ಹಿಂಗಾರು ರಾಗಿ ಖರೀದಿಸದಿದ್ದರೆ ಹೋರಾಟ
ಕಾಮಗೌಡನಹಳ್ಳಿಯಲ್ಲಿ ರೈತ ಸಂಘ, ಹಸಿರು ಸೇನೆ ಘಟಕ ಉದ್ಘಾಟನೆ
Team Udayavani, Feb 25, 2021, 6:29 PM IST
ಹುಣಸೂರು: ರಾಗಿ ಖರೀದಿ ಕೇಂದ್ರದಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆದಿರುವ ರಾಗಿಯನ್ನು ಖರೀದಿಸದಿದ್ದರೆ ಹೋರಾಟ ನಡೆಸಲಾಗುವುದು ಎಂದು ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಜಯರಾಂ ಎಚ್ಚರಿಕೆ ನೀಡಿದರು.
ತಾಲೂಕಿನ ಕಾಮಗೌಡನಹಳ್ಳಿಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ ನೂತನ ಹನಗೋಡು ಹೋಬಳಿಯ ಗ್ರಾಮ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ರೈತರು ಸಂಘಟಿತರಾದಲ್ಲಿ ಮಾತ್ರ ನ್ಯಾಯ ಪಡೆದುಕೊಳ್ಳಲು ಸಾಧ್ಯ, ತಾಲೂಕಿನ ಪ್ರತಿ ಹಳ್ಳಿಗಳಲ್ಲೂ ಗ್ರಾಮಘಟಕ ಆರಂಭಿಸಲಾಗುವುದು. ರೈತರ ವಿಚಾರದಲ್ಲಿ ಅಧಿಕಾರಿಗಳ ಮನೋಭಾವ ಬದಲಾಗಬೇಕು. ಕೃಷಿ ಇಲಾಖೆ ನಿರ್ಲಕ್ಷ್ಯದಿಂದಾಗಿ ತಂಬಾಕು ಮತ್ತಿತರ ಬೆಳೆಗಳ ನಂತರ ಈ ಭಾಗದಲ್ಲಿ ಹಿಂಗಾರು ಬೆಳೆಯಾಗಿ ರಾಗಿ ಬೆಳೆದಿದ್ದು, ಆದರೆ, ಸಮೀಕ್ಷೆಯಲ್ಲಿ ಕೈಬಿಡಲಾಗಿದೆ. ಹೀಗಾಗಿ ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲು ತೊಂದರೆಯಾಗಿದೆ. ಸರ್ಕಾರ ತಕ್ಷಣ ಹಿಂಗಾರಿನ ರಾಗಿ ಬೆಳೆಗೂ ಮಾರಾಟ ಮಾಡಲು ಅವಕಾಶ ಕಲ್ಪಿಸಬೇಕು. ಇಲ್ಲದಿದ್ದರೆ ಸಂಘದವತಿಯಿಂದ ಪ್ರತಿಭಟಿಸ ಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಗ್ರಾಮದ ಯಜಮಾನರಾದ ಚಿಕ್ಕೇಗೌಡ, ನರಸಾಚಾರಿ, ಸಣ್ಣಜವರನಾಯ್ಕ, ಮೂರ್ತಿ, ತಮ್ಮೇಗೌಡ, ಸಂಘದ ಜಿಲ್ಲಾಧ್ಯಕ್ಷ ಕೃಷ್ಣಕುಮಾರ್, ಜಿಲ್ಲಾ ಮತ್ತು ತಾಲೂಕಿನ ಪದಾಧಿಕಾರಿಗಳಾದ ಕುಮಾರ್ ಬೋವಿ, ಅಣ್ಣೇಗೌಡ, ತೀರ್ಥಕುಮಾರ್, ರಾಜಯ್ಯ, ರೇವಣ್ಣ, ಶ್ರೀನಿವಾಸ್, ಚಿಕ್ಕನಂಜಯ್ಯ, ರಾಜಣ್ಣ, ನಿಂಗಮ್ಮ, ಅನುಸೂಯಮ್ಮ, ಚಂದ್ರಶೇಖರ್, ಗ್ರಾಮಘಟಕದ ಅಧ್ಯಕ್ಷರಾದ ಪ್ರಕಾಶ್, ದೇವನಾಯ್ಕ, ಮಾದನಾಯ್ಕ, ಸ್ವಾಮಿ, ನಾಗರಾಜ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