ನಿರುದ್ಯೋಗಿಗಳಿಗೆ ಉದ್ಯೋಗ ಕೊಡಿ


Team Udayavani, Jan 31, 2020, 12:18 PM IST

cn-tdy-1

ಯಳಂದೂರು: ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಇದನ್ನು ಮರೆತು ಜಾತಿ, ಧರ್ಮದ ಹೆಸರಿನಲ್ಲಿ ಬೇರ್ಪಡಿಸುವ ಕೆಲಸವನ್ನು ಸರ್ಕಾರಗಳು ಮಾಡುತ್ತಿವೆ ಎಂದು ವಿದ್ಯಾವಂತ ನಿರುದ್ಯೋಗಿ ಸಂಘದ ರಾಜ್ಯಾಧ್ಯಕ್ಷ ಕೂಡೂರು ಶ್ರೀಧರ ಮೂರ್ತಿ ತಿಳಿಸಿದರು.

ಪಟ್ಟಣದ ಸಿಡಿಎಸ್‌ ಸಮುದಾಯ ಭವನದಲ್ಲಿ ಗುರುವಾರ ವಿದ್ಯಾವಂತ ನಿರುದ್ಯೋಗಿಗಳ ಸಂಘದ ತಾಲೂಕು ಘಟಕ ಹಾಗೂ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಜ್ಯದಲ್ಲಿ ಒಟ್ಟು 7 ಲಕ್ಷ ಸರ್ಕಾರಿ ಹುದ್ದೆಗಳಿವೆ. ಇದರಲ್ಲಿ ಕೇವಲ 3.5 ಲಕ್ಷ ಉದ್ಯೋಗಿಗಳು ಮಾತ್ರ ಇದ್ದಾರೆ. ಇನ್ನಷ್ಟು ಹುದ್ದೆ ಖಾಲಿಯಾಗಿವೆ. ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿಯೂ ಆಗಿಲ್ಲ. ದಿನವೊಂದಕ್ಕೆ ಒಬ್ಬ ಶಾಸಕರಿಗೆ 7.5 ಸಾವಿರ ರೂ. ನೀಡಲು ನಮ್ಮ ಸರ್ಕಾರಗಳಿಗೆ ಹಣವಿದೆ. ಆದರೆ ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ಆಗದಿರುವುದು ವಿಪರ್ಯಾಸ ಎಂದು ಹೇಳಿದರು.

ವಿಶ್ವದಲ್ಲಿ ಹೆಚ್ಚು ಯುವ ಶಕ್ತಿ ಹೊಂದಿರುವ ದೇಶ ನಮ್ಮದಾಗಿದೆ. ಇದರ ಸದ್ಬಳಕೆಯಾಗುತ್ತಿಲ್ಲ. ಹೀಗಾಗಿ ದೇಶ ಇನ್ನೂ ಬಡತನದ ರೇಖೆಯಿಂದ ಹೊರಬಂದಿಲ್ಲ. ಸರ್ಕಾರಗಳು ಉದ್ಯೋಗವನ್ನು ಕಡ್ಡಾಯಗೊಳಿಸುವ ಶಾಸನ ರೂಪಿಸಬೇಕು. ಶಿಕ್ಷಣ, ಆರೋಗ್ಯ ಉದ್ಯೋಗ ಕಡ್ಡಾಯವಾಗಬೇಕು. ಇಲ್ಲವಾದಲ್ಲಿ ನೆರೆ ರಾಜ್ಯಗಳಲ್ಲಿ ಇರುವಂತೆ ನಿರುದ್ಯೋಗ ಭತ್ಯೆ ನೀಡಬೇಕು. ಇದಕ್ಕಾಗಿ ರಾಜ್ಯದ ಪ್ರತಿ ಮೂಲೆಗಳಿಂದಲೂ ಗ್ರಾಮೀಣ, ತಾಲೂಕು, ಜಿಲ್ಲಾ ಮಟ್ಟದಲ್ಲಿ ವಿದ್ಯಾವಂತ ನಿರುದ್ಯೋಗಿ ಸಂಘವನ್ನು ಬಲಿಷ್ಠಗೊಳಿಸಲಾಗುವುದು. ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು. ಸಂಘದ ರಾಜ್ಯ ಸಮಿತಿ ಪುಟ್ಟನಂಜಯ್ಯ ದೇವನೂರು, ದೇಶದಲ್ಲಿ ಜಾತೀಯತೆ, ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಅಮೆರಿಕಾ, ರಷ್ಯಾ ಇಟ್ಟುಕೊಂಡಿರುವ ಅಣುಬಾಂಬಿಗಿಂತಲೂ ಇದು ತುಂಬಾ ಅಪಾಯಕಾರಿಯಾಗಿದೆ. ಇದರೊಂದಿಗೆ ನಿರುದ್ಯೋಗ ಸಮಸ್ಯೆ ದೇಶದಲ್ಲಿ ಕಿತ್ತು ತಿನ್ನುವ ಬಡತನಕ್ಕೆ ಸಾಕ್ಷಿಯಾಗಿದೆ. ಆದರೆ ನಮ್ಮನ್ನಾಳುವ ರಾಜಕಾರಣಿಗಳು ಜಾತಿ, ಧರ್ಮವನ್ನು ಎತ್ತಿಕಟ್ಟುವ ಕಡೆ ವಹಿಸುವ ಆಸಕ್ತಿ ಈ ಸಮಸ್ಯೆ ನಿವಾರಣೆಗೆ ನೀಡುತ್ತಿಲ್ಲವೆಂದರು.

800 ವರ್ಷ ದೇಶವನ್ನಾಳಿದ ಮುಸ್ಲಿಂ ರಾಜರು, 300 ವರ್ಷ ದೇಶವನ್ನಾಳಿದ ಆಂಗ್ಲರು ತಮ್ಮ ಧರ್ಮವನ್ನು ರಾಷ್ಟ್ರದ ಪ್ರಜೆಗಳ ಮೇಲೆ ಹೇರಲಿಲ್ಲ. ಆದರೆ ಸಂವಿಧಾನ ಜಾರಿಯಾಗಿರುವ ಜಾತ್ಯತೀತ ಕಲ್ಪನೆಯ ರಾಷ್ಟ್ರಕ್ಕೆ ಕೇಂದ್ರ ಸರ್ಕಾರ ಹಿಂದೂ ರಾಷ್ಟ್ರ ನಿರ್ಮಾಣ ಮಾಡಲು ಹೊರಟಿರುವುದು ಆಘಾತಕಾರಿ ವಿಷಯವೆಂದರು.

ಪಪಂ ಸದಸ್ಯರಾದ ಮಹೇಶ್‌, ಮಹಾದೇವನಾಯಕ, ಸವಿತಾ, ಕೆ.ಮಲ್ಲಯ್ಯ, ಪ್ರಭಾವತಿ, ಮಂಜು, ಸುಶೀಲಾ, ತಾಲೂಕು ಅಧ್ಯಕ್ಷ ಪಿ.ಮಹಾದೇವು, ಡಾ.ಸುರೇಶ್‌, ಧನಂಜಯ್‌, ನಂಜುಂಡಸ್ವಾಮಿ, ಕೃಷ್ಣರಾಜು, ಸಿದ್ದು, ಚಂದ್ರಶೇಖರ್‌, ಚಿನ್ನಸ್ವಾಮಿ, ಕಿರಣ್‌ನಾಯಕ್‌, ಮಧು, ನಾಗರಾಜು, ಪಿ. ಚಂದ್ರಶೇಖರ್‌, ಆಲೂರುಮಲ್ಲು, ಮಹೇಶ್‌ ಇದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.