
ಚಾಮರಾಜನಗರ ಜಿಲ್ಲೆಯಲ್ಲಿ ಇಂದು ನಾಲ್ಕು ಪಾಸಿಟಿವ್ ಪ್ರಕರಣ ದೃಢ
Team Udayavani, Jun 23, 2020, 6:29 PM IST

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ನಾಲ್ಕು ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ.
ನಗರದ ಪೂರ್ವ ಪೊಲೀಸ್ ಠಾಣೆಯ ಪೇದೆ ಹಾಗೂ ಗುಂಡ್ಲುಪೇಟೆಯ ಮಹದೇವಪ್ರಸಾದ್ ನಗರದ ಮೂವರಿಗೆ ಕೋವಿಡ್ 19 ಪಾಸಿಟಿವ್ ಆಗಿದೆ.
ಗುಂಡ್ಲುಪೇಟೆ ಪಟ್ಟಣದ ಮಹದೇವಪ್ರಸಾದ್ ನಗರದ 45 ವರ್ಷದ ಮಹಿಳೆ ಹಾಗೂ 55 ವರ್ಷದ ಮಹಿಳೆಗೆ ಸೋಂಕು ತಗುಲಿದೆ. ಗೃಹಿಣಿಯರಾಗಿದ್ದ ಇವರಿಬ್ಬರು ಬೀಡಿ ಕಟ್ಟುವ ವೃತ್ತಿ ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ರವಿ ತಿಳಿಸಿದರು.
ಈ ಮಹಿಳೆಯರು ಶನಿವಾರ ಗುಂಡ್ಲುಪೇಟೆ ಆಸ್ಪತ್ರೆಗೆ ವಾಂತಿ, ತಲೆನೋವು, ಮೈಕೈ ನೋವಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಹೋದಾಗ ಅವರ ಗಂಟಲ ದ್ರವ ಪರೀಕ್ಷೆ ನಡೆಸಲಾಗಿದೆ. ಈಗಾಗಲೇ ಸೋಂಕಿತನಾಗಿರುವ 8311ರ ರೋಗಿಯಿಂದಾಗಿ ಇವರಿಗೆ ಸೋಂಕು ಹರಡಿರಬಹುದೆಂದು ಶಂಕಿಸಲಾಗಿದೆ. ಮಹದೇವಪ್ರಸಾದ್ ನಗರದ ಇನ್ನಷ್ಟು ಪ್ರದೇಶವನ್ನು ಸೀಲ್ ಡೌನ್ ಮಾಡಲಾಗುವುದು ಎಂದು ಅವರು ತಿಳಿಸಿದರು.
ಇದಲ್ಲದೇ, ನಗರದ ಪೂರ್ವ ಪೊಲೀಸ್ ಠಾಣೆಯ ಪೇದೆಯೊಬ್ಬರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಪೇದೆಗೆ random ಟೆಸ್ಟ್ ನಡೆಸಲಾಗಿತ್ತು. ಮಂಗಳವಾರ ಮಧ್ಯಾಹ್ನ ಫಲಿತಾಂಶ ಪಾಸಿಟಿವ್ ಬಂದಿದೆ.
ಈ ಹಿನ್ನೆಲೆಯಲ್ಲಿ ರಾಮಸಮುದ್ರದಲ್ಲಿರುವ ಪೂರ್ವ ಠಾಣೆಯನ್ನು ಸ್ಯಾನಿಟೈಸ್ ಮಾಡಿ ಸೀಲ್ ಡೌನ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇದಲ್ಲದೇ ಗುಂಡ್ಲುಪೇಟೆಯ 8311ಸಂಖ್ಯೆಯ ರೋಗಿಯ ಪ್ರಾಥಮಿಕ ಸಂಪರ್ಕ ಹೊಂದಿದ್ದ ಇನ್ನೋರ್ವ ವ್ಯಕ್ತಿಗೂ ಮಂಗಳವಾರ ಕೋವಿಡ್ ದೃಢಪಟ್ಟಿದೆ.
ಮಂಗಳವಾರದ ನಾಲ್ಕು ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 8 ಕೋವಿಡ್ ಪ್ರಕರಣಗಳು ದಾಖಲಾಗಿವೆ. ಗುಂಡ್ಲುಪೇಟೆಯ ಮಹದೇವಪ್ರಸಾದ್ ನಗರದಲ್ಲಿ ಒಟ್ಟು 5, ಭೂಮಾಪಕಿ, ಪೊಲೀಸ್ ಪೇದೆ ಸೇರಿದಂತೆ 7 ಸಕ್ರಿಯ ಪ್ರಕರಣಗಳು. ಓರ್ವ ಗುಣಮುಖನಾಗಿ ಮನೆಗೆ ಹಿಂದಿರುಗಿದ್ದಾನೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ತಾಜ್ ಮಹಲ್ ನೋಡಲು ಬಂದ ಅರ್ಜೆಂಟೀನಾ ಪ್ರವಾಸಿಗೆ ಕೋವಿಡ್; ವ್ಯಕ್ತಿ ನಾಪತ್ತೆ!

ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆಗೆ ದರ ನಿಗದಿ; ಖಾಸಗಿ/ಸರ್ಕಾರಿ ಆಸ್ಪತ್ರೆಯಲ್ಲಿ ದರ ಎಷ್ಟು?

ದೇಶದಲ್ಲಿಂದು ಕೋವಿಡ್ ಚಿಕಿತ್ಸಾ ತಾಲೀಮು: ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವರು

ಇನ್ನು ಮುಂದೆ ದೈನಂದಿನ ಕೋವಿಡ್ ಪ್ರಕರಣ ಸಂಖ್ಯೆ ಪ್ರಕಟಿಸುವುದನ್ನು ನಿಲ್ಲಿಸಲಿದೆ ಚೀನಾ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಬಳ್ಳಾರಿಯಲ್ಲಿ ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!!

180 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಏರ್ ಏಷ್ಯಾ ವಿಮಾನಕ್ಕೆ ಹಕ್ಕಿ ಢಿಕ್ಕಿ ಲಕ್ನೋದಲ್ಲಿ ತುರ್ತು ಭೂಸ್ಪರ್ಶ

ಡಾ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ : ಅಭಿಮಾನಿಗಳ ಭಾವನೆಗಳಿಗೆ ಸಕಾರಾತ್ಮಕ ಸ್ಪಂದನೆ: ಸಿಎಂ

ಪಾಕಿಸ್ತಾನದಲ್ಲಿ 4.1 ತೀವ್ರತೆಯ ಭೂಕಂಪ: ಕಳೆದ 10 ದಿನದಲ್ಲಿ 2ನೇ ಬಾರಿ ಕಂಪಿಸಿದ ಭೂಮಿ

ಕಂದಕಕ್ಕೆ ಉರುಳಿದ ಪ್ರಯಾಣಿಕರ ವಾಹನ: 39 ಮಂದಿ ಸ್ಥಳದಲ್ಲೇ ಸಾವು