ಹೆದ್ದಾರಿ ಬದಿಯಲ್ಲಿಯೇ ಕಸ ವಿಲೇವಾರಿ


Team Udayavani, Jun 27, 2019, 3:00 AM IST

heddari

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಶ್ರೀರಾಮದೇವರ ಗುಡ್ಡ ಸಮೀಪ ಪುರಸಭೆಯ ಕಸ ವಿಲೇವಾರಿ ಘಟಕಕ್ಕೆ ಸುರಿಯಬೇಕಾದ ಕಸವನ್ನು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿಯೇ ವಿಲೇವಾರಿ ಮಾಡುತ್ತಿದ್ದಾರೆ. ಈ ಕಸ ದುರ್ವಾಸನೆ ಬೀರುತ್ತಿದ್ದು, ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ.

ಪಟ್ಟಣದಿಂದ ಕೇರಳಕ್ಕೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 766ರ ಬದಿಯಲ್ಲಿರುವ ಶ್ರೀರಾಮದೇವರ ಗುಡ್ಡದ ಪಕ್ಕದಲ್ಲಿರುವ ಪುರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕವಿದೆ. ಪಟ್ಟಣದ ವಿವಿಧ ಬಡಾವಣೆಯಿಂದ ಸಂಗ್ರಹಿಸಿದ ಕಸವನ್ನು ಜೋಪಾನವಾಗಿ ಘಟಕದಲ್ಲಿ ಸುರಿಯಬೇಕು. ಆದರೆ, ಹೆದ್ದಾರಿಯ ಪಕ್ಕದಲ್ಲೇ ಸುರಿಯುತ್ತಿರುವುದರಿಂದ ರಸ್ತೆಯ ಪಕ್ಕದಲ್ಲಿ ಸಂಚಾರ ಮಾಡುವ ಸಾರ್ವಜನಿಕರಿಗೆ ಮತ್ತು ಸುತ್ತಮುತ್ತಲಿನ ಜನರಿಗೆ ದುರ್ವಾಸನೆ ಬೀರುತ್ತಿದೆ.

ನಿತ್ಯ ರಸ್ತೆ ಬದಿಯಲ್ಲಿಯೇ ವಿಲೇವಾರಿ: ಪುರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕ ಕಸದಿಂದ ತುಂಬಿ ತುಳುಕುತ್ತಿದೆ. ಹದ್ದು, ಕಾಗೆಗಳು, ನಾಯಿಗಳ ಬೀಡಾಗಿದೆ. ಇಲ್ಲಿನ ಕಸವನ್ನು ನಾಯಿಗಳು ರಸ್ತೆಗೆ ಎಳೆದಾಡುತ್ತಿದ್ದು, ಸುತ್ತಲೂ ಗಬ್ಬುನಾರುತ್ತಿದೆ. ಈ ಗಬ್ಬುವಾಸನೆಯಿಂದ ಕಸವನ್ನು ವಾಹನಗಳಲ್ಲಿ ತಂದ ಪುರಸಭೆ ವಾಹನ ಚಾಲಕರು ಸಹ ಒಳಗೆ ಹೋಗಲಾಗದ ಪ್ರತಿದಿನವೂ ಪಟ್ಟಣದಲ್ಲಿ ಸಂಗ್ರಹವಾದ ಕಸವನ್ನು ರಸ್ತೆಯ ಬದಿಯಲ್ಲಿಯೇ ಸುರಿಯುತ್ತಿದ್ದಾರೆ.

ಸಾಂಕ್ರಾಮಿಕ ರೋಗದ ಭೀತಿ: ಪಟ್ಟಣದ ಕೋಳಿ ಹಾಗೂ ಮಾಂಸದ ಅಂಗಡಿಗಳು, ಕ್ಲಿನಿಕಲ್‌ ತ್ಯಾಜ್ಯಗಳನ್ನೂ ಸಹ ರಸ್ತೆಯ ಬದಿಯಲ್ಲಿಯೇ ಸುರಿಯುತ್ತಿರುವುದರಿಂದ ಅನೈರ್ಮಲ್ಯವುಂಟಾಗಿದೆ. ಪರಿಣಾಮ ರಸ್ತೆಯಲ್ಲಿ ಸಂಚಾರ ಮಾಡುವ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹಾಗೂ ಪ್ರಯಾಣಿಕರು ದುರ್ವಾಸನೆ ಸಹಿಸಲಾಗದಂತಾಗಿದೆ. ಇತ್ತೀಚಗೆ ಮಳೆ ಬೀಳುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯುಂಟಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಕಸ ವಿಲೇವಾರಿ ಘಟಕದ ಸಮೀಪದಲ್ಲಿಯೇ ಶ್ರೀರಾಮದೇವರ ಗುಡ್ಡ, ಗವಿಸಿದ್ದೇಶ್ವರ ದೇವಸಾªನ, ಶ್ರೀರಾಘವೇಂದ್ರ ಸ್ವಾಮಿ ಬೃಂದಾವನ ಮಠ, ಅಗ್ನಿಶಾಮಕ ದಳದ ಕಚೇರಿ ಹಾಗೂ ಸಿಬ್ಬಂದಿ ವಸತಿ ಗೃಹಗಳಿವೆ. ದೇವಸ್ಥಾನಗಳಿಗೆ ತೆರಳುವ ಭಕ್ತರು ಈ ದುರ್ವಾಸನೆಯನ್ನು ಸಹಿಸಿಕೊಂಡು ಹೋಗಬೇಕಾಗಿದೆ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳಲಿ.
-ಜಿ.ಎಸ್‌.ಗಣೇಶ್‌ಪ್ರಸಾದ್‌, ಗುಂಡ್ಲುಪೇಟೆ ನಿವಾಸಿ

ಮಡಹಳ್ಳಿ ಸಮೀಪದಲ್ಲಿ ನೂತನ ಘಟಕವನ್ನು ಸ್ಥಾಪಿಸಲು ಸ್ಥಳ ಗುರುತಿಸಲಾಗಿದೆ. ಆದರೆ, ಸ್ಥಳೀಯರ ವಿರೋಧದಿಂದ ಪರ್ಯಾಯ ಸ್ಥಳ ಗುರುತಿಸಲಾಗುತ್ತಿದೆ. ಸದ್ಯದಲ್ಲೇ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುತ್ತೇವೆ.
-ಎ.ರಮೇಶ್‌, ಮುಖ್ಯಾಧಿಕಾರಿ, ಪುರಸಭೆ

* ಸೋಮಶೇಖರ್‌

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.