ಆನೆಮಡುವಿನ ಕೆರೆಗೆ ನೀರು ಹರಿಸಲು ಆಗ್ರಹಿಸಿ ರೈತರಿಂದ ಅಹೋರಾತ್ರಿ ಧರಣಿ


Team Udayavani, Jun 7, 2022, 10:47 PM IST

ಆನೆಮಡುವಿನ ಕೆರೆಗೆ ನೀರು ಹರಿಸಲು ಆಗ್ರಹಿಸಿ ರೈತರಿಂದ ಅಹೋರಾತ್ರಿ ಧರಣಿ

ಚಾಮರಾಜನಗರ: ತಾಲೂಕಿನ ಆನೆ ಮಡುವಿನ ಕೆರೆಗೆ ನೀರು ಹರಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ , ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ರೈತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ತಾಲೂಕಿನ ಉಡಿಗಾಲ ಗ್ರಾಮದಿಂದ ರೈತರು ಚಾಮರಾಜನಗರಕ್ಕೆ ಪಾದಯಾತ್ರೆ ನಡೆಸಿ, ಬಳಿಕ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ಮುಂದುವರೆಸಿದ್ದಾರೆ.

ಉಡಿಗಾಲ ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದಲೂ ರೈತರು ಧರಣಿ ಸತ್ಯಾಗ್ರಹ ನಡೆ ಸುತ್ತಿದ್ದು ಮೂರನೇ ದಿನವಾದ ಮಂಗಳವಾರ ಗ್ರಾಮದಿಂದ ಜಿಲ್ಲಾಕೇಂದ್ರಕ್ಕೆ ಪಾದಯಾತ್ರೆ ಮೂಲಕ ತೆರಳಿ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿದರು. ಸುಮಾರು 16 ಕಿ.ಮೀ ದೂರ ಪಾದಯಾತ್ರೆ ನಡೆಸಿದರು. ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸ್ಥಳಕ್ಕೆ ಆಗಮಿಸಿ, ಚುನಾವಣಾ ನೀತಿ ಸಂಹಿತೆ ಇರುವುದರಿಂದ ಪ್ರತಿಭಟನೆ ಅಂತ್ಯಗೊಳಿಸಿ, ಚುನಾವಣೆ ಬಳಿಕ ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು. ಆದರೆ ಪ್ರತಿಭಟನಾಕಾರರು ಇದಕ್ಕೆ ಒಪ್ಪಲಿಲ್ಲ. ಪ್ರತಿಭಟನೆ ಮುಂದುವರೆಸಿದರು. ಸ್ಥಳದಲ್ಲೇ ಅಡುಗೆ ಮಾಡಿ, ಜಿಲ್ಲಾಡಳಿತ ಭವನದ ಮುಂದೆ ಮಂಗಳವಾರ ರಾತ್ರಿಯೂ ಪ್ರತಿಭಟನೆ ಮುಂದುವರೆಸಿದ್ದಾರೆ.

ಇದಕ್ಕೂ ಮೊದಲು ರಾಜ್ಯ ಕಬ್ಬು ಬೆಳೆಗಾರರ ಸಂಘ ದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ಆನೆಮಡುವಿನ ಕೆರೆಗೆ ನೀರು ತುಂಬಿಸುವ ನಿಟ್ಟಿನಲ್ಲಿ ಕಳೆದ ಆರು ತಿಂಗಳಿಂದಲೂ ನಿರಂತರವಾಗಿ ಹೋ ರಾಟ ಮಾಡುತ್ತಾ ಸರ್ಕಾರದ ಗಮನ ಸೆಳೆಯಲಾಗಿತ್ತು. ಆ ನಿಟ್ಟಿನಲ್ಲಿ ಕೆರೆಗೆ ನೀರು ತುಂಬಿಸುವ ಸಂಬಂಧ ನೀರಾವರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ಸಭೆ ನಡೆಸಿ ಕೆರೆಗೆ ನೀರು ತುಂಬಿಸಲು ಸೂಚನೆ ನೀಡಿದ್ದರು.ಅಲ್ಲದೇ ಕೆರೆಗೆ ನೀರು ತುಂಬಿಸಲು 3 ಕೋಟಿ ಅನುದಾನವನ್ನು ಸಹ ಸರ್ಕಾರ ಬಿಡುಗಡೆ ಮಾಡಿತ್ತು. ಅದರಂತೆ ಆನೆಮಡುವಿನ ಕೆರೆಗೆ ಗುರುತ್ವಾಕರ್ಷಣೆ ಮುಖಾಂತರ ಚಿಕ್ಕ ಮೋರಿ ತಾಯಿ ಕಾಲುವೆ ಮೂಲಕ ನೀರು ಹರಿಸಲು ರೈತರ ಆಗ್ರಹವಾಗಿದೆ.

ಇದನ್ನೂ ಓದಿ : ವಿಜಯಪುರ : ಉಪಹಾರ ಸೇವಿಸಿದ ವಸತಿ ಶಾಲೆಯ 25 ಬಾಲಕಿಯರು ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಆದರೆ, ಅಧಿಕಾರಿಗಳು ತಮ್ಮಡಿಹಳ್ಳಿ ಕೆರೆಯಿಂದ ನೇರವಾಗಿ ಪೈಪ್‌ಲೈನ್ ಮೂಲಕ ನೀರು ಹರಿಸಲು ಮುಂದಾಗಿರುವುದು ಖಂಡನೀಯ ಎಂದರು.ಚಿಕ್ಕಮೋರಿಯ ಮೂಲಕ ನೀರು ಹರಿಸಿದರೆ ಅಂತರ್ಜಲ ಮಟ್ಟ ಸಹ ವೃದ್ಧಿಯಾಗುತ್ತದೆ. ಆದ್ದರಿಂದ ಚಿಕ್ಕಮೋರಿ ಮೂಲಕ ನೀರು ಹರಿಸುವ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಪಟೇಲ್ ಶಿವಮೂರ್ತಿ, ತಾಲೂಕು ಅಧ್ಯಕ್ಷ ಮೂಕಳ್ಳಿ ಮಹಾದೇವಸ್ವಾಮಿ, ಉಪಾಧ್ಯಕ್ಷ ಹಾಲಿನ ನಾಗರಾಜ್, ಹಾಡ್ಯ ರವಿ, ಹೆಗ್ಗೋಠಾರ ಶಿವಸ್ವಾಮಿ, ಗೌಡಹಳ್ಳಿ ಷಡಕ್ಷರಿ, ಬರಡನಪುರ ನಾಗರಾಜು, ಕುರುಬೂರು ಸಿದ್ದೇಶ್, ಗೌರೀಶ್, ಕೆರೆಹುಂಡಿ ರಾಜಣ್ಣ ಸೇರಿದಂತೆ ಉಡಿಗಾಲ ಗ್ರಾಮ ಘಟಕದ ಪದಾಧಿಕಾರಿಗಳು ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.