ಆರೋಗ್ಯ ಕೆಡಿಸುವ ಕಾರ್ಖಾನೆ ವಿರುದ್ಧ ಹೋರಾಡಿ


Team Udayavani, Feb 20, 2019, 7:30 AM IST

arogya.jpg

ಚಾಮರಾಜನಗರ (ಚಾಮರಾಜ ಒಡೆಯರ್‌ ವೇದಿಕೆ): ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಬಣ್ಣದ ಕಾರ್ಖಾನೆಗಳಿಂದ ಇಲ್ಲಿನ ಜನತೆಗೆ ಯಾವುದೇ ಲಾಭವಿಲ್ಲ. ಬಣ್ಣ ತಯಾರಿಸುವ ಕಾರ್ಖಾನೆಗಳು ಸ್ಥಾಪನೆಯಾದರೆ ಇದರ ವಿರುದ್ಧ ಹೋರಾಟದ ರೂಪುರೇಷೆಗೆ ಮುಂದಾಗಬೇಕು ಎಂದು ದೀನಬಂಧು ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರೊ. ಜಿ.ಎಸ್‌. ಜಯದೇವ ಮನವಿ ಮಾಡಿದರು.

ನಗರದ ಜೆ.ಎಚ್‌. ಪಟೇಲ್‌ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಏರ್ಪಡಿಸಿದ್ದ 9ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಮೂರನೇ ದಿನ ನಡೆದ ಗಡಿನಾಡು, ಶಿಕ್ಷಣ, ಅಭಿವೃದ್ಧಿ ಕುರಿತ ಗೋಷ್ಠಿಯಲ್ಲಿ ವಿಷಯ ಮಂಡಿಸಿ ಅವರು ಮಾತನಾಡಿದರು.

ಚಾಮರಾಜನಗರದ ಹೊರವಲಯದ ಬದನಗುಪ್ಪೆ, ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ಬಣ್ಣದ ಕಾರ್ಖಾನೆಗಳು ಬರಲಿವೆ ಎಂಬ ಮಾಹಿತಿ ಲಭ್ಯವಾಗಿದೆ. ತಮಿಳುನಾಡಿನ ಜನತೆ ಪರಿಸರಮಾಲಿನ್ಯ ಮಾಡುವ ಕಾರ್ಖಾನೆಗಳು ಬೇಡ ಎಂದು ವಿರೋಧಿಸಿ ಹೋರಾಟ ಮಾಡಿ, ಅಲ್ಲಿ ಸ್ಥಾಪನೆ ಮಾಡುವುದನ್ನು ನಿಲ್ಲಿಸಿದ್ದಾರೆ. ಈಗ ಅಂತಹ ಕಾರ್ಖಾನೆಗಳು ನಮ್ಮ ನೆಲದಲ್ಲಿ ಸ್ಥಾಪನೆಯಾದರೆ ಪರಿಸರ ಹಾನಿಯಾಗುವ ಜತೆಗೆ ಜನರ ಆರೋಗ್ಯವು ಹಾಳಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. 

ಒಂದು ದೇಶದ ಅಭಿವೃದ್ಧಿಯನ್ನು ಶಿಕ್ಷಣದಿಂದ ಅಳೆಯಲಾಗುತ್ತದೆ. ಶಿಕ್ಷಣದಲ್ಲಿ ಹಿಂದುಳಿದಿರುವ ದೇಶಗಳು ಪ್ರಗತಿಯನ್ನು ಸಾಧಿಸಿರುವುದು ಅಪರೂಪ, ತಮಗೆ ತಾವೇ ಸಹಾಯ ಮಾಡಿಕೊಳ್ಳುವಂತಹ, ಸ್ವಾವಲಂಬಿ ಜೀವನ ಕಟ್ಟಿಕೊಳ್ಳುವಂತಹ ಗಡಿನೆಲದ ವಾಸ್ತವತೆಯನ್ನು ಅರಿತು ಶಿಕ್ಷಣ ನೀಡುವುದು ಇಂದಿನ ಅಗತ್ಯವಾಗಿದೆ ಎಂದರು.

