ಮಳೆಯಿಲ್ಲದೆ ರೈತರಿಗೆ ಮತ್ತೆ ಸಂಕಷ್ಟ


Team Udayavani, Jul 4, 2019, 3:00 AM IST

maleillade

ಗುಂಡ್ಲುಪೇಟೆ: ಕಳೆದ ಹದಿನೈದು ದಿನಗಳಿಂದ ಮಳೆ ಬೀಳದ ಪರಿಣಾಮ ತಾಲೂಕಿನ ಬಹುತೇಕ ಭಾಗಗಳಲ್ಲಿ ಬೆಳೆದಿರುವ ಪೈರುಗಳು ಒಣಗುತ್ತಿದೆ. ಇನ್ನೂ ಕೆಲವು ದಿನ ಮಳೆ ಬೀಳದಿದ್ದರೆ ಎಲ್ಲಾ ಬೆಳೆಗಳು ನಾಶವಾಗುವ ಭೀತಿ ರೈತರಲ್ಲಿ ಎದುರಾಗಿದೆ.

ಹೌದು, ಪೂರ್ವಮುಂಗಾರಿನಲ್ಲಿ ಉತ್ತಮ ಮಳೆಬಿದ್ದ ಪರಿಣಾಮ ತಾಲೂಕಿನಾದ್ಯಂತ ಎಲ್ಲಾ ರೈತರು ತಮ್ಮ ಜಮೀನಿನಲ್ಲಿ ಬಿತ್ತನೆಕಾರ್ಯ ಮಾಡಿದ್ದರು. ಎಲ್ಲೆಡೆ ಹಸಿರು ಕಂಗೊಳಿಸುತ್ತಿತ್ತು. ಆದರೀಗ ಮಳೆಯ ಕೊರತೆಯಿಂದ ಬೆಳೆಗಳು ಬಾಡುತ್ತಿರುವುದು ರೈತರಲ್ಲಿ ಆತಂಕವುಂಟು ಮಾಡಿದೆ. ಸಾವಿರಾರು ರೂ.ಗಳನ್ನು ಕೊಟ್ಟು ಖರೀದಿಸಿ ತಂದ ಬಿತ್ತನೆ ಬೀಜಗಳನ್ನು ಭೂಮಿಗೆ ಹಾಕಿ ಆಕಾಶ ನೋಡುತ್ತಿರುವ ರೈತರ ಸಂಕಟ ಹೇಳತೀರದಾಗಿದೆ.

ಸೂರ್ಯಕಾಂತಿ: ತಾಲೂಕಿನ ಹಂಗಳ ಹೋಬಳಿಯಲ್ಲಿ ಮಾತ್ರ ವಾಡಿಕೆಗಿಂತ ಹೆಚ್ಚಿನ ಮಳೆಬಿದ್ದಿದೆ. ಅತಿ ಕಡಿಮೆ ಮಳೆಬಿದ್ದಿರುವ ಬೇಗೂರು ಹೋಬಳಿಯಲ್ಲಿ ರೈತರು ಈ ಬಾರಿ ಹತ್ತಿಗಿಂತ ಹೆಚ್ಚಾಗಿ ಸೂರ್ಯಕಾಂತಿಯನ್ನೇ ಬಿತ್ತನೆ ಮಾಡಿದ್ದಾರೆ.

ಇನ್ನು ತೆರಕಣಾಂಬಿ ಹಾಗೂ ಕಸಬಾ ಹೋಬಳಿಗಳಲ್ಲಿಯೂ ಮಳೆಯ ಕೊರತೆಯಾಗಿದ್ದು ಈಗಾಗಲೇ ಬೆಳೆದಿರುವ ಸೂರ್ಯಕಾಂತಿ, ಮುಸುಕಿನಜೋಳ, ಜೋಳ ಮುಂತಾದ ಬೆಳೆಗಳು ದಿನೇ ದಿನೆ ಬಿಸಿಲಿಗೆ ಒಣಗುತ್ತಿವೆ. ಸೂರ್ಯಕಾಂತಿ ಗಿಡಗಳು ಎತ್ತರಕ್ಕೆ ಬೆಳೆಯಲು ಸಾಧ್ಯವಾಗದೆ ಗೇಣುದ್ದಕ್ಕೆ ಹೂ ಬಿಟ್ಟು ಬಾಡುತ್ತಿವೆ.

ಮೇವಿಗೂ ಕೊರತೆ: ಆಳೆತ್ತರಕ್ಕೆ ಬೆಳೆಯಬೇಕಾದ ಜೋಳದ ಪೈರುಗಳು ನೆಲದಲ್ಲಿಯೇ ಮುದುಡಿಕೊಳ್ಳುತ್ತಿದೆ. ಇದರಿಂದಾಗಿ ಕೆಲವೆಡೆ ಈಗಾಗಲೇ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ.

ತಾಲೂಕಿನಾದ್ಯಂತ ಮಳೆ ಬಿದ್ದು 15 ದಿನಗಳ ಮೇಲಾಗಿದ್ದು ಮೋಡ ಮುಸುಕಿದ ವಾತಾವರಣ ಗಾಳಿಗೆ ಭೂಮಿಯಲ್ಲಿನ ತೇವಾಂಶ ಆರಿ ಹೋಗುತ್ತಿದೆ. ಬಿಸಿಲು ಹೆಚ್ಚಾಗಿರುವ ಹಿನ್ನೆಲೆ ಎಲ್ಲಾ ಬೆಳೆಗಳೂ ಒಣಗುತ್ತಿದ್ದು ಇನ್ನೂ ಮೂರು ನಾಲ್ಕು ದಿನಗಳ ಕಾಲ ಮಳೆ ಬೀಳದಿದ್ದರೆ ಎಲ್ಲಾ ಬೆಳೆಗಳೂ ನಾಶವಾಗುವ ಭೀತಿ ಎದುರಾಗಿದೆ.

