
ವಿಶ್ವಕ್ಕೆ ಹೊಸ ಸಂದೇಶ ನೀಡಿದ ಸ್ವಾತಂತ್ರ್ಯ ಚಳವಳಿ
Team Udayavani, Jan 27, 2021, 12:12 PM IST

ಚಾಮರಾಜನಗರ: ಅಂಬೇಡ್ಕರ್ ಚಿಂತನೆಯ ಫಲವಾಗಿ ರೂಪಿತವಾದ ಭಾರತದ ಸಂವಿಧಾನವು ರಾಷ್ಟ್ರದ ಏಕತೆ, ದುರ್ಬಲ ವರ್ಗಗಳ ಏಳಿಗೆ, ಶೋಷಣೆ ವಿರುದ್ಧ ರಕ್ಷಣೆ, ಬಲಿಷ್ಠ ಒಕ್ಕೂಟ ಮಾದರಿ ಸರ್ಕಾರವನ್ನು ರೂಪಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.
ನಗರದ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಜಿಲ್ಲಾಡಳಿತದಿಂದ ಮಂಗಳವಾರ ಆಯೋಜಿಸಿದ್ದ 72ನೇ ಗಣರಾಜ್ಯೋತ್ಸವದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿ, ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು. ಬ್ರಿಟಿಷರ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯ ಗಳಿಸಿದ ನಂತರ ಭಾರತೀಯರ ಮುಂದಿದ್ದ ಪ್ರಥಮ ಸವಾಲೆಂದರೆ ನಮ್ಮದೇ ಆದ ಸಂವಿಧಾನರಚಿಸುವುದಾಗಿತ್ತು. ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಕೊಡುಗೆ ಅನನ್ಯ. ಸಂವಿಧಾನವನ್ನು 1950ರ ಜ.26 ರಂದು ಜಾರಿಗೆ ತರಲಾಯಿತು. ಗಣ ರಾಜ್ಯವೆಂದರೆ ಜನರ ರಾಜ್ಯವೆಂದು ಅರ್ಥ. ಜನರು ಜನರಿಗಾಗಿ ಜನರ ಪ್ರತಿನಿಧಿಯ ಮೂಲಕ ರಾಜ್ಯನಡೆಸುವ ವಿಧಾನವೇ ಗಣರಾಜ್ಯವಾಗಿದೆ ಎಂದರು. ದೇಶವು ಸ್ವಾತಂತ್ರ್ಯ ಗಳಿಸಿ 74 ವರ್ಷಗಳಲ್ಲಿ ಹಾಗೂ ಗಣರಾಜ್ಯವಾದ 71 ವರ್ಷಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ
ಮಾಡಿರುವ ಸಾಧನೆ ಗಣನೀಯವಾಗಿದೆ. ಎಲ್ಲ ಸಾಧನೆಗೆ ದೇಶದ ಪ್ರತಿಯೊಬ್ಬ ಪ್ರಜೆಯೂ ಕಾರಣ ಕರ್ತರಾಗಿದ್ದಾರೆ. ಪಾಶ್ಚಿಮಾತ್ಯರ ದಾಸ್ಯಕ್ಕೆ ಸಿಲುಕಿದ ನಾವು ಸ್ವಾತಂತ್ರ್ಯ ಗಳಿಸಲು ನಡೆಸಿದ ಹೋರಾಟ ವಿಶ್ವಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು.
ಮಹಾತ್ಮ ಗಾಂಧೀಜಿ, ಬಾಲಗಂಗಾಧರ ತಿಲಕ್, ಲಾಲಾ ಲಜಪತರಾಯ್, ಬಿಪಿನ್ ಚಂದ್ರಪಾಲ್, ಸುಭಾಷ್ ಚಂದ್ರಬೋಸ್, ಜವಾಹರಲಾಲ್ ನೆಹರು ನಾಯಕತ್ವದಲ್ಲಿ ನಡೆದ ಹೋರಾಟ ಮತ್ತು ಲಕ್ಷಾಂತರ ಜನರ ತ್ಯಾಗ, ಬಲಿದಾನದಿಂದ ದೇಶ ಸ್ವಾತಂತ್ರ್ಯ ಗಳಿಸಲು ಸಾಧ್ಯವಾಯಿತು. ಭಾರತದ ಸ್ವಾತಂತ್ರ್ಯ ಚಳವಳಿಯು ವಿಶ್ವಕ್ಕೆ ಹೊಸ ಸಂದೇಶಗಳನ್ನು ನೀಡಿತು. ಮಹಾತ್ಮ ಗಾಂಧೀಜಿಯವರು ನೀಡಿದ ಸತ್ಯ, ಶಾಂತಿ, ತ್ಯಾಗ, ಅಹಿಂಸಾ ತತ್ವಗಳನ್ನು ಇಂದು ಇಡೀ ಜಗತ್ತು ಸ್ಮರಿಸುತ್ತಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ:ಏರ್ಪೋರ್ಟ್ನಲ್ಲಿ ಅದ್ದೂರಿ ಗಣರಾಜ್ಯೋತ್ಸವ
ಇದೇ ಸಂದರ್ಭದಲ್ಲಿ ಕೋವಿಡ್ ಸಂದರ್ಭದಲ್ಲಿ ಗಣನೀಯ ಸೇವೆ ಸಲ್ಲಿಸಿದ ಕೊರೊನಾ ಯೋಧರಿಗೆ, ರಾಷ್ಟ್ರಪತಿ ಪದಕ ಪುರಸ್ಕೃತ ಪೊಲೀಸ್ ಇನ್ಸ್ಪೆಕ್ಟರ್ ಬಿ. ಪುಟ್ಟಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮ ದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಪಂ ಅಧ್ಯಕ್ಷೆ ಅಶ್ವಿನಿ, ತಾಪಂ ಅಧ್ಯಕ್ಷೆ ಶೋಭಾ, ನಗರಸಭಾ ಅಧ್ಯಕ್ಷೆ ಆಶಾ, ಚುಡಾ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ, ಕೇಂದ್ರ ಬರ ಪರಿಹಾರ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್, ಜಿಪಂ ಸಿಇಒ ಹರ್ಷಲ್ ಭೋಯರ್ ನಾರಾಯಣರಾವ್ ಇದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಕಿರುಕುಳದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಆ ಸಂದರ್ಭದ ಸಹಜ ಪ್ರಕ್ರಿಯೆ: ಸಾನ್ಯಾ ಅಯ್ಯರ್

ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ 26.23 ಲಕ್ಷ ರೂ.ಸಂಗ್ರಹ

ಪಠಾಣ್ ಅಬ್ಬರಕ್ಕೆ ನಡುಗಿದ ಬಾಕ್ಸಾಫೀಸ್: ಭಾರತದಲ್ಲೇ 300 ಕೋಟಿ ಗಳಿಸಿ ಶಾರುಖ್ ಸಿನಿಮಾ

ಕೋಮುಗಲಭೆ ಸೃಷ್ಟಿಸುತ್ತಿದೆ ಬಿಜೆಪಿ ಸರ್ಕಾರ; ಆನಂದ ನ್ಯಾಮಗೌಡ

ಉಡುಪಿ: ನಾಗಬನದಲ್ಲಿ ಶ್ರೀಗಂಧ ಮರ ಕಳವು… ಆರೋಪಿ ಬಂಧನ, ಸೊತ್ತು ವಶ