ಅಭಿವೃದ್ಧಿ ಎಂದರೆ  ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟುವುದು, ವಿಮಾನಗಳನ್ನು ಹಾರಿಸುವುದಲ್ಲ. ಮನುಷ್ಯರಲ್ಲಿ ಮನುಷ್ಯತ್ವದ ಗುಣ ಬೆಳೆಸುವುದು, ಶಿಕ್ಷಣ ನೀಡುವುದೇ ನಿಜವಾದ ಅಭಿವೃದ್ಧಿ. ಜನರು ಹಸಿವಿನಿಂದ ನರಳುತ್ತಿದ್ದರೂ ಭಾರತ ಬೆಳಗುತ್ತಿದೆ ಎಂದು ಘೋಷಣೆ ಮಾಡುವುದು ನಾಚಿಕೆಗೇಡಿನ ಸಂಗತಿ ಎಂದರು.

ಲಿಂಗಾನುಪಾತ ಕುಸಿತ: ಜಿಲ್ಲೆಯಲ್ಲಿ ಸುಮಾರು 10 ಲಕ್ಷ ಜನಸಂಖ್ಯೆಯಿದ್ದು, ಕಳೆದ ಬಾರಿ ನಡೆದ ಜನಗಣತಿ ಪ್ರಕಾರ 1 ಸಾವಿರ ಪುರುಷರಿಗೆ 989 ಮಹಿಳೆಯರು ಇದ್ದು, ಲಿಂಗಾನುಪಾತವು ಕುಸಿದಿದೆ. ಜಿಲ್ಲೆಯಲ್ಲಿನ ಉಪ್ಪಾರ ಸಮಾಜದಲ್ಲಿ ಹೆಚ್ಚಾಗಿರುವ ಬಾಲ್ಯವಿವಾಹ ಪದ್ಧತಿಯಿಂದಾಗಿ ಸಮಾಜ ಮುಂದೆ ಬರಲು ಸಾಧ್ಯವಾಗುತ್ತಿಲ್ಲ. ಸಮುದಾಯವನ್ನು ಬದಲಾವಣೆ ಮಾಡುವಂತಹ ಶಿಕ್ಷಣ ನಮ್ಮ ಶಾಲೆಗಳಲ್ಲಿ ಸಿಗಬೇಕು ಎಂದು ಅವರು ಸಲಹೆ ನೀಡಿದರು.

ಪ್ರತ್ಯೇಕತೆ ಬೇಡ: ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಪ್ರಾಂಶುಪಾಲ ಎ.ಶಿವಣ್ಣ ಮಾತನಾಡಿ, ಸಮ್ಮೇಳನಗಳು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ತಮ್ಮದೇ ಆದ ಪಾತ್ರ ನಿರ್ವಹಿಸಬೇಕು, ಪ್ರತ್ಯೇಕತೆ ಯಾರಲ್ಲೂ ಬಾರದಂತೆ ಎಚ್ಚರವಹಿಸಬೇಕು ಎಂದರು. ಗಡಿಯಲ್ಲಿನ ಜನರು ಮಾನವ ಸಂಬಂಧಗಳನ್ನು ಬೆಳೆಸಿಕೊಳ್ಳುವತ್ತ ಗಮನ ಹರಿಸಿದರೆ ಪ್ರೀತಿ ಹುಟ್ಟುತ್ತದೆ, ಅಭಿವೃದ್ಧಿಯಾಗಲು ಸಹಾಯಕವಾಗುತ್ತದೆ ಎಂದು ಅವರು ಹೇಳಿದರು. 

ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ಎಸ್‌.ಶಿವರಾಜಪ್ಪ, ಕಸಾಪ ಜಿಲ್ಲಾಧ್ಯಕ್ಷ ಬಿ.ಎಸ್‌.ವಿನಯ್‌, ಸಾಹಿತಿ ಕೆ.ವೆಂಕಟರಾಜು, ನಗರದ ಸರ್ಕಾರಿ ಮಹಿಳಾ ಕಾಲೇಜಿನ ಕನ್ನಡವಿಭಾಗದ ಮುಖ್ಯಸ್ಥೆ ರುಕ್ಮಿಣಿ, ಮದ್ದೂರುಚಕ್ರವರ್ತಿ ಗೋಷ್ಠಿಯಲ್ಲಿ  ಹಾಜರಿದ್ದರು.

ಜಿಲ್ಲೆಯ ಫ‌ಲವತ್ತತೆ ಕಸಿದ ಶುಂಠಿ ಬೆಳೆ: ಗಡಿಭಾಗದಲ್ಲಿ ಬೇರೆ ರಾಜ್ಯಗಳಿಂದ ಬಂದ ಶ್ರೀಮಂತರು ಶುಂಠಿ ಬೆಳೆದು, ರಸಗೊಬ್ಬರಗಳೂ, ಕೀಟನಾಶಕಗಳನ್ನು ಹೇರಳವಾಗಿ ಬಳಸಿ ಭೂಮಿಯ ಫಲವತ್ತತೆಯನ್ನು ನಾಶ ಮಾಡುತ್ತಿದ್ದಾರೆ.

ಇದಕ್ಕೆ ನಿಯಂತ್ರಣ ಏರಬೇಕು ಎಂದು ದೀನಬಂಧು ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರೊ. ಜಿ.ಎಸ್‌. ಜಯದೇವ ಎಚ್ಚರಿಕೆ ನೀಡಿದರು. ಸೋಲಿಗ ಬುಡಕಟ್ಟು ಜನರು ವಾಸಿಸುವ ಪೋಡುಗಳಲ್ಲಿ  ಅವ್ಯಾವತವಾಗಿ ನಡೆಯುತ್ತಿರುವ ಮದ್ಯದ ಹಾವಳಿ ನಿಯಂತ್ರಿಸಬೇಕು ಎಂದು ಆಗ್ರಹಿಸಿದರು.

ಕೌಶಲ್ಯಾಧಾರಿತ ತರಬೇತಿ ಕಲಿಸಿ: ಇಂಗ್ಲಿಷ್‌ ಅನ್ನದ ಭಾಷೆ ಎನ್ನುತ್ತಾರೆ. ದೇಶದಲ್ಲಿ ಶೇ 2 ರಷ್ಟು ಮಂದಿ ಮಾತ್ರ ಇಂಗ್ಲಿಷ್‌ ಕಲಿತಿದ್ದಾರೆ. ಶೇ 10ರಷ್ಟು ಮಂದಿಗೆ ಇಂಗ್ಲಿಷ್‌ ಪರಿಜ್ಞಾನವೇ ಇಲ್ಲ. ಅಸಂಘಟಿತ ವಲಯದಲ್ಲಿ 38 ಕೋಟಿ ಕಾರ್ಮಿಕರು ಇಂಗ್ಲಿಷ್‌ ಕಲಿತೇ ಇಲ್ಲ.

ಅವರು ಸ್ವಾವಲಂಬಿಯಾಗಿ ತಮಗಿರುವ ಕೌಶಲ್ಯದಿಂದ ಜೀವನ ಸಾಗಿಸುತ್ತಿದ್ದಾರೆ. ಇಂಗ್ಲಿಷ್‌ ಅನ್ನದ ಭಾಷೆ ಎನ್ನುವುದು ತಪ್ಪು, ಅನ್ನ ದೊರಕಿಸಿಕೊಳ್ಳಬೇಕಾದರೆ ಕೌಶಲ್ಯಾಧಾರಿತ ತರಬೇತಿ ಪಡೆದರೆ ಸಾಕು ಎಂದು ಜಯದೇವ್‌ ಅಭಿಪ್ರಾಯಿಸಿದರು.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.