ಸೌಲಭ್ಯ ವಂಚಿತ ಸರ್ಕಾರಿ ಕಾಲೇಜು; ತಿರುಗಿ ನೋಡ ಜನಪ್ರತಿನಿಧಿಗಳು

ಕಾಲೇಜಿನ ಕೊರತೆಗಳ ಬಗ್ಗೆ ಶಾಸಕರು, ಸಂಸದರ ಗಮನಕ್ಕೆ ತಂದಿದ್ದೇವೆ.

Team Udayavani, Jun 15, 2022, 6:31 PM IST

ಸೌಲಭ್ಯ ವಂಚಿತ ಸರ್ಕಾರಿ ಕಾಲೇಜು; ತಿರುಗಿ ನೋಡ ಜನಪ್ರತಿನಿಧಿಗಳು

ಎಚ್‌.ಡಿ.ಕೋಟೆ: ಕುಡಿಯಲು ನೀರಿಲ್ಲ, ಶೌಚಾಲಯ ಇಲ್ಲ, ಬಯಲಿನಲ್ಲೇ ಮಲ ಮೂತ್ರ ವಿಸರ್ಜನೆ, ಕಾಂಪೌಂಡ್‌ ಇಲ್ಲ, ನೆಪಮಾತ್ರಕ್ಕೆ ಆಟದ ಮೈದಾನ ಇದೆ, 6 ಮಂದಿ ಉಪನ್ಯಾಸಕರ ಹುದ್ದೆ ಖಾಲಿ. ಇದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದುಸ್ಥಿತಿ.

ಸರ್ಕಾರಿ ಶಾಲಾ ಕಾಲೇಜುಗಳು ಖಾಸಗಿ ಶಿಕ್ಷಣ ಸಂಸ್ಥೆಗಳಿಂತ ಕಡಿಮೆ ಇಲ್ಲ ಎಂದು ಹೇಳುವ ಸರ್ಕಾರ, ಸ್ಥಳೀಯ ಜನಪ್ರತಿನಿಧಿಗಳು ತಾಲೂಕು ಕೇಂದ್ರ ಸ್ಥಾನದಲ್ಲಿನ ಸರ್ಕಾರಿ ಪದವಿ ಕಾಲೇಜಿಗೆ ಬಂದರೆ ತಿಳಿಯುತ್ತದೆ. ಎಚ್‌ .ಡಿ.ಕೋಟೆ ತಾಲೂಕು ಹಿಂದುಳಿದ ತಾಲೂಕು, ಈ ತಾಲೂಕಿನ ಅಭಿವೃದ್ಧಿಗೆ ಸರ್ಕಾರ ವಿಶೇಷ ಅನುದಾನದ ಹೊಳೆಯನ್ನೇ ಹರಿಸುತ್ತಿದೆ. ಆದರೂ, ತಾಲೂಕು ಇಂದಿಗೂ ಅಭಿವೃದ್ಧಿ ಕಂಡಿಲ್ಲ. ಇದಕ್ಕೆ ಜನಪ್ರತಿನಿಧಿಗಳು ಸರ್ಕಾರದ
ನಿರ್ಲಕ್ಷ ತನ ಕಾರಣ ಅನ್ನುವ ಆರೋಪಗಳು ತಾಲೂಕಿನ ಬುದ್ಧಿಜೀವಿಗಳಿಂದ ಕೇಳಿ ಬರುತ್ತಿದೆ.

ಕಾಲೇಜಿನ ಸಮಸ್ಯೆ ಅರಿತ ತಿಂಗಳ ಹಿಂದಷ್ಟೇ ಕಾಲೇಜಿನ ಪ್ರಭಾರ ಪ್ರಾಚಾರ್ಯರಾಗಿ ಅಧಿಕಾರವಹಿಸಿಕೊಂಡ ಡಾ.ಪ್ರಸನ್ನ, ಸಂಸದರು, ಶಾಸಕರ ಗಮನಕ್ಕೆ ತಂದು ದಾನಿಗಳಿಂದ ಕಾಲೇಜಿನ ಶುಚಿತ್ವಕ್ಕೆ ಮುಂದಾಗಿರುವುದು ವಿದ್ಯಾರ್ಥಿಗಳಷ್ಟೇ ಅಲ್ಲದೆ, ಸ್ಥಳೀಯರಿಗೂ ಪ್ರಸನ್ನ ಅವರ ನಿಲುವು ಹರ್ಷ ತಂದಿದೆ.

