ಸಮಾಜಕ್ಕೆ ಉತ್ತಮ ಮಾರ್ಗದರ್ಶನ ನೀಡಿ


Team Udayavani, Sep 14, 2019, 3:00 AM IST

samajakke

ಕೊಳ್ಳೇಗಾಲ: ಗುಡ್ಡಗಾಡು ಮತ್ತು ಹಿಂದುಳಿದ ಜಿಲ್ಲೆಯಲ್ಲಿ ಶೈಕ್ಷಣಿಕ ಸ್ಥಾನದಲ್ಲಿ ಮೊದಲನೇ ಸ್ಥಾನ ದೊರೆತಿರುವುದರ ಹಿಂದೆ ಶಿಕ್ಷಕರ ಪರಿಶ್ರಮ ಇದೆ ಎಂದು ಹನೂರು ಶಾಸಕ ಆರ್‌.ನರೇಂದ್ರ ಹೇಳಿದರು.

ಪಟ್ಟಣದ ನ್ಯಾಷನಲ್‌ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಕ್ಷೇತ್ರ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಶೈಕ್ಷಣಿಕವಾಗಿ ಮಕ್ಕಳನ್ನು ಮುಂದೆ ತರುವಲ್ಲಿ ಶಿಕ್ಷಕರ ಪರಿಶ್ರಮವಿದೆ. ಶೈಕ್ಷಣಿಕವಾಗಿ ಮತ್ತು ಕ್ರೀಡೆಯಲ್ಲೂ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದೇಶದ ಸಮಗ್ರ ಬೆಳವಣಿಗೆ ಶಿಕ್ಷಕರ ಮೇಲೆ ಇದೆ ಎಂದರು.

ಸಮಸ್ಯೆಗಳ ನಿವಾರಣೆಗೆ ಪಯತ್ನ: ಶೈಕ್ಷಣಿಕ, ಆರ್ಥಿಕವಾಗಿ ಪ್ರಗತಿ ಹೊಂದಲು ಶಿಕ್ಷಕರ ಪಾತ್ರ ಅತಿ ಮುಖ್ಯವಾಗಿದೆ. ಶಿಕ್ಷಕರ ಸಮೂಹ ಸೇರಿ ಶಕ್ತಿ ಕೇಂದ್ರವಾಗಲಿದೆ. ಶಿಕ್ಷಕರ ಹೊರೆ ಕಡಿತ ಮಾಡಲು ಸರ್ಕಾರ ಪ್ರಯತ್ನ ಮಾಡುತ್ತಿದ್ದು, ಸಂಬಂಧಿಸಿದ ಸಚಿವರ ಗಮನ ಸೆಳೆದು ಸಮಸ್ಯೆಗಳ ನಿವಾರಣೆಗೆ ಪ್ರಯತ್ನಿಸುವುದಾಗಿ ಹೇಳಿದರು.

ಸಮಾಜಕ್ಕೆ ಮಾರ್ಗದರ್ಶನ ನೀಡಿ: ನಿವೃತ್ತಿ ಅಂಚಿನಲ್ಲಿರುವ ಶಿಕ್ಷಕರನ್ನು ದೂರದ ಜಿಲ್ಲೆಗಳಿಗೆ ವರ್ಗಾವಣೆ ಮಾಡಿದ್ದು, ಕೂಡಲೇ ಶಿಕ್ಷಣ ಸಚಿವರು ಗಮನ ಹರಿಸಿ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡಬೇಕೆಂದು ಮನವಿ ಮಾಡಿದ ಶಾಸಕರು ನಿವೃತ್ತಿ ಹೊಂದಿದ ಶಿಕ್ಷಕರು ಮನೆಯಲ್ಲಿ ಕಾಲಹರಣ ಮಾಡದೆ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕು ಎಂದರು.

ನಿವೃತ್ತ ಶಿಕ್ಷಕರಿಗೆ ಸನ್ಮಾನ: ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್‌.ಮಹೇಶ್‌ ನಿವೃತ್ತಿ ಹೊಂದಿದ ಶಿಕ್ಷ ಕ ರಾದ ಗುರುಸಿದ್ದಮ್ಮ, ಚಂದ್ರಕಾಂತ, ಮಂಚಯ್ಯ, ನಾಗರತ್ನಮ್ಮ, ತೇರೆಸಾ, ಸುನೀತ, ಖುರ್ಷಿದ್‌ ಬಾನು, ಮುದ್ದನಾರಿ, ನಾಗಮ್ಮ, ಪ್ರಭಾಕರ್‌, ರಮೇಶ್‌, ಸಿದ್ದಪ್ಪಶೆಟ್ಟಿ, ವಿಜಯ ಕುಮಾರ್‌, ರಾಜೇಶ್ವರಿರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಉತ್ತಮ ಶಿಕ್ಷಕರಿಗೆ ಸನ್ಮಾನ: ತಾಲೂಕಿನ ವಿವಿಧ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರಾದ ಸರಳಾ, ಪಾರ್ವತಿ, ರಾಜಶೇಖರ್‌, ಭಾಗ್ಯಮ್ಮ, ಮಂಜುಳಾ, ಪಾರ್ವತಿ, ಗೋಪಾಲಸ್ವಾಮಿ, ವಸಂತಕುಮಾರಿ, ಸುಂದರ್‌, ನಾಜೀರಾ ಬೇಗಂ, ಪ್ರೌಢಶಾಲೆಯ ಶಿಕ್ಷಕರಾದ ದೇವರಾಜು, ಮುರುಗ, ಧನಲಕ್ಷ್ಮೀ, ಮಹದೇವಸ್ವಾಮಿ, ಸಲ್ಮಾ ಸಿದ್ದಿಕಿ, ಮಂಜುಳಾ, ಸಾಮುವೇಲ್‌, ಬಸವರಾಜು, ಗೀತಾ ಮತ್ತು ಉತ್ತಮ ಪ್ರೌಢಶಾಲೆಗಳಾದ ಟಗರಪುರ, ವಸಂತಕುಮಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರನ್ನು ಸನ್ಮಾನಿಸಲಾಯಿತು.

