, ಇತರೆ ಜೈವಿಕ ಗೊಬ್ಬರ ನೀಡುವ ಮುಖೇನ ಇಳುವರಿ ಹೆಚ್ಚಳಕ್ಕೆ ಪ್ರೋತ್ಸಾಹಿಸಬೇಕಿದೆ. ಕಾಫಿ ಮೆಣಸು ಒಣಗಿಸಲು ಟಾರ್ಪಾಲಿನ್‌ ಒದಗಿಸ ಬೇಕಿದೆ ಎಂದರು.

ನೆರವು ನೀಡಿ: ಕಿತ್ತಲೆ, ನಿಂಬೆ, ಬಟರ್‌ ಫ್ರೊಟ್‌ ನಂತಹಹಣ್ಣುಗಳ ಬೆಳೆಗೆ ಅವಕಾಶ ಮಾಡಿಕೊಡಬೇಕು. ನೆರಳಿನ ಮರ ಬೆಳೆಸುವ ನಿಟ್ಟಿನಲ್ಲಿ ಬಿತ್ತನೆ ಬೀಜ ಹಾಗೂ ಸಸಿಗಳನ್ನು ತೋಟಗಾರಿಕೆ ಇಲಾಖೆ ನೀಡಬೇಕು. ನರೇಗಾ ಯೋಜನೆಯಡಿ ಮಣ್ಣು ಸಂರಕ್ಷಣೆ ಮಾದರಿಗೆ ನೆರವಾಗಬೇಕು. ಬ್ಯಾಂಕುಗಳಿಂದಲೂ ವಹಿವಾಟಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕೆಂದು ಕಾಫಿ ಬೋರ್ಡ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಜಿ. ಜಗದೀಶ್‌ ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಮಾತನಾಡಿ, ಬೆಳೆಗಾರರ ಹಿತದೃಷ್ಟಿ ಹಾಗೂ ಉತ್ಪನ್ನಗಳಿಗೆ ವಿಶೇಷ ಮನ್ನಣೆ ನೀಡಿ ಅವುಗಳ ವೈಶಿಷ್ಟ್ಯತೆ, ಮೌಲ್ಯವರ್ಧನೆ ಹೆಚ್ಚಿಸಲಾಗುವುದು. ರೈತ ಉತ್ಪಾದಕ ಸಂಸ್ಥೆ ನಿರಂತರವಾಗಿ ಸಂಪರ್ಕದಲ್ಲಿದ್ದು ಪ್ರಗತಿಗೆ ಪೂರಕ ಸಹಕಾರ ಪಡೆದುಕೊಳ್ಳಬೇಕು ಎಂದರು.

ಇದೇ ವೇಳೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಬಿಳಿಗಿರಿ ಸೋಲಿಗರ ಉತ್ಪಾದಕರ ಕಂಪನಿಗೆ 30 ಲಕ್ಷ ರೂ. ಆವರ್ತ ನಿಧಿ ಪ್ರಮಾಣ ಪತ್ರ ನೀಡಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಕಾತ್ಯಾಯಿನಿದೇವಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೊನ್ನೇಗೌಡ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ವಿಜಯ್‌ ಕುಮಾರ್‌, ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ವಿಜಯ್‌ ಕುಮಾರ್‌ ಚೌರಾಸಿಯ, ನಬಾರ್ಡ್‌ನ ವ್ಯವಸ್ಥಾಪಕಿ ಹಿತಾ ಜಿ. ಸುವರ್ಣ, ಬಿಳಿಗಿರಿ ಸೋಲಿಗರ ಉತ್ಪಾದಕರ ಕಂಪನಿ ಅಧ್ಯಕ್ಷೆ ಸುಮತಿ, ಕಾರ್ಯದರ್ಶಿ ನಂಜೇಗೌಡ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್‌, ಕಾಫಿ ಬೋರ್ಡ್‌ನ ಹಿರಿಯ ಅಧಿಕಾರಿಗಳು, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಿವಪ್ರಸಾದ್‌ ಇತರರು ಇದ್ದರು.

ಮಾರಾಟ ಮಳಿಗೆ ಸ್ಥಾಪನೆಗೆ ಅವಕಾಶ :

ಸಂಸ್ಥೆ ಉತ್ಪಾದಿಸುವ ಉತ್ಪನ್ನಗಳಿಗೆ ಬಿಳಿಗಿರಿರಂಗನ ಬೆಟ್ಟ, ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾರಾಟ ಮಳಿಗೆ ಸ್ಥಾಪನೆಗೆ ಅವಕಾಶ ನೀಡಬೇಕು ಎಂಬ ಉದ್ದೇಶಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ರವಿ, ಮಲೆಮಹದೇಶ್ವರ ಬೆಟ್ಟದಲ್ಲಿ ತಕ್ಷಣವೇ ಮಾರಾಟ ಮಳಿಗೆ ತೆರೆಯಲು ಅವಕಾಶ ಮಾಡಿಕೊಡಲುಕ್ರಮ ವಹಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.