ವಿದ್ಯುತ್‌ ಸಮಸ್ಯೆ ಬಗೆಹರಿಸಲು ರೈತರ ಆಗ್ರಹ


Team Udayavani, Oct 4, 2019, 4:15 PM IST

CN-TDY-1

ಕೊಳ್ಳೇಗಾಲ: ತಾಲೂಕು ಮತ್ತು ಹನೂರು ತಾಲೂಕು ಗಳಲ್ಲಿ ರೈತರು ವಿದ್ಯುತ್‌ ಸಮಸ್ಯೆ ತಲೆದೋರಿದ್ದು, ಕೂಡಲೇ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಎರಡು ತಾಲೂಕು ಘಟಕದ ರೈತ ಮುಖಂಡರು ಸೆಸ್ಕ್ ಕಾರ್ಯಪಾಲಕ ಅಭಿಯಂತರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಎರಡು ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ರೈತ ಮುಖಂಡರು ಪಟ್ಟಣದ ಆರ್‌ಎಂಸಿ ಆವರಣದಲ್ಲಿ ಸೇರಿ ನಂತರ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ರೈತರಿಗೆ ಎದುರಾಗಿರುವ ಸಮಸ್ಯೆ ಪರಿಹರಿಸ ಬೇಕು. ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು.

ಕಿರುಕುಳ ತಪ್ಪಿಸಿ: ಇದೇ ವೇಳೆ ರೈತ ಮುಖಂಡರು ಮಾತ ನಾಡಿ, ವಿದ್ಯುತ್‌ ಬಿಲ್‌ ಕಟ್ಟದೆ ಕರ ನಿರಾಕರಣೆ ಚಳವಳಿ ಮಾಡುತ್ತಿರುವ ರೈತರ ವಿದ್ಯುತ್‌ ಬಿಲ್‌ ಬಾಕಿಯನ್ನು ವಸೂಲಿ ಮಾಡದೆ ಹಳೆಯ ಮೀಟರ್‌ಗಳನ್ನು ತೆಗೆದು ಹೊಸ ಮೀಟರ್‌ ಅಳವಡಿಸಬೇಕು. ರೈತರ ಮನೆಗಳಿಗೆ ತೆರಳಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಕಿರುಕುಳ ನೀಡುತ್ತಿರುವುದನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿದರು.

ಕಠಿಣ ಕ್ರಮಕ್ಕೆ ಆಗ್ರಹ: ಎರಡು ತಾಲೂಕುಗಳಲ್ಲಿ ಸೆಸ್ಕ್ಇ ಲಾಖೆ ವತಿಯಿಂದ ನೇಮಕಗೊಂಡಿರುವ ಅಧಿಕಾರಿ ಗಳು ಮತ್ತು ಲೈನ್‌ಮ್ಯಾನ್‌ಗಳು ಕೇಂದ್ರ ಸ್ಥಾನದಲ್ಲಿ ವಾಸ್ತವ್ಯ ಇರಬೇಕು. ವಾಸ್ತವ್ಯ ಇರದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಇಲಾಖೆಯಲ್ಲಿ ಮೂರು ವರ್ಷಕ್ಕಿಂತ ಹೆಚ್ಚು ವರ್ಷಗಳ ಕಾಲ ಕೆಲಸ ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಬದಲಾಯಿಸಿ ರೈತರ ಕೆಲಸ ಕಾರ್ಯಗಳು ಸುಗಮಗೊಳ್ಳುವಂತೆ ಮಾಡ ಬೇಕು ಎಂದು ಆಗ್ರಹಿಸಿದರು.

ಸಮಸ್ಯೆ ಬಗೆಹರಿಸಿ: ವಿದ್ಯುತ್‌ ಪರಿವರ್ತಕ ಕೆಟ್ಟ ವೇಳೆ ಅದನ್ನು ಬದಲಾಯಿಸಲು ಇಲಾಖೆಯಿಂದ ನೂತನ ಪರಿಕರವನ್ನು ರೈತರು ವಾಹನದಲ್ಲಿ ಸಾಗಿಸಲು ಮತ್ತು ಇಳಿಸಲು ರೈತರಿಂದ ಹಣವನ್ನು ಕೇಳುತ್ತಾರೆ ಮತ್ತು ಪರಿವರ್ತಕದಲ್ಲಿ ಆಯಿಲ್‌ ರೈತರೇ ತರುವಂತೆ ಒತ್ತಾಯಿಸುತ್ತಾರೆ. ರಾತ್ರಿ ವೇಳೆ ವಿದ್ಯುತ್‌ ಕಡಿತವಾದ ಪಕ್ಷದಲ್ಲಿ ಸಂಬಂಧಪಟ್ಟ ಲೈನ್‌ಮ್ಯಾನ್‌ಗಳಿಗೆ ಪೋನ್‌ ಮಾಡಿದರೆ ನೀವೆ ಸರಿಪಡಿಸಿಕೊಳ್ಳಿ ಎಂದು ಹೇಳುತ್ತಾರೆ. ರೈತರು ರಿಪೇರಿ ಮಾಡುವ ವೇಳೆ ಅಪಘಾತ ಸಂಭವಿಸಿದರೆ ನಿಮ್ಮನ್ನು ಕೆಲಸ ಮಾಡುವಂತೆ ಯಾರು ಹೇಳಿದರು ಧಮಕಿ ಹಾಕುತ್ತಾರೆ ಎಂದು ಆರೋಪಿಸಿದರು.

ಪವರ್‌ ಸ್ಟೇಷನ್‌ ಪೂರ್ಣಗೊಳಿಸಿ: ವಿದ್ಯುತ್‌ ಪರಿ ವರ್ತಕಗಳು ಸುಟ್ಟುಹೋದರೆ 72 ಗಂಟೆಯಲ್ಲಿ ಸರಿಪಡಿಸಬೇಕೆಂಬ ಸರ್ಕಾರದ ನಿಯಮವಿದ್ದರೂ ಸಹ ತಿಂಗಳುಗಟ್ಟಲೆ ಸರಿಪಡಿಸದೆ ರೈತರನ್ನು ಶೋಷಣೆ ಮಾಡುತ್ತಿದ್ದಾರೆ. ಹನೂರು ತಾಲೂಕಿನ ಕಾಡಂಚಿನ ಗ್ರಾಮಗಳಿಗೆ ಕಳಪೆ ವಿದ್ಯುತ್‌ ಪೂರೈಕೆಯಿಂದ ರೈತರು ನಷ್ಟಕ್ಕೆ ಒಳಗಾಗುತ್ತಿದ್ದು, ಉತ್ತಮ ಗುಣಮಟ್ಟದ ವಿದ್ಯುತ್‌ ಪೂರೈಕೆ ಮಾಡಬೇಕು ಮತ್ತು ಹನೂರು ತಾಲೂಕಿನ

ಅಜ್ಜೀಪುರದಲ್ಲಿ ಪವರ್‌ ಸ್ಟೇಷನ್‌ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿದರು. ರೈತ ಮುಖಂಡರ ಸಮಸ್ಯೆಗಳನ್ನು ಆಲಿಸಿದ ಮೈಸೂರಿನ ಸೂಪರಿಟೆಂಡೆಂಟ್‌ ಎಂಜಿನಿಯರ್‌ ಮಹದೇವ ಪ್ರಸನ್ನ ರೈತರ ದೂರುಗಳನ್ನು ಆಲಿಸಿದ ಬಳಿಕ ಮಾತನಾಡಿ, ಕೂಡಲೇ ಸಮಸ್ಯೆಗಳ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಕಾನೂನು ಕ್ರಮದ ಭರವಸೆ: ಕೆಟ್ಟಿರುವ ವಿದ್ಯುತ್‌ ಪರಿವರ್ತಕಗಳನ್ನು 24 ಗಂಟೆಯೊಳಗಾಗಿ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಮತ್ತು ಕಳೆದ ಮೂರು ತಿಂಗಳ ಹಿಂದೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಲೈನ್‌ಮ್ಯಾನ್‌ಗಳು ಕೇಂದ್ರ ಸ್ಥಾನದಲ್ಲಿ ಇರಬೇಕೆಂದು ಸೂಕ್ತ ನಿರ್ದೇಶನ ನೀಡಿದ್ದು, ಇದರ ಬಗ್ಗೆ ಸಮಗ್ರವಾಗಿ ಪರಿಗಣಿಸಿ ಕಾನೂನು ಕ್ರಮಕೈಗೊಳ್ಳುವ ಭರವಸೆ ನೀಡಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಶಿವರಾಮು, ಕಾರ್ಯಾಧ್ಯಕ್ಷ ಶೈಲೇಂದ್ರ, ತಾಲೂಕು ಅಧ್ಯಕ್ಷ ಗೌಡೇಗೌಡ, ಉಪಾಧ್ಯಕ್ಷ ಬಸವರಾಜು, ರೈತ ಮುಖಂಡರಾದ ಜೋಯಲ್‌, ಭಾಸ್ಕರ್‌, ಚೌಡಶೆಟ್ಟಿ, ಏಲಕ್ಕಿಗೌಡ, ಬಸವರಾಜು, ನಾಗೇಂದ್ರ, ರಾಜಣ್ಣ,

ಸೋಮಣ್ಣ, ಶಿವಮ್ಮ, ರಾಣಿ, ಕೆಂಪಣ್ಣ, ಮುಳ್ಳೂರು ಶಿವಮಲ್ಲು, ಸೆಸ್ಕ್ ಇಇ ಪ್ರದೀಪ್‌, ಹನೂರು ಎಇಇ ಶಂಕರ್‌, ಕೊಳ್ಳೇಗಾಲ ಎಇಇ ಲಿಂಗರಾಜು ಇದ್ದರು.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.