ನಿರಂಜನಕುಮಾರ್ ಪರ ನಟ ಕಿಚ್ಚ ಸುದೀಪ್ ರೋಡ್ ಶೋ ನಡೆಸಿ ಅಬ್ಬರದ ಪ್ರಚಾರ
Team Udayavani, May 5, 2023, 12:28 PM IST
ಗುಂಡ್ಲುಪೇಟೆ(ಚಾಮರಾಜನಗರ): ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಎಸ್.ನಿರಂಜನಕುಮಾರ್ ಪರ ಚಿತ್ರನಟ ಕಿಚ್ಚ ಸುದೀಪ್ ರೋಡ್ ಶೋ ನಡೆಸುವ ಮೂಲಕ ಅಬ್ಬರದ ಪ್ರಚಾರ ನಡೆಸಿದರು.
ಪಟ್ಟಣದ ಮಡಹಳ್ಳಿ ವೃತ್ತದ ಬಳಿ ಆಗಮಿಸಿದ ಕಿಚ್ಚ ಸುದೀಪ್ ಅವರನ್ನು ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್ ಮತ್ತು ಪುರಸಭಾ ಅಧ್ಯಕ್ಷ ಪಿ.ಗಿರೀಶ್ ಸ್ವಾಗತಿಸಿ ಬರಮಾಡಿಕೊಂಡರು. ನಟ ಸುದೀಪ್ ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣ ಸ್ವಾಮಿ ಅವರೊಟ್ಟಿಗೆ ತೆರೆದ ಪ್ರಚಾರ ವಾಹನ ವೇರುತ್ತಿದ್ದಂತೆ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಕೇಕೆ, ಶಿಳ್ಳೆ, ಚಪ್ಪಾಳೆ ಹಾಕುವ ಮೂಲಕ ಸಂಭ್ರಮಿಸಿದರು.
ಈ ವೇಳೆ ಮಾತನಾಡಿದ ಚಿತ್ರನಟ ಕಿಚ್ಚ ಸುದೀಪ್, ಗೆದ್ದೆ ಗೆಲ್ಲೆವೆವು ನಾವು ಒಂದು ದಿನ- ಗೆಲ್ಲಲೇಬೇಕು ಒಳ್ಳೆತನ ಎಂದು ಹೇಳುವ ಮೂಲಕ ಸತತವಾಗಿ ಸೋತರು ಗೆದ್ದ ನಿರಂಜನಕುಮಾರ್ ಈ ಬಾರಿಯೂ ಗೆಲ್ಲಿಸಿಕೊಡಬೇಕೆಂದು ಮನವಿ ಮಾಡಿದರು.
ನಾನು ಚಿತ್ರರಂಗದಲ್ಲಿ ಇವತ್ತು ಸಹ ಬಣ್ಣಹಚ್ಚಲು ನಿಮ್ಮ ಈ ಪ್ರೀತಿ ಅಭಿಮಾನವೇ ಕಾರಣ ನಿಮ್ಮ ಈ ಋಣವನ್ನ ನಾನೆಂದಿಗೂ ತೀರಿಸಲು ಸಾಧ್ಯವಿಲ್ಲ. ನಿಮ್ಮ ಈ ಜಯಘೋಷಗಳನ್ನ ಸಹೋದರ ನಿರಂಜನ್ ಗೆಲುವಿನಲ್ಲಿ ಕೇಳಲು ಬಯಸುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದರು.
ರೋಡ್ ಶೋ ವೇಳೆ ನೆರೆದಿದ್ದ ಸಾವಿರಾರು ಅಭಿಮಾನಿಗಳು ಕಿಚ್ಚ ಕಿಚ್ಚ ಎಂದು ಘೋಷಣೆ ಕೂಗಿದರು. ಈ ವೇಳೆ ಸುದೀಪ್ ವೀರ ಮದಕರಿ ಎಂದು ಸಿನಿಮಾ ಡೈಲಾಗ್ ಹೊಡೆದು ಅಭಿಮಾನಿಗಳನ್ನು ಹುಚ್ಚೆಬ್ಬಿಸಿದ್ದರು.
ಮಡಹಳ್ಳಿ ವೃತ್ತದಿಂದ ಆರಂಭವಾದ ರೋಡ್ ಶೋ ಹಳೇ ಬಸ್ ನಿಲ್ದಾಣದಲ್ಲಿ ಅಂತ್ಯಗೊಂಡಿತು. ವಾಹನದಿಂದ ಸುದೀಪ್ ಕೆಳಗಿಳಿಯುತ್ತಿದ್ದಂತೆ ನೂಕುನುಗ್ಗಲು ಉಂಟಾಯಿತು. ಈ ವೇಳೆ ಜನರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