ಗೀತಾ ಎದುರು ಪತಿಯ ಸರಣಿ ಗೆಲುವಿನ ಸವಾಲು


Team Udayavani, Mar 12, 2017, 3:45 AM IST

Ban12031707Medn.jpg

ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸತತ ಐದು ಬಾರಿ ಶಾಸಕರಾಗಿ 1994ರಿಂದ 2013ರವರೆಗೂ ಜಯಭೇರಿ ಬಾರಿಸುವ ಮೂಲಕ ಜಿಲ್ಲೆಯಲ್ಲಿ ಯಾರೂ ಮಾಡಿರದ ವಿಶೇಷ ಸಾಧನೆಯನ್ನು ಎಚ್‌. ಎಸ್‌. ಮಹದೇವಪ್ರಸಾದ್‌ ಮಾಡಿದ್ದರು.  ಈಗ ಅವರ ಅನುಪಸ್ಥಿತಿಯಲ್ಲಿ ಮಹದೇವಪ್ರಸಾದ್‌ ಪತ್ನಿ ಗೀತಾ ಮಹದೇವಪ್ರಸಾದ್‌ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಪತಿಯ ಜಯಭೇರಿಯನ್ನು ಮುಂದುವರಿಸುತ್ತಾರೆಯೇ ಎಂಬುದು ಕುತೂಹಲ ಮೂಡಿಸಿದೆ.

1994ರಲ್ಲಿ ಪ್ರಥಮ ಬಾರಿಗೆ ಜಯಗಳಿಸಿದ ಎಚ್‌.ಎಸ್‌. ಮಹದೇವಪ್ರಸಾದ್‌, ನಂತರ 1999, 2004, 2008ರ ವಿಧಾನಸಭಾ ಚುನಾವಣೆಗಳಲ್ಲಿ ಸತತವಾಗಿ ಗೆದ್ದು ಬಂದಿದ್ದರು. ಕಳೆದ 2013ರ ಚುನಾವಣೆಯಲ್ಲೂ ಜಯಭೇರಿ ಬಾರಿಸುವ ಮೂಲಕ ಸತತ ಐದನೇ ಬಾರಿ ಗೆದ್ದು ದಾಖಲೆ ನಿರ್ಮಿಸಿದ್ದರು.

ಹೀಗಾಗಿಯೇ ಅವರನ್ನು ಸೋಲಿಲ್ಲದ ಸರದಾರ ಎಂದೇ ಕರೆಯಲಾಗುತ್ತಿತ್ತು. ವಿಶೇಷವೆಂದರೆ, ಮಹದೇವಪ್ರಸಾದ್‌ ನಾಲ್ಕು ಚುನಾವಣೆಗಳಲ್ಲೂ ನಾಲ್ಕು ಪಕ್ಷದಿಂದ ನಾಲ್ಕು ಬೇರೆ ಬೇರೆ ಚಿಹ್ನೆಗಳಿಂದ ಆರಿಸಿ ಬಂದಿದ್ದರು. 1994ರಲ್ಲಿ ಜನತಾದಳ (ಚಕ್ರದಗುರುತು), 1999ರಲ್ಲಿ ಸಂಯುಕ್ತಜನತಾದಳ(ಬಾಣದ ಗುರುತು) 2004ರಲ್ಲಿ ಜಾತ್ಯತೀತ ಜನತಾದಳ (ಟ್ಯಾಕ್ಟರ್‌ ಗುರುತು), 2008 ಹಾಗೂ 2013ರಲ್ಲಿ ಕಾಂಗ್ರೆಸ್‌ನಿಂದ (ಹಸ್ತದಗುರುತು) ಗೆದ್ದಿದ್ದರು. ಪದೇಪದೆ ಪಕ್ಷ ಹಾಗೂ ಚಿಹ್ನೆ ಬದಲಾದರೂ ಕ್ಷೇತ್ರದ ಜನತೆ ಅವರ ವ್ಯಕ್ತಿತ್ವ ನೋಡಿಯೇ ಗೆಲ್ಲಿಸುತ್ತಿದ್ದರು.

