ಠಾಣೆಯಲ್ಲೇ ವಿಷ ಸೇವಿಸಿದ್ದ ರೈತ ಸಾವು;ಗುಂಡ್ಲುಪೇಟೆಯಲ್ಲಿ ನಿಷೇಧಾಜ್ಞೆ
Team Udayavani, Mar 28, 2017, 9:30 AM IST
ಗುಂಡ್ಲುಪೇಟೆ: ಜಮೀನಿನ ಎಲ್ಲೆ ಗುರುತಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆತಂದಿದ್ದಾಗ ಪೊಲೀಸ್ ಠಾಣೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಉಪ ಚುನಾವಣಾ ಕಣವಾಗಿರುವ ಕ್ಷೇತ್ರದಲ್ಲಿ ರೈತನ ಸಾವು ಖಂಡಿಸಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಲಿರುವ ಹಿನ್ನಲೆಯಲ್ಲಿ ಕ್ಷೇತ್ರದಲ್ಲಿ ಮಂಗಳವಾರ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಕಗ್ಗಳದಹುಂಡಿ ಗ್ರಾಮದ ವಾಸಿ ರೈತ ನಾಗೇಶ್ (30) ಎಂಬುವವರೇ ಮೃತರು. ಇವರ ಜಮೀನಿನ ಸಮೀಪ ಚೀನಾ ಮೂಲದ ಚೆಂಡುಮಲ್ಲಿಗೆ ಸಂಸ್ಕರಣಾ ಘಟಕ ನಿರ್ಮಾಣವಾಗುತ್ತಿತ್ತು. ಈ ಸಂಬಂಧ ಎಲ್ಲೆ ಗುರುತಿಸುವವರೆಗೂ ಇಲ್ಲಿಗೆ ತಂತಿ ಬೇಲಿ ಹಾಕಬಾರದು ಎಂದು ಕಂಪನಿಯವರಿಗೆ ನಾಗೇಶ್ ತಿಳಿಸಿದ್ದರು. ಈ ಬಗ್ಗೆ ತಂತಿ ಬೇಲಿಹಾಕಲು ನಾಗೇಶ್ ತೊಂದರೆ ನೀಡುತ್ತಿದ್ದಾರೆಂದು ಚೀನಾ ಕಂಪನಿಯವರು ತೆರಕಣಾಂಬಿ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಾ.24ರಂದು ತಾಲೂಕಿನ ತೆರಕಣಾಂಬಿ ಪೊಲೀಸರು ವಿಚಾರಣೆಗೆ ಕರೆದುಕೊಂಡು ಹೋಗಿದ್ದರು. ಇದರಿಂದ ಮನನೊಂದ ನಾಗೇಶ್ ಠಾಣೆಯಲ್ಲೇ ವಿಷ ಸೇವಿಸಿ ಆತ್ಮಹತೆಗೆ ಪ್ರಯತ್ನಿಸಿದ್ದರು.
ಕೂಡಲೇ ಪೊಲೀಸರು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು. ಆದರೆ ಸೋಮವಾರ ಸಂಜೆ 4ರ ಸಮಯದಲ್ಲಿ ಚಿಕಿತೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ತನ್ನ ತಮ್ಮನಿಗೆ ನಿರಂತರ ಮಾನಸಿಕ ಕಿರುಕುಳ ನೀಡುತ್ತಿದ್ದ ಕಾರ್ಖಾನೆಯ ವಿರುದ್ಧ ಸೋದರ ಮಹೇಶ್ ತೆರಕಣಾಂಬಿ ಠಾಣೆಯಲ್ಲಿ ದೂರು ನೀಡಿದ್ದರು.
ಗುಂಡ್ಲುಪೇಟೆಯಲ್ಲಿ ಮುಂಜಾಗೃತ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಎಸ್ಪಿ ಪ್ರದೀಪ್ ಕುಮಾರ್ ಜೈನ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