ನಲಿಕಲಿ ಶಿಕ್ಷಕರಿಗೆ ಸನ್ಮಾನ: ನಲಿಕಲಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಪ್ರಶಸ್ತಿ ಪಡೆದ ಗುಂಡೇಗಾಲ, ಕೆಂಪನಪಾಳ್ಯ, ಗೊಬ್ಬಳಿಪುರ ಶಾಲೆಯ ಮುಖ್ಯ ಶಿಕ್ಷಕರಿಗೆ ಸರ್ಕಾರದಿಂದ ಬಂದಿದ್ದ 5 ಸಾವಿರ ನಗದನ್ನು ನೀಡಿ ಗೌರವಿಸಲಾಯಿತು.

ಶಾಸಕ ಎನ್‌.ಮಹೇಶ್‌ ಮಾತನಾಡಿ, 1848ರಲ್ಲಿ ಜ್ಯೋತಿ ಬಾಪುಲೆರವರು ಶಿಕ್ಷಣವನ್ನು ಜಾರಿಗೆ ತಂದರು. ಅವರ ಪತ್ನಿ ಸಾವಿತ್ರಿ ಬಾಪುಲೆ ಸರ್ವರಿಗೂ ಶಿಕ್ಷಣ ಕೊಟ್ಟರು. ಸಾವಿತ್ರಿ ಬಾಪುಲೆ ಶಿಕ್ಷಣದ ಮಹಾಕ್ರಾಂತಿಯಲ್ಲಿ ತೊಡಗಿದ್ದನ್ನು ತಡೆಗಟ್ಟಲು ಅವರಿಗೆ ಹಲವಾರು ರೀತಿಯ ಅಡೆತಡೆಗಳನ್ನು ಒಡ್ಡಿದ್ದರು. ಇದ್ಯಾವುದಕ್ಕೂ ಅಂಜದ ಅವರು ಸರ್ವರಿಗೂ ಶಿಕ್ಷಣ ದೊರಕಿಸಿಕೊಡುವಲ್ಲಿ ಯಶಸ್ವಿಯಾದರು ಎಂದರು.

ಜ್ಯೋತಿ ಬಾಪುಲೆ ಮತ್ತು ಅವರ ಪತ್ನಿ ಬಾಪುಲೆ ನಡೆದುಬಂದ ಪರಿಶ್ರಮದಿಂದ ಸಾಕ್ಷರತೆಯ ಪ್ರಮಾಣ ಶೇ.74ರಷ್ಟು ಆಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು, ಪಾಕಿಸ್ತಾನದಲ್ಲಿ ಮಲಾಲ ಯೂಸುಫ್ ಮಹಿಳೆಯರಿಗೂ ಶಿಕ್ಷಣ ಕೊಡಿಸುವ ಕ್ರಾಂತಿಯನ್ನು ಹುಟ್ಟು ಹಾಕಿದರು. ಅವರಿಗೆ ನೋಬೆಲ್‌ ಪಾರಿತೋಷಕ ಲಭ್ಯವಾಯಿತು ಎಂದು ಮಹಾತ್ಮರ ಕೊಡುಗೆಯ ಬಗ್ಗೆ ಹೇಳಿದರು.

ಜಿಪಂ ಅಧ್ಯಕ್ಷೆ ಶಿವಮ್ಮ, ತಾಪಂ ಅಧ್ಯಕ್ಷ ರಾಜೇಂದ್ರ, ಜಿಪಂ ಸದಸ್ಯ ನಾಗರಾಜು, ಸ್ಥಾಯಿ ಸಮಿತಿ ಅಧ್ಯಕ್ಷ ಅರುಣ್‌ಕುಮಾರ್‌, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್‌, ಡಿವೈಎಸ್ಪಿ ನವೀನ್‌ಕುಮಾರ್‌, ಸರ್ಕಲ್‌ ಇನ್ಸ್‌ಪೆಕ್ಟರ್‌ ಶ್ರೀಕಾಂತ್‌, ನಗರಸಭಾ ಸದಸ್ಯರಾದ ಕವಿತಾ, ಮನೋಹರ್‌, ರಾಮಕೃಷ್ಣ, ನಾಸೀರ್‌ ಷರೀಫ್, ಜಯಮೇರಿ, ತಾಪಂ ಸದಸ್ಯ ಸುರೇಶ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅದ್ಯಕ್ಷ ಬುಕಾನಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅದ್ಯಕ್ಷ ಮಹದೇವಕುಮಾರ್‌, ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಉಮಾಶಂಕರ, ಬಿಇಒ ಚಂದ್ರಪಾಟೀಲ್‌, ಬಿಆರ್‌ಸಿ ಮಂಜುಳಾ, ಅಕ್ಷರ ದಾಸೋಹ ಸಹಾಯಕ ರಂಗಸ್ವಾಮಿ, ಇತರರು ಇದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.