ಮುಂಗಾರು ಅಬ್ಬರಕ್ಕೆ ರೈತರ ಸಂತಸ


Team Udayavani, Apr 20, 2019, 3:00 AM IST

mungaru

ಗುಂಡ್ಲುಪೇಟೆ: ತಾಲೂಕಿನ ಹಲವೆಡೆ ಗುರುವಾರ ಮತ್ತು ಶುಕ್ರವಾರ ಸುರಿದ ಮುಂಗಾರು ಮಳೆಯ ಅಬ್ಬರಕ್ಕೆ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಬಿಸಿಲಿನ ಬೇಗೆಯಿಂದ ಚುನಾವಣಾ ಕಾವಿನಿಂದ ಬಳಲಿದ್ದವರಿಗೆ ತಂಪನ್ನುಂಟು ಮಾಡಿದೆ.

ತಾಲೂಕಿನ ತೆರಕಣಾಂಬಿ ಮತ್ತು ಕಸಬಾ ಹೋಬಳಿಯ ಹಲವು ಕಡೆಗಳಲ್ಲಿ ಗುರುವಾರ ಮತ್ತು ಶುಕ್ರವಾರ ಉತ್ತಮ ಮಳೆಯಾಗಿದೆ. ಮಳೆಯಿಂದಾಗಿ ಬಿಗಿಯಾಗಿದ್ದ ಭೂಮಿ ತಂಪಿನಿಂದ ತಣ್ಣಗಾಗಿದ್ದರೆ, ಮುಂಗಾರಿನ ಫ‌ಸಲು ತೆಗೆಯುವ ಹುಮ್ಮಸ್ಸಿನಲ್ಲಿ ರೈತರು ವ್ಯವಸಾಯ ಚಟುವಟಿಕೆ ಹಮ್ಮಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ.

ಪ್ರಮುಖವಾಗಿ ಖುಷ್ಕಿ ಪದ್ಧತಿಯ ಮಳೆಯಾಶ್ರಿತ ವ್ಯವಸಾಯ ನೆಚ್ಚಿಕೊಂಡಿರುವ ತಾಲೂಕಿನ ಶೇ.70 ರೈತರು ಮುಂಗಾರಿನಲ್ಲಿ ಚಟುವಟಿಕೆ ನಡೆಸುವ ಸಲುವಾಗಿ ಭೂಮಿಯನ್ನು ಹದ ಮಾಡಲು ತೊಡಗಿದ್ದಾರೆ.

ತಾಲೂಕಿನ ತೆರಕಣಾಂಬಿ ಹೋಬಳಿಯ ಕೊಡಸೋಗೆ, ಬೊಮ್ಮಲಾಪುರ, ಶೀಲವಂತಪುರ, ಸೋಮನಪುರ ಯಾನಗಹಳ್ಳಿ ಪ್ರದೇಶದ ಹಲವು ಗ್ರಾಮಗಳಲ್ಲಿ ಗುರುವಾರ ಸುರಿದ ಮಳೆಯಿಂದ ಕೆಲಕಾಲ ಮತದಾನ ಮಾಡಲು ಮನೆಯಿಂದ ಹೊರಗೆ ಬಾರದ ಪರಿಸ್ಥಿತಿ ಉದ್ಭವವಾಗಿತ್ತು.

ಸುಮಾರು 3 ಗಂಟೆಗಳ ಕಾಲ ಸುರಿದ ಮಳೆ ರೈತನಿಗೆ ಹರ್ಷ ತಂದಿತು. ಶುಕ್ರವಾರ ಆ ಪ್ರದೇಶದ ರೈತರು ಕೃಷಿ ಚಟುವಟಿಕೆಗಳನ್ನು ನಡೆಸಿದರು. ಮುಂಗಾರಿನಲ್ಲಿ ಹತ್ತಿ, ಜೋಳ, ಚೆಂಡುಮಲ್ಲಿಗೆ ಮುಂತಾದ ಬೆಳೆಗಳನ್ನು ಬೆಳೆಯುವ ಸಲುವಾಗಿ ಭೂಮಿಯನ್ನು ಹದಗೊಳಿಸುವ ಸಿದ್ಧತೆಯಲ್ಲಿ ಇದ್ದಾಗಲೇ ಇಂದು ಮತ್ತೂಮ್ಮೆ ಸುರಿದ ಮಳೆಯಿಂದ ಕೃಷಿ ಚಟುವಟಿಕೆಗಳಿಗೆ ಅಡ್ಡಿಯುಂಟಾಯಿತು.

ಅದೇ ರೀತಿ ಕಸಬಾ ಹೋಬಳಿಯ ಪಶ್ಚಿಮ ಭಾಗದ ಕಾಡಂಚಿನ ಗ್ರಾಮಗಳಾದ ಬರಗಿ, ಹೊಂಗಹಳ್ಳಿ, ಚನ್ನಮಲ್ಲಿಪುರ, ಬೇರಂಬಾಡಿ, ಗೋಪಾಲಪುರ, ಭೀಮನಬೀಡು ಸುತ್ತಮುತ್ತ ಮಧ್ಯಾಹ್ನ ಮೂರು ಗಂಟೆ ವೇಳೆಗೆ ಪ್ರಾರಂಭವಾದ ಮಳೆ ಸತತವಾಗಿ 4 ಗಂಟೆಗಳ ಕಾಲು ಸುರಿಯಿತು.

ತುಂಬಾ ದಿನಗಳಿಂದ ಬಿಸಿಲ ಬೇಗೆಯಿಂದ ಗಟ್ಟಿಯಾಗಿದ್ದ ಭೂಮಿಗೆ ಇದರಿಂದ ಉಳುಮೆ ಮಾಡಲು ಆಸಕ್ತ ವಾತಾವರಣ ಉಂಟಾಯಿತು. ಈ ಪ್ರದೇಶದ ಜನರು ಶೀಘ್ರದಲ್ಲಿ ಚೆಂಡುಮಲ್ಲಿಗೆ ಹೂವಿನ ಬಿತ್ತನೆ ಬೀಜ ಪಡೆದು ಒಟ್ಟು ಮಾಡಲಿದ್ದಾರೆ. 15 -20 ದಿನಗಳಲ್ಲಿ ನಾಟಿ ಮಾಡುವ ಮೂಲಕ ಮುಂಗಾರಿನ ಫ‌ಸಲಿನ ಪ್ರಾರಂಭವಾಗುತ್ತದೆ. ಇನ್ನು ಪಟ್ಟಣ ಪ್ರದೇಶದಲ್ಲಿ ಮಳೆ ಹೆಚ್ಚಿನ ಘರ್ಜನೆ ನಡೆಸದಿದ್ದರೂ, ಚುನಾವಣಾ ಕಾವಿನಲ್ಲಿ ಮುಳುಗಿದ್ದ ಜನರಲ್ಲಿ ಉತ್ಸಾಹದ ಸೆಲೆ ಚಿಮ್ಮಿಸಿದೆ.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.