ಚಾಮರಾಜನಗರ ಜಿಲ್ಲೆ: ಕೋವಿಡ್ನಿಂದ ಮೊದಲ ಸಾವು
Team Udayavani, Jul 11, 2020, 11:15 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್ನಿಂದ ಮೊದಲ ಸಾವು ಸಂಭವಿಸಿದೆ.
ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದ 58 ವರ್ಷದ ವ್ಯಕ್ತಿ ಶ್ವಾಸಕೋಶದ ಸೋಂಕಿನ ಕಾರಣ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲಾಗಿದ್ದು ಶನಿವಾರ ಮೃತಪಟ್ಟಿದ್ದಾರೆ.
ಈ ವ್ಯಕ್ತಿ ಮೃತಪಟ್ಟ ಬಳಿಕ ಲಭ್ಯವಾದ ಅವರ ಗಂಟಲು ದ್ರವ ಮಾದರಿ ಪರೀಕ್ಷೆಯ ಫಲಿತಾಂಶದಲ್ಲಿ ಪಾಸಿಟಿವ್ ಬಂದಿದೆ.
ಉಸಿರಾಟದ ತೊಂದರೆ ಕಾರಣದಿಂದ ಈ ವ್ಯಕ್ತಿ ಜು.8ರಂದು ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ತೊಂದರೆಯಿದ್ದ ಕಾರಣ ಅಂದೇ ಅವರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಆರ್ಟಿ-ಪಿಸಿಆರ್ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ಪರೀಕ್ಷೆಯ ಫಲಿತಾಂಶ ಬರುವ ಮುನ್ನವೇ ಶನಿವಾರ ಬೆಳಿಗ್ಗೆ 9.30ರಲ್ಲಿ ಮೃತಪಟ್ಟರು.
ಹೀಗಾಗಿ ಮರಣೋತ್ತರವಾಗಿ ಮತ್ತೊಮ್ಮೆ ಗಂಟಲು ದ್ರವ ಮಾದರಿಯನ್ನು ಟ್ರೂನಾಟ್ (ಶೀಘ್ರ ವರದಿ ದೊರಕುವ ವಿಧಾನದ )ಪರೀಕ್ಷೆಗೆ ಒಳಪಡಿಸಲಾಯಿತು. ಇದರಲ್ಲಿ ಆ ವ್ಯಕ್ತಿಗೆ ಕೋವಿಡ್-19 ದೃಢಪಟ್ಟಿತು. ಆದರೂ ಶನಿವಾರ ರಾತ್ರಿಯವರೆಗೂ ಆರ್ಟಿ-ಪಿಸಿಆರ್ ವರದಿ ನಿರೀಕ್ಷಿಸಲಾಗಿತ್ತು. ಶನಿವಾರ ರಾತ್ರಿ 10.30ರಲ್ಲಿ ಆ ವರದಿ ಲಭ್ಯವಾಗಿ, ಅದರಲ್ಲೂ ಕೋವಿಡ್ 19 ದೃಢಪಟ್ಟಿತು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ತಿಳಿಸಿದ್ದಾರೆ.
ಈ ವ್ಯಕ್ತಿಯ ಶವ ಸಂಸ್ಕಾರವನ್ನು ಕೋವಿಡ್ ಮೃತದೇಹ ವಿಲೇವಾರಿ ಮಾರ್ಗಸೂಚಿಯ ಅನುಸಾರ ನಗರದ ಎಡಬೆಟ್ಟದ ಸಮೀಪ ಶನಿವಾರ ರಾತ್ರಿ ನಡೆಸಲಾಯಿತು. ಈ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯ ವಾರ್ಡ್ ಅನ್ನು ಸ್ಯಾನಿಟೈಸ್ ಮಾಡಿ, ಸೀಲ್ಡೌನ್ ಮಾಡಲಾಗಿದೆ.
ಈ ವ್ಯಕ್ತಿಗೆ ಚಿಕಿತ್ಸೆ ನೀಡಿದ ಆಸ್ಪತ್ರೆಯ ವೈದ್ಯರು, ವೈದ್ಯೇತರ ಸಿಬ್ಬಂದಿ, ಸಂಬಂಧಿಕರು ಹಾಗೂ ಆತನನ್ನು ಸಂಪರ್ಕಿಸ್ದಿ ಎಲ್ಲರನ್ನೂ ಕಡ್ಡಾಯ ಗೃಹ ಕ್ವಾರಂಟೀನ್ನಲ್ಲಿ ಇರಿಸಲಾಗಿದ್ದು, ಅವರೆಲ್ಲರ ಕೋವಿಡ್ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ವ್ಯಕ್ತಿಗೆ ಕೋವಿಡ್ ಸೋಂಕು ಹೇಗೆ ತಗುಲಿರಬಹುದೆಂಬ ಬಗ್ಗೆ ಇನ್ನೂ ಖಚಿತವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