1985ರಲ್ಲಿ ಸ್ಥಾಪನೆಯಾದ ಕಾಲೇಜು: ತಾಲೂಕು ಕೇಂದ್ರ ಸ್ಥಾನದ ಸರ್ಕಾರಿ ಪದವಿ ಕಾಲೇಜು 1985ನೇ ಸಾಲಿನಲ್ಲಿ ಲೋಕಾರ್ಪಣೆ ಆಯಿತು. ಇಂದಿಗೂ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಆರಂಭಗೊಂಡಿಲ್ಲ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಮೈಸೂರು ಜಿಲ್ಲಾ ಕೇಂದ್ರಕ್ಕೆ ತೆರಳಬೇಕಾದ ಅನಿವಾರ್ಯತೆ ಇದೆ. ಶಿಕ್ಷಣವೇ ಅಭಿವೃದ್ಧಿ ಮೂಲ ಅನ್ನುವ ಸರ್ಕಾರ ಅಥವಾ ಚುನಾಯಿತ ಪ್ರತಿನಿಧಿಗಳು ತಾಲೂಕಿನ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿಲ್ಲ ಅನ್ನುವುದಕ್ಕೆ ಕಾಲೇಜಿನ ಶೈಕ್ಷಣಿಕ ಮಟ್ಟ ಪ್ರತ್ಯಕ್ಷ ಸಾಕ್ಷಿಯಾಗಿದೆ.

ಇಲ್ಲಗಳ ನಡುವೆ ನೆಪಮಾತ್ರದ ಕಾಲೇಜು: ಕಾಲೇಜಿನಲ್ಲಿ ಶೌಚಾಲಯ ಇಲ್ಲ, ಆಟದ ಮೈದಾನದಲ್ಲಿ ಗಿಡಗಂಟಿ ಬೆಳೆದುನಿಂತು ವಿಷ ಜಂತುಗಳ ಅವಾಸ ಸ್ಥಾನವಾಗಿದೆ. ಕುಡಿಯಲು ನೀರಿಲ್ಲ, ಕಾಂಪೌಂಡ್‌ ಇಲ್ಲದೆ ದನಕರುಗಳಷ್ಟೇ ಅಲ್ಲದೆ, ರಾತ್ರಿ ವೇಳೆ ಕುಡುಕರ ಅನೈತಿಕತೆಯ ತಾಣವಾಗಿದೆ. ಮಲ ಮೂತ್ರ ವಿಸರ್ಜನೆಗೆ ಬಯಲನ್ನೇ ಅವಲಂಬಿಸಬೇಕಾದ ಅನಿವಾರ್ಯತೆ ಇದ್ದರೂ, ಕಾಲೇಜಿನ ಸಮಸ್ಯೆಗಳ ಕಡೆ ಯಾರೂ ಕ್ಯಾರೆ ಅನ್ನುತ್ತಿಲ್ಲ. ಹಾಗಾಗಿ ಇಲ್ಲಗಳ ನಡುವೆ
ಕಾಲೇಜಿನಲ್ಲಿ ಕಲಿಯಬೇಕಿದೆ ಅನ್ನುವುದು ವಿದ್ಯಾರ್ಥಿಗಳ ಅಳಲು.

ಕಾಲೇಜಿಗೆ ಮೂಲಸೌಕರ್ಯ ಒದಗಿಸಿ: ಸರ್ಕಾರಿ ಶಾಲಾ ಕಾಲೇಜು ಅನ್ನುವ ತಾತ್ಸರ ಮನೋ ಭಾವ ಜನರಿಂದ ದೂರವಾಗಲು ಸರ್ಕಾರ, ಸ್ಥಳೀಯ ಶಾಸಕರು, ಸಂಸದರು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡುವ ಮೂಲಕ ಕಾಲೇಜಿನ ಮೂಲ ಸೌಕರ್ಯ ಒದಗಿಸಲು ಮುಂದಾಗಬೇಕು ಅನ್ನುತ್ತಾರೆ ಕಾಲೇಜಿನ ವಿದ್ಯಾರ್ಥಿನಿಯರು.

ಉಪನ್ಯಾಸಕರ ನಿಯೋಜನೆಗೆ ಕ್ರಮಕೈಗೊಳ್ಳಿ: ಕಾಲೇಜಿನಲ್ಲಿದ್ದ ಪ್ರಾಚಾರ್ಯರು ಸೇರಿ ಒಟ್ಟು 6 ಉಪನ್ಯಾಸಕರು ವರ್ಗಾವಣೆಗೊಂಡಿದ್ದಾರೆ. ಕಾಲೇಜಿನಲ್ಲಿ 6 ಮಂದಿ ಉಪನ್ಯಾಸಕರ ಕೊರತೆ ಇದೆಯಾದರೂ, ತಾಲೂಕು ಕೇಂದ್ರದ ಕಾಲೇಜಿಗೆ ಉಪನ್ಯಾಸಕರ ಹುದ್ದೆ ತುಂಬಿಲ್ಲ. ಇದರಿಂದ ವಿದ್ಯಾರ್ಥಿಗಳ ಕಲಿಕೆಗೆ ಅಡಚಣೆಯಾಗುತ್ತಿದೆ. ಸಂಬಂಧಪಟ್ಟವರು ಕಾಲೇಜಿನ ಮೂಲ ಸೌಕರ್ಯ ನೀಗಿಸುವಂತೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮನವಿ ಮಾಡಿಕೊಂಡಿದ್ದಾರೆ.

ಆಡಳಿತ ಮಂಡಳಿ ಕಾರ್ಯಕ್ಕೆ ಮೆಚ್ಚುಗೆ: ಮೂಲ ಸಮಸ್ಯೆಗಳಿಂದ ವಂಚಿತವಾಗಿದ್ದ ಕಾಲೇಜಿನ ಸ್ಥಿತಿ ಅರಿತ, ಕಾಲೇಜಿನ ಪ್ರಭಾರ ಪ್ರಾಚಾರ್ಯ ಡಾ.ಪ್ರಸನ್ನ ಮತ್ತು ಆಡಳಿತ ಮಂಡಳಿ ದಾನಿಗಳ ಮನ ಒಲಿಸಿ, ಕಾಲೇಜಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮೆಟ್ಲಿಂಗ್‌ ಕಾಮಗಾರಿ ನಡೆಸಿದ್ದಾರೆ. ಕಾಲೇಜಿನ ಸುತ್ತಲೂ ಆವರಿಸಿಕೊಂಡಿದ್ದ ಗಿಡಗಂಟಿಗಳನ್ನು ತೆರವುಗೊಳಿಸಿ, ಕಾಲೇಜಿನ ಸುತ್ತಲೂ ಮಣ್ಣು ಹಾಕಿ ಗಿಡಗಳನ್ನು ಬೆಳೆಸಿ, ಪರಿಸರ ಸಂರಕ್ಷಣೆ ಮಾಡುವ ಕಾರ್ಯ ಕೈಗೆತ್ತಿ ಕೊಂಡಿರುವುದು ವಿದ್ಯಾರ್ಥಿಗಳಿಗಷ್ಟೇ ಅಲ್ಲದೆ, ಪೋಷಕರು ಸಾರ್ವಜನಿಕರಿಗೂ ಆಡಳಿತ ಮಂಡಳಿ ಕಾರ್ಯ ಮೆಚ್ಚುಗೆ ತಂದಿದೆ.

ಕಾಲೇಜಿನ ಕೊರತೆಗಳ ಬಗ್ಗೆ ಶಾಸಕರು, ಸಂಸದರ ಗಮನಕ್ಕೆ ತಂದಿದ್ದೇವೆ. ದಾನಿಗಳ ಮನ ಒಲಿಸಿ, ಶುಚಿತ್ವ ಮತ್ತು ರಸ್ತೆ ಮೆಟ್ಲಿಂಗ್‌ ಕಾಮಗಾರಿ ಆರಂಭಿಸಿದ್ದೇವೆ. ಕಾಲೇಜಿನ ಸಮಸ್ಯೆ ಪರಿಹಾರಕ್ಕೆ ಹಂತವಾಗಿ ಕ್ರಮಕೈಗೊಳ್ಳಲಾಗುತ್ತದೆ.
●ಡಾ.ಪ್ರಸನ್ನ, ಪ್ರಭಾರ ಪ್ರಾಚಾರ್ಯರು

ಉತ್ತಮ ಶಿಕ್ಷಣಕ್ಕಾಗಿ ಸರ್ಕಾರಿ ಶಾಲಾ ಕಾಲೇಜಿಗೆ ಸೇರುವಂತೆ ಸರ್ಕಾರ ಹೇಳುತ್ತದೆ. ಆದರೆ, ತಾಲೂಕು ಕೇಂದ್ರ ಸ್ಥಾನದ ಸರ್ಕಾರಿ ಕಾಲೇಜಿನಲ್ಲಿ ಶೌಚಾಲಯ, ಕುಡಿಯುವ ನೀರು, ಆಟದ ಮೈದಾನ, ಉಪನ್ಯಾಸಕರ ಕೊರತೆ, ಕಾಪೌಂಡ್‌, ಇನ್ನಿತರ ಸೌಲಭ್ಯಗಳ ಕೊರತೆ ನಡುವೆ ಕಾಲೇಜಿನಲ್ಲಿ ಕಲಿಯುವುದು ಹೇಗೆ. ಹೀಗಾದರೆ ಸರ್ಕಾರಿ ಶಾಲಾ ಕಾಲೇಜಿನಲ್ಲಿ ಕಲಿಯಲು ಸಾಧ್ಯವೆ?
●ಕೀರ್ತನಾ, ದ್ವಿತೀಯ ಬಿಎ ವಿದ್ಯಾರ್ಥಿನಿ.

● ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.