ಗುಂಡ್ಲುಪೇಟೆ ಕ್ಷೇತ್ರದಲ್ಲಿ ರಾಜ್ಯದ ಪ್ರಥಮ ಹಾಗೂ ಏಕೈಕ ಮಹಿಳಾ ಸ್ಪೀಕರ್‌ ಕೆ.ಎಸ್‌. ನಾಗರತ್ನಮ್ಮ ಅವರು 1957, 1962, 1967, 1972ರಲ್ಲಿ ಆರಿಸಿ ಬಂದಿದ್ದರು. 1978ರಲ್ಲಿ ಪಕ್ಷೇತರ ಅಭ್ಯರ್ಥಿ ಎಚ್‌.ಕೆ. ಶಿವರುದ್ರಪ್ಪ ಅವರಿಂದ 271 ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಈ ಚುನಾವಣೆಯಲ್ಲಿ ನಾಗರತ್ನಮ್ಮ ಅವರ ಸತತ ಗೆಲುವಿನ ದಾರಿಗೆ ಭಂಗವಾಯಿತು. ಮತ್ತೆ 1983, 1985,1989ರಲ್ಲಿ ನಾಗರತ್ನಮ್ಮ ಗೆದ್ದಿದ್ದರು. ನಾಗರತ್ನಮ್ಮ ವಿರುದಟಛಿ 1985ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಸೋತಿದ್ದ ಮಹದೇವಪ್ರಸಾದ್‌ ಮತ್ತೆ 1989ರ ಚುನಾವಣೆಯಲ್ಲೂ ಅಮ್ಮನ ವಿರುದಟಛಿ (ನಾಗರತ್ನಮ್ಮ ಅವರನ್ನು ಕ್ಷೇತ್ರಾದ್ಯಂತ ಜನರು ಅಮ್ಮ ಎಂದೇ ಕರೆಯುತ್ತಿದ್ದರು)ಸೋಲನುಭವಿಸಿದ್ದರು. ಇದೇ ಅಮ್ಮನ ವಿರುದ್ಧ 1993ರಲ್ಲಿ ಮಹದೇವಪ್ರಸಾದ್‌ ಅವರ ತಂದೆ ಎಚ್‌.ಎನ್‌. ಶ್ರೀಕಂಠಶೆಟ್ಟಿ ಜನತಾಪಕ್ಷದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ಅಮ್ಮ ಬದುಕಿರುವವರೆಗೂ ತಂದೆ-ಮಗ ಇಬ್ಬರೂ ಗೆಲ್ಲಲು ಸಾಧ್ಯವಾಗಿರಲಿಲ್ಲ.

1993ರಲ್ಲಿ ನಾಗರತ್ನಮ್ಮ ನಿಧನಾನಂತರ, 1994ರಲ್ಲಿ ನಡೆದ ಚುನಾವಣೆಯ ನಂತರ ಮಹದೇವಪ್ರಸಾದ್‌ ಅವರ ಅದೃಷ್ಟವೇ ಬದಲಾಯಿತು. ಹಾಗೆಯೇ ಕ್ಷೇತ್ರದ ಚಿತ್ರಣವೂ ಬದಲಾಯಿತು. ಅದುವರೆಗೂ ಅಮ್ಮ ಎನ್ನುತ್ತಿದ್ದ ಕ್ಷೇತ್ರ ಅಪ್ಪನ ಕ್ಷೇತ್ರವಾಗಿ ಪರಿವರ್ತನೆಗೊಂಡಿತು.7 ಬಾರಿ ಗೆದ್ದಿದ್ದರೂ ನಾಗರತ್ನಮ್ಮನವರ ಅವಧಿಯಲ್ಲಿ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳು ಗಣನೀಯ ಪ್ರಮಾಣದಲ್ಲಿ ನಡೆದಿರಲಿಲ್ಲ. ಮಹದೇವಪ್ರಸಾದ್‌ ಐದು ಬಾರಿ ಶಾಸಕರಾಗಿದ್ದ ಅವಧಿಯಲ್ಲಿ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಅನೇಕ ಅಭಿವೃದ್ದಿ ಕೆಲಸಗಳು ನಡೆದವು.

ಆದರೆ ಸತತವಾಗಿ ಐದು ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ದಾಖಲೆ ಈಗ ಮಹದೇವಪ್ರಸಾದ್‌ ಹೆಸರಿಗೆ ಜಮೆಯಾಗಿದೆ. ಸತತ ಗೆಲುವನ್ನು ಹೊರತುಪಡಿಸಿದರೆ ಗುಂಡ್ಲುಪೇಟೆ ಕ್ಷೇತ್ರದಲ್ಲಿ 7 ಬಾರಿ ಗೆದ್ದ ದಾಖಲೆ ನಾಗರತ್ನಮ್ಮನವರ ಹೆಸರಿನಲ್ಲೇ ಇದೆ. ಒಟ್ಟಾರೆ ಸ್ವಾತಂತ್ರ್ಯ ನಂತರದ ಚುನಾವಣೆ ಆರಂಭಿಸಿ ಇದುವರೆಗೂ, ಒಮ್ಮೆ ಎಚ್‌.ಕೆ. ಶಿವರುದ್ರಪ್ಪ ಅವರು ಗೆದ್ದಿದ್ದನ್ನು ಹೊರತುಪಡಿಸಿ, ನಾಗರತ್ನಮ್ಮ ಹಾಗೂ ಮಹದೇವಪ್ರಸಾದ್‌ ಅವರಿಬ್ಬರೇ ಆ ಕ್ಷೇತ್ರದ ಅಧಿಪತಿಗಳಾಗಿದ್ದರು.

– ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.