32 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ: ಗುಂಡ್ಲುಪೇಟೆ ತಾಲೂಕಿನಲ್ಲಿ 32 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಕಾರ್ಯ ಮಾಡಲಾಗಿದೆ. ಬೇಗೂರಿನಲ್ಲಿ ಸಾಮಾನ್ಯವಾಗಿ 7.5 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಹತ್ತಿ ಬಿತ್ತನೆ ಮಾಡುತ್ತಿದ್ದರೂ, ಈ ಬಾರಿ ಮಳೆಯ ಕೊರತೆಯಿಂದ ಕೇವಲ 2.5 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ಬಿತ್ತನೆ ಕಾರ್ಯ ಸೀಮಿತವಾಗಿದೆ.

10 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಜೋಳ, 13 ಸಾವಿರದ 738 ಹೆಕ್ಟೇರ್‌ ಸೂರ್ಯಕಾಂತಿ, 6 ಸಾವಿರ ಹೆಕ್ಟೇರ್‌ ನೆಲಗಡಲೆ ಇನ್ನುಳಿದ ಪ್ರದೇಶಗಳಲ್ಲಿ ದ್ವಿದಳ ಧಾನ್ಯಗಳನ್ನು ಬಿತ್ತನೆ ಮಾಡಲಾಗಿದೆ.

ಮಳೆ ಪ್ರಮಾಣ ಇಳಿಮುಖ: ಮೇ ಅಂತ್ಯದವರೆಗೆ ಹಂಗಳ ಹೋಬಳಿಯಲ್ಲಿ ವಾಡಿಕೆ 245 ಮಿಮಿ ಮಳೆ ಬಿದ್ದರೆ, ಈ ಬಾರಿ 255 ಮಿಮಿ ಆಗಿದೆ. ಬೇಗೂರಿನಲ್ಲಿ 230ಕ್ಕೆ 178 ಮಿಮಿ ಮಾತ್ರ ಬಿದ್ದಿದೆ. ಜೂನ್‌ ತಿಂಗಳಿನಲ್ಲಿಯೂ ಹಂಗಳ 278ಕ್ಕೆ 275 ಮಿಮಿ ಆಗಿದ್ದರೆ ಬೇಗೂರಿನಲ್ಲಿ 264ಕ್ಕೆ 201 ಮಿಮಿ ಮಾತ್ರ ಬಿದ್ದಿದ್ದು ತೀವ್ರ ಕೊರತೆ ಎದುರಾಗಿದೆ. ಕಸಬಾ ಹಾಗೂ ತೆರಕಣಾಂಬಿ ಹೋಬಳಿಯಲ್ಲಿಯೂ ಮಳೆಯ ಪ್ರಮಾಣ ಇಳಿಮುಖವಾಗಿದೆ.

ಈ ವರ್ಷ ಪ್ರಾರಂಭದಲ್ಲಿ ಉತ್ತಮ ಮಳೆ ಬಿದ್ದರೂ ಬಿತ್ತನೆ ಕಾರ್ಯ ಮುಗಿದ ನಂತರ ಕೈಕೊಟ್ಟಿರುವುದು ತಾಲೂಕಿನ ರೈತರಲ್ಲಿ ಆತಂಕ ತಂದಿದೆ. ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಲಿದೆ. ಕೃಷಿ ಕಾರ್ಮಿಕರು ಮತ್ತೆ ನೆರೆರಾಜ್ಯಗಳಿಗೆ ವಲಸೆ ತೆರಳಬೇಕಾಗುತ್ತದೆ. ಇನ್ನಾದರೂ ನದಿಮೂಲದಿಂದ ಕೆರೆಗಳಿಗೆ ನೀರು ತರುವ ಕೆಲಸವಾಗಬೇಕಿದೆ.
-ಕರಬೂರು ಮಂಜುನಾಥ್‌, ರೈತ ಮುಖಂಡ

ಇಲಾಖೆಯು ಮಳೆಯ ಕೊರತೆಯಾಗಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಇನ್ನೂ ಮೂರು ನಾಲ್ಕು ದಿನಗಳು ಮಳೆ ಬೀಳದಿದ್ದರೆ ರೈತರು ತೀವ್ರ ನಷ್ಟ ಎದುರಿಸಬೇಕಾಗುತ್ತದೆ. ರೈತರು ಬೆಳೆವಿಮೆ ಮಾಡಲು ಅವಕಾಶವಿದೆ. ಎಲ್ಲಾ ರೈತರೂ ತಮ್ಮ ಬೆಳೆಗಳಿಗೆ ವಿಮಾ ರಕ್ಷಣೆ ಪಡೆಯುವ ಮೂಲಕ ಆಗುವ ನಷ್ಟ ತಪ್ಪಿಸಬೇಕಿದೆ.
-ವೆಂಕಟೇಶ್‌, ಸಹಾಯಕ ಕೃಷಿ ನಿರ್ದೇಶಕ

* ಸೋಮಶೇಖರ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.