ಭೂತದ ಬಾಯಲ್ಲಿ ಭಗವದ್ಗೀತೆ: ಖಾದರ್ ಟೀಕೆ
Team Udayavani, Mar 4, 2017, 3:50 AM IST
ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಿದೆ.
ಈ ನಾಲ್ಕು ವರ್ಷಗಳಲ್ಲಿ ಒಂದು ಆರೋಪವೂ ಸಾಬೀತಾಗಿಲ್ಲ. ಬಿಜೆಪಿ ಅಧಿಕಾರಾವಧಿಯಲ್ಲಿ ಎಷ್ಟು ಮಂದಿ ಜೈಲಿಗೆ ಹೋದರು? ಎಷ್ಟು ಮಂದಿ ಜಾಮೀನು ಪಡೆದುಕೊಂಡರು? ಎಂದು ಸಚಿವ ಯು.ಟಿ.ಖಾದರ್ ತಿರುಗೇಟು ನೀಡಿದರು. ಮುಂದಿನ ಚುನಾವಣೆಯಲ್ಲೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆಂಬ ಮಾಹಿತಿ ಬಿಜೆಪಿಯವರಿಗೆ ದೊರಕಿದ್ದು, ಹೇಗಾದರೂ ಮಾಡಿ ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪ ಮಾಡಿ ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲು ಯತ್ನಿಸುತ್ತಿದ್ದಾರೆ. ಇದಕ್ಕೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರ ಕುಮ್ಮಕ್ಕಿದೆ ಎಂದು ಖಾದರ್ ಆರೋಪಿಸಿದರು.