ಗಣೇಶ ಪ್ರತಿಷ್ಠಾಪನೆ: ಸರ್ಕಾರದಿಂದ ಗೊಂದಲ
Team Udayavani, Aug 21, 2020, 1:27 PM IST
ಗುಂಡ್ಲುಪೇಟೆ: ಗಣೇಶ ಪ್ರತಿಷ್ಠಾಪನೆ ಕುರಿತು ಸರ್ಕಾರದ ಗೊಂದಲದ ನೀತಿಯಿಂದ ಪರಿಸರ ಸ್ನೇಹಿ ಗೌರಿ-ಗಣೇಶ ತಯಾರಕರು ತೊಂದರೆಗೆ ಸಿಲುಕಿದ್ದಾರೆ.
ಕೋವಿಡ್ ಗೆ ಸಿಲುಕಿ ಹಬ್ಬದ ಅಚರಣೆಯೇ ಕಳಾಹೀನವಾಗಿದ್ದು, ಈ ನಡುವೆ ಜೇಡಿಮಣ್ಣಿನಲ್ಲಿ ಗೌರಿ-ಗಣೇಶ ಮೂರ್ತಿ ಮಾಡಿ ಮಾರಾಟ ಮಾಡುವ ಮೂಲಕವೇ ಜೀವನ ಸಾಗಿಸುತ್ತಿರುವ ನೂರಾರು ಕಲಾವಿದರ ಬದುಕು ಹೈರಾಣಾಗುತ್ತಿದೆ.
ಪಟ್ಟಣದ ಕಲಾವಿದ ಶ್ರೀನಿವಾಸಮೂರ್ತಿ ಅವರ ಕುಟುಂಬ ತಯಾರಿಸುತ್ತಿದ್ದ ಮಣ್ಣಿನ ಮೂರ್ತಿಗೆ ತಾಲೂಕಿನಲ್ಲಿ ಹೆಚ್ಚಿನ ಬೇಡಿಕೆ ಇದೆ. ತಮ್ಮ ಪತ್ನಿ ಲಕ್ಷ್ಮಮ್ಮ ಹಾಗೂ ಮಕ್ಕಳೊಂದಿಗೆ ಸೇರಿ ಮಣ್ಣಿನಲ್ಲಿ ಗೌರಿ ಹಾಗೂ ಗಣೇಶ ಮೂರ್ತಿ ತಯಾರಿಸುತ್ತಿದ್ದಾರೆ.1ರಿಂದ 5 ಅಡಿ ಎತ್ತರದ ವಿವಿಧ ವಿನ್ಯಾಸದಲ್ಲಿ ಮನಸೆಳೆಯುತ್ತಿದ್ದ ಮೂರ್ತಿಗಳನ್ನು ಗ್ರಾಮೀಣ ಜನತೆ ತಿಂಗಳಿಗೂ ಮೊದಲೇ ತಮಗೆ ಬೇಕಾದ ಗಣಪನಿಗೆ ಆರ್ಡರ್ ಕೊಟ್ಟು ಖರೀದಿಸುತ್ತಿದ್ದರು. ಅಲ್ಲದೆ, ಚಿಲ್ಲರೆ ಮಾರಾಟಗಾರರೂ ಇವರಿಂದಲೇ ಮೂರ್ತಿಗಳನ್ನು ಖರೀದಿಸಿ ಮಾರಾಟ ಮಾಡುತ್ತಿದ್ದರು.
ಈ ಬಾರಿ ಗಣೇಶ ಪ್ರತಿಷ್ಠಾಪನೆ ಸಂಬಂಧ ಸರ್ಕಾರ ಖಚಿತ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಗೊಂದಲದಲ್ಲಿರುವ ಜನರು, ತಾವು ನೀಡಿದ್ದ ಆರ್ಡರ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಸಣ್ಣ ಮೂರ್ತಿಗಳಿಗೆ ಮಾತ್ರ ಬೇಡಿಕೆಯುಂಟಾಗಿದೆ. ಇದರಿಂದ ತಯಾರಿಸಿದ ಮೂರ್ತಿಗಳೂ ಮಾರಾಟವಾಗದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